ಮನರಂಜನೆ

ಇದು ಹಾಲಿವುಡ್‍ ಶೈಲಿಯ ಕನ್ನಡ ಚಿತ್ರವಂತೆ; ‘ಗ್ರೀನ್’ ಟೀಸರ್‌ ಬಿಡುಗಡೆ

ನಟ ಗೋಪಾಲಕೃಷ್ಣ ದೇಶಪಾಂಡೆ, ‘ಗ್ರೀನ್’ ಒಂದು ಮನೋವೈಜ್ಞಾನಿಕ ಥ್ರಿಲ್ಲರ್ ಚಿತ್ರದಲ್ಲಿ ನಟಿಸಿದ್ದು, ಆ ಚಿತ್ರವು ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂಬ ಸುದ್ದಿಯೊಂದು ಇತ್ತೀಚೆಗೆ ಕೇಳಿ ಬಂದಿತ್ತು. ತನ್ನ ಇಡೀ ಜೀವನವನ್ನೇ ನಿಯಂತ್ರಿಸುತ್ತಿರುವ ತನ್ನೊಳಗಿನ ರಾಕ್ಷಸನಿಂದ ಹೊರಬರಲು ಹೊರಡುವ ಕಥೆ ಇರುವ ಚಿತ್ರದ ಟೀಸರ್‍ ಇತ್ತೀಚೆಗೆ ಬಿಡುಗಡೆ ಆಗಿದೆ.

ರಾಜ್ ವಿಜಯ್ ಹಾಗೂ ಬಿ.ಎನ್. ಸ್ವಾಮಿ ನಿರ್ಮಾಣದ ಹಾಗೂ ರಾಜ್ ವಿಜಯ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ‘ಗ್ರೀನ್‍’ ಚಿತ್ರದಲ್ಲಿ ಬಾಲಾಜಿ ಮನೋಹರ್, ಗೋಪಾಲಕೃಷ್ಣ ದೇಶಪಾಂಡೆ, ಆರ್.ಜೆ.ವಿಕ್ಕಿ, ಶಿವ ಮಂಜು, ವಿಶ್ವನಾಥ್, ಡಿಂಪಿ ಫಾದ್ಯ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಇದು ಕನ್ನಡದ ಹೆಮ್ಮೆಯ ಚಿತ್ರವಾಗಲಿದೆ ಎನ್ನುವ ನಿರ್ದೇಶಕ ರಾಜ್‍ ವಿಜಯ್‍, ‘ಇದೊಂದು ಸೈಕಾಲಜಿಕಲ್ ಮೈಂಡ್ ಬೆಂಡಿಂಗ್ ಥ್ರಿಲ್ಲರ್ ಚಿತ್ರ. ತನ್ನ ಇಡೀ ಜೀವನವನ್ನೇ ನಿಯಂತ್ರಿಸುತ್ತಿರುವ ತನ್ನೊಳಗಿನ ರಾಕ್ಷಸನಿಂದ ಹೊರಬರಲು ಹೋರಾಟದ ಕಥೆಯೇ ‘ಗ್ರೀನ್’. ಇದೊಂದು ಕಾಡಿನಲ್ಲಿ ನಡೆಯುವ ಕಥೆಯಾಗಿದ್ದು, ಯೋಚನೆಗೆ ಹಚ್ಚುವ ಸಿನಿಮಾ ಆಗಲಿದೆ. ಚಿತ್ರದಲ್ಲಿ ಓಪನ್‍ ಕ್ಲೈಮ್ಯಾಕ್ಸ್ ಇದ್ದು, ಪ್ರತಿಯೊಬ್ಬರೂ ಒಂದೊಂದು ರೀತಿಯಲ್ಲಿ ಚಿತ್ರವನ್ನು ಅರ್ಥೈಸಬಹುದು. ಈ ಚಿತ್ರದ ಟ್ರೇಲರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಆ ಟ್ರೇಲರ್‍ನಲ್ಲಿ ಚಿತ್ರದ ಸಂಪೂರ್ಣ ಕಥೆ ಗೊತ್ತಾಗಲಿದೆ’ ಎಂದರು.

‘ಗ್ರೀನ್‍’ ಚಿತ್ರವು ಈಗಾಗಲೇ ಕಾನ್ಸ್ ವರ್ಲ್ಡ್ ಫಿಲಂ ಫೆಸ್ಟಿವಲ್‍ನಲ್ಲಿ ಅತ್ಯುತ್ತಮ ಭಾರತೀಯ ಚಿತ್ರ ಮತ್ತು ಭವಿಷ್ಯದ ನಿರ್ದೇಶಕ ಪ್ರಶಸ್ತಿ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಾಣುವುದರ ಜೊತೆಗೆ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ‘ವಿದೇಶಿಗರು ಮೆಚ್ಚಿಕೊಂಡಿರುವ ನಮ್ಮ ಚಿತ್ರವನ್ನು ಕನ್ನಡಿಗರು ಮೆಚ್ಚಿಕೊಳ್ಳುವ ಭರವಸೆ ಇದೆ. ಹಾಲಿವುಡ್‍ ಶೈಲಿಯಲ್ಲಿ ಈ ಚಿತ್ರ ಮೂಡಿಬಂದಿದೆ. ಭಾಷೆಯನ್ನು ಹೊರತುಪಡಿಸಿದರೆ, ಚಿತ್ರವು ಹಾಲಿವುಡ್‍ ಚಿತ್ರಗಳಿಗೆ ಹೋಲಿಸಬಹುದು’ ಎಂದರು.

ಗೋಪಾಲಕೃಷ್ಣ ದೇಶಪಾಂಡೆ ಇದುವರೆಗೂ ಮಾಡಿರದ ಒಂದು ಪಾತ್ರವನ್ನು ಈ ಚಿತ್ರದಲ್ಲಿ ನಿರ್ವಹಿಸಿದ್ದಾರಂತೆ. ‘ಕನ್ನಡದಲ್ಲಿ ತೀರ ಅಪರೂಪದ ಕಥೆ ಇದು. ನಾನು ನಿರ್ವಹಿಸಿದ್ದೇನೆ. ಈ ಚಿತ್ರದಲ್ಲಿ ನನ್ನ ಪಾತ್ರದ ಹೆಸರು ಮಾಯಣ್ಣ. ಚಿತ್ರೀಕರಣದಲ್ಲಿ ಭಾಗವಹಿಸಿ ಎರಡು ಶಾಟ್‍ ಮುಗಿದ ಮೇಲೆ ನಿರ್ದೇಶಕರಿಗೆ ಸಂಪೂರ್ಣವಾಗಿ ಒಪ್ಪಿಸಿಕೊಂಡು ಬಿಟ್ಟೆ. ನೀವು ಹೇಗೆ ಹೇಳುತ್ತೀರೋ ಹಾಗೆ ಮಾಡುತ್ತೇನೆ ಎಂದು ಅವರು ಹೇಳಿದ್ದಷ್ಟನ್ನು ಮಾಡಿದ್ದೇನೆ’ ಎಂದರು.

‘ಗ್ರೀನ್‍’ ಚಿತ್ರಕ್ಕೆ ಮಧುಸೂದನ್‍ ಛಾಯಾಗ್ರಹಣ ಮತ್ತು ಶಕ್ತಿ ಸ್ಯಾಕ್‍ ಸಂಗೀತ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ಗಲ್ಲಾಪೆಟ್ಟಿಗೆಯಲ್ಲಿ ಧುರಂಧರ್-‌2 ಅಬ್ಬರ: 800 ಕೋಟಿ ಕ್ಲಬ್‌ ಸೇರುವತ್ತ ಓಟ

ಯಶಸ್ವಿ ಪ್ರದರ್ಶನದೊಂದಿಗೆ ಮುನ್ನುಗ್ಗುತ್ತಿರುವ ರಣವೀರ್‌ ಸಿಂಗ್‌ ಅಭಿನಯದ ಧುರಂಧರ್-‌2 ದಾಖಲೆಗಳನ್ನು ಮುರಿಯುತ್ತಿದೆ. ನಾಲ್ಕು ದಿನಗಳ ಹಿಂದೆ ಬಿಡುಗಡೆಯಾದ ಚಿತ್ರವು ಬಾಕ್ಸಾಫೀಸ್‌ನಲ್ಲಿ…

20 mins ago

ಅಮೇರಿಕಾದ ಜೊತೆ ಶಾಂತಿ ಮಾತುಕತೆಗೆ ಒಪ್ಪಿಕೊಂಡ ಮೊಜ್ತಬಾ ಖಮೇನಿ?

ವಾಷಿಂಗ್ಟನ್:‌ ಅಮೇರಿಕಾದ ಜೊತೆ ಮಾತುಕತೆ ನಡೆಸಲು ಇರಾನಿನ ಹೊಸ ಸರ್ವೋಚ್ಛ ನಾಯಕ ಮೊಜ್ತಬಾ ಖಮೇನಿ ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.…

42 mins ago

ಪಶು ವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ: ಸಚಿವ ಈಶ್ವರ್‌ ಖಂಡ್ರೆ ಭರವಸೆ

ಬೆಂಗಳೂರು: ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಮೃತಪಟ್ಟ ಯುವ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ ದೊರಕಿಸಲಾಗುವುದು ಎಂದು…

53 mins ago

ವಯನಾಡು ಕ್ಷೇತ್ರಕ್ಕೆ 10 ಕೋಟಿ ಅನುದಾನ: ಸರ್ಕಾರದ ವಿರುದ್ಧ ಆರ್.‌ಅಶೋಕ್‌ ಕಿಡಿ

ಬೆಂಗಳೂರು: ರಾಜ್ಯದ ಹಣಕಾಸು ಪರಿಸ್ಥಿತಿ ಇಷ್ಟು ಚಿಂತಾಜನಕವಾಗಿರುವಾಗ ಹೈಕಮಾಂಡ್ ನಾಯಕರನ್ನು ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ನೆರೆ ರಾಜ್ಯಕ್ಕೆ 10 ಕೋಟಿ…

1 hour ago

ಮತಾಂತರಗೊಂಡರೆ ಎಸ್‌.ಸಿ ಸ್ಥಾನಮಾನ ರದ್ದು: ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು

ನವದೆಹಲಿ: ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಗಳಿಗೆ ಸೇರಿದ ವ್ಯಕ್ತಿಗಳು ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಪಡೆಯಬಹುದು. ಕ್ರಿಶ್ಚಿಯನ್ ಧರ್ಮದಂತಹ…

1 hour ago

ಬಂಡೀಪುರದಲ್ಲಿ ಏಪ್ರಿಲ್.1ರಿಂದ ಅರಣ್ಯ ಸಿಬ್ಬಂದಿ ಮುಷ್ಕರ: ಕಾರಣ ಇಷ್ಟೇ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಏಪ್ರಿಲ್.‌1ರಿಂದ ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಕುರಿತು ದಿನಗೂಲಿ…

3 hours ago