ಮನರಂಜನೆ

ತಮಿಳಿಗೆ ಹೊರಟ ಚೈತ್ರಾ ಆಚಾರ್‍; ಶಶಿಕುಮಾರ್‍ ಚಿತ್ರಕ್ಕೆ ನಾಯಕಿ

ಇತ್ತೀಚಿನ ದಿನಗಳಲ್ಲಿ ಕನ್ನಡದ ಹಲವು ನಟಿಯರು ಬೇರೆಬೇರೆ ಭಾಷೆಗಳತ್ತ ಮುಖ ಮಾಡುತ್ತಿದ್ದಾರೆ. ಈಗ ಆ ಸಾಲಿಗೆ ‘ಸಪ್ತ ಸಾಗರದಾಚೆ ಎಲ್ಲೋ’ , ‘ಬ್ಲಿಂಕ್‍’ ಮುಂತಾದ ಚಿತ್ರಗಳ ಖ್ಯಾತಿಯ ಚೈತ್ರಾ ಆಚಾರ್‍ ಸಹ ಒಬ್ಬರು.

ಚೈತ್ರಾ ಇದೀಗ ತಮಿಳಿಗೆ ಹೊರಟಿದ್ದಾರೆ. ತಮಿಳಿನ ಜನಪ್ರಿಯ ನಟ ಶಶಿಕುಮಾರ್‍ ಅಭಿನಯದ ಚಿತ್ರದಲ್ಲಿ ಅವರಿಗೆ ನಾಯಕಿಯಾಗಿ ಚೈತ್ರಾ ನಟಿಸುತ್ತಿದ್ದಾರೆ. ಈ ಚಿತ್ರವನ್ನು ರಾಜು ಮುರುಗನ್‍ ಎನ್ನುವವರು ನಿರ್ದೇಶನ ಮಾಡುತ್ತಿದ್ದು, ಸದ್ಯ ತಮಿಳುನಾಡಿನ ಕೋವಿಲ್‍ಪಟ್ಟಿಯಲ್ಲಿ ಚಿತ್ರೀಕರಣ ನಡೆಯುತ್ತಿದೆ. ‘2.0’, ‘ವಾಲಿಮೈ’ ಮುಂತಾದ ಚಿತ್ರಗಳ ಛಾಯಾಗ್ರಾಹಕರಾದ ನೀರವ್‍ ಶಾ ಈ ಚಿತ್ರಕ್ಕೆ ಛಾಯಾಗ್ರಹಣ ಮಾಡುತ್ತಿದ್ದಾರೆ.

ಚೈತ್ರಾ ಕನ್ನಡ ಚಿತ್ರರಂಗಕ್ಕೆ ಬಂದು ಐದು ವರ್ಷಗಳಾಗಿವೆ. ‘ಮಾಹಿರಾ’ ಚಿತ್ರದ ಮೂಲಕ ಕನ್ನಡದಲ್ಲಿ ನಟಿಯಾಗಿ ಗುರುತಿಸಿಕೊಂಡ ಅವರು, ‘ಗಿಲ್ಕಿ’, ‘ತಲೆದಂಡ’, ‘ಟೋಬಿ’, ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’, ‘ಬ್ಲಿಂಕ್‍’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗಷ್ಟೇ ಚೈತ್ರಾ ಅಭಿನಯದ ‘ಹ್ಯಾಪಿ ಬರ್ಥ್‍ಡೇ ಟು ಮಿ’ ಎಂಬ ಚಿತ್ರವು ನೇರವಾಗಿ ಓಟಿಟಿಯಲ್ಲಿ ಬಿಡುಗಡೆಯಾಗಿದೆ.

ಇದಲ್ಲದೆ, ಶಿವರಾಜಕುಮಾರ್ ಮತ್ತು ಧನಂಜಯ್‍ ಅಭಿನಯದ ‘ಉತ್ತರಕಾಂಡ’, ರಾಜ್‍ ಬಿ ಶೆಟ್ಟಿ ಅಭಿನಯದ ‘ರೂಪಾಂತರ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಈ ಮಧ್ಯೆ, ಅವರಿಗೆ ತೆಲುಗು ಮತ್ತು ತಮಿಳಿನಿಂದ ಹೆಚ್ಚುಹೆಚ್ಚು ಅವಕಾಶಗಳು ಬರುತ್ತಿವೆಯಂತೆ. ಆದರೆ, ಪಾತ್ರಗಳ ವಿಷಯದಲ್ಲಿ ಚ್ಯೂಸಿಯಾಗಿರುವ ಚೈತ್ರಾ, ಶಶಿಕುಮಾರ್‍ ಅಭಿನಯದ ಚಿತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರ. ಮುಂದಿನ ದಿನಗಳಲ್ಲಿ ನೋಡಿಕೊಂಡು ಇನ್ನಷ್ಟು ಒಳ್ಳೆಯ ಚಿತ್ರದ ಭಾಗವಾಗುವ ಆಸೆಯನ್ನು ಅವರು ವ್ಯಕ್ತಪಡಿಸಿದ್ದಾರೆ.

ನಟನೆಯ ಜೊತೆಗೆ ಒಳ್ಳೆಯ ಗಾಯಕಿಯಾಗಿಯೂ ಗುರುತಿಸಿಕೊಂಡಿರುವ ಚೈತ್ರಾ, ‘ಸಾರ್ವಜನಿಕರಿಗೆ ಸುವರ್ಣಾವಕಾಶ’, ‘ಮಾಯಬಜಾರ್‍ 2016’, ‘ಗರುಡ ಗಮನ ಋಷಭ ವಾಹನ’, ‘ಟಗರು ಪಲ್ಯ’ ಮುಂತಾದ ಚಿತ್ರಗಳಿಗೆ ಹಾಡಿದ್ದು, ಇತ್ತೀಚೆಗೆ ‘ರೂಪಾಂತರ’ ಚಿತ್ರಕ್ಕೆ ಹಾಡಿರುವ ‘ಕಿತ್ತಾಳೆ’ ಹಾಡು ಸಾಕಷ್ಟು ಜನಪ್ರಿಯವಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

58 mins ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

2 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

2 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

3 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

7 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

10 hours ago