ಇತ್ತೀಚಿನ ದಿನಗಳಲ್ಲಿ ಕನ್ನಡದ ಹಲವು ನಟಿಯರು ಬೇರೆಬೇರೆ ಭಾಷೆಗಳತ್ತ ಮುಖ ಮಾಡುತ್ತಿದ್ದಾರೆ. ಈಗ ಆ ಸಾಲಿಗೆ ‘ಸಪ್ತ ಸಾಗರದಾಚೆ ಎಲ್ಲೋ’ , ‘ಬ್ಲಿಂಕ್’ ಮುಂತಾದ ಚಿತ್ರಗಳ ಖ್ಯಾತಿಯ ಚೈತ್ರಾ ಆಚಾರ್ ಸಹ ಒಬ್ಬರು.
ಚೈತ್ರಾ ಇದೀಗ ತಮಿಳಿಗೆ ಹೊರಟಿದ್ದಾರೆ. ತಮಿಳಿನ ಜನಪ್ರಿಯ ನಟ ಶಶಿಕುಮಾರ್ ಅಭಿನಯದ ಚಿತ್ರದಲ್ಲಿ ಅವರಿಗೆ ನಾಯಕಿಯಾಗಿ ಚೈತ್ರಾ ನಟಿಸುತ್ತಿದ್ದಾರೆ. ಈ ಚಿತ್ರವನ್ನು ರಾಜು ಮುರುಗನ್ ಎನ್ನುವವರು ನಿರ್ದೇಶನ ಮಾಡುತ್ತಿದ್ದು, ಸದ್ಯ ತಮಿಳುನಾಡಿನ ಕೋವಿಲ್ಪಟ್ಟಿಯಲ್ಲಿ ಚಿತ್ರೀಕರಣ ನಡೆಯುತ್ತಿದೆ. ‘2.0’, ‘ವಾಲಿಮೈ’ ಮುಂತಾದ ಚಿತ್ರಗಳ ಛಾಯಾಗ್ರಾಹಕರಾದ ನೀರವ್ ಶಾ ಈ ಚಿತ್ರಕ್ಕೆ ಛಾಯಾಗ್ರಹಣ ಮಾಡುತ್ತಿದ್ದಾರೆ.
ಚೈತ್ರಾ ಕನ್ನಡ ಚಿತ್ರರಂಗಕ್ಕೆ ಬಂದು ಐದು ವರ್ಷಗಳಾಗಿವೆ. ‘ಮಾಹಿರಾ’ ಚಿತ್ರದ ಮೂಲಕ ಕನ್ನಡದಲ್ಲಿ ನಟಿಯಾಗಿ ಗುರುತಿಸಿಕೊಂಡ ಅವರು, ‘ಗಿಲ್ಕಿ’, ‘ತಲೆದಂಡ’, ‘ಟೋಬಿ’, ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ’, ‘ಬ್ಲಿಂಕ್’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗಷ್ಟೇ ಚೈತ್ರಾ ಅಭಿನಯದ ‘ಹ್ಯಾಪಿ ಬರ್ಥ್ಡೇ ಟು ಮಿ’ ಎಂಬ ಚಿತ್ರವು ನೇರವಾಗಿ ಓಟಿಟಿಯಲ್ಲಿ ಬಿಡುಗಡೆಯಾಗಿದೆ.
ಇದಲ್ಲದೆ, ಶಿವರಾಜಕುಮಾರ್ ಮತ್ತು ಧನಂಜಯ್ ಅಭಿನಯದ ‘ಉತ್ತರಕಾಂಡ’, ರಾಜ್ ಬಿ ಶೆಟ್ಟಿ ಅಭಿನಯದ ‘ರೂಪಾಂತರ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಈ ಮಧ್ಯೆ, ಅವರಿಗೆ ತೆಲುಗು ಮತ್ತು ತಮಿಳಿನಿಂದ ಹೆಚ್ಚುಹೆಚ್ಚು ಅವಕಾಶಗಳು ಬರುತ್ತಿವೆಯಂತೆ. ಆದರೆ, ಪಾತ್ರಗಳ ವಿಷಯದಲ್ಲಿ ಚ್ಯೂಸಿಯಾಗಿರುವ ಚೈತ್ರಾ, ಶಶಿಕುಮಾರ್ ಅಭಿನಯದ ಚಿತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರ. ಮುಂದಿನ ದಿನಗಳಲ್ಲಿ ನೋಡಿಕೊಂಡು ಇನ್ನಷ್ಟು ಒಳ್ಳೆಯ ಚಿತ್ರದ ಭಾಗವಾಗುವ ಆಸೆಯನ್ನು ಅವರು ವ್ಯಕ್ತಪಡಿಸಿದ್ದಾರೆ.
ನಟನೆಯ ಜೊತೆಗೆ ಒಳ್ಳೆಯ ಗಾಯಕಿಯಾಗಿಯೂ ಗುರುತಿಸಿಕೊಂಡಿರುವ ಚೈತ್ರಾ, ‘ಸಾರ್ವಜನಿಕರಿಗೆ ಸುವರ್ಣಾವಕಾಶ’, ‘ಮಾಯಬಜಾರ್ 2016’, ‘ಗರುಡ ಗಮನ ಋಷಭ ವಾಹನ’, ‘ಟಗರು ಪಲ್ಯ’ ಮುಂತಾದ ಚಿತ್ರಗಳಿಗೆ ಹಾಡಿದ್ದು, ಇತ್ತೀಚೆಗೆ ‘ರೂಪಾಂತರ’ ಚಿತ್ರಕ್ಕೆ ಹಾಡಿರುವ ‘ಕಿತ್ತಾಳೆ’ ಹಾಡು ಸಾಕಷ್ಟು ಜನಪ್ರಿಯವಾಗಿದೆ.
ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…
ಬೆಂಗಳೂರು: ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…
ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…
ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…
ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…
ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…