ಬೆಂಗಳೂರು: ಇತ್ತೀಚೆಗೆ ಕನ್ನಡ ಚಿತ್ರರಂಗ ಬಹಳ ಸಂಕಷ್ಟಕ್ಕೆ ಸಿಲುಕುತ್ತಿರುವ ಹಿನ್ನೆಲೆಯಲ್ಲಿ ಇಂದು ಕಲಾವಿದರ ಸಂಘ ವಿಶೇಷ ಹೋಮ-ಹವನ ನಡೆಸಿದೆ.
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಚಿತ್ರರಂಗದ ಏಳಿಗೆಗಾಗಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಪೂಜೆಯಲ್ಲಿ ಹಿರಿಯ ನಟಿ ಶಾಂತಲಾ, ಮಾಲತಿಶ್ರೀ ಮೈಸೂರು, ಪದ್ಮಜಾ ರಾವ್ ಸೇರಿದಂತೆ ಮೊದಲಾದವರು ದೀಪ ಬೆಳಗಿ ಚಾಲನೆ ನೀಡಿದರು.
ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ಹಿರಿಯ ನಟ ದೊಡ್ಡಣ್ಣ ನೇತೃತ್ವದಲ್ಲಿ ಪೂಜೆ ಹೋಮ-ಹವನ ನಡೆದಿದೆ. ಗಣಪತಿ ಹೋಮ, ಮೃತ್ಯುಂಜಯ ಹೋಮ ಸೇರಿದಂತೆ ಹಲವಾರು ಪೂಜೆಗಳನ್ನು ನೆರವೇರಿಸಲಾಗಿದೆ.
ಇಂದು ನಡೆದ ವಿಶೇಷ ಪೂಜೆಯಲ್ಲಿ ನಟ-ನಟಿಯರು ಸೇರಿದಂತೆ 600 ಮಂದಿ ಭಾಗಿಯಾಗಿದ್ದು, ಮುಂದಿನ ದಿನಗಳಲ್ಲಿ ಕನ್ನಡ ಚಿತ್ರರಂಗಕ್ಕೆ ಯಾವುದೇ ಸಮಸ್ಯೆ ಆಗದಿರಲಿ ಎಂದು ಪ್ರಾರ್ಥನೆ ಸಲ್ಲಿಸಲಾಯಿತು.
ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದ್ದರು ಎಂಬ…
ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…
ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…
ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…
ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ…
ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…