ಬೆಂಗಳೂರು: ಇತ್ತೀಚೆಗೆ ಕನ್ನಡ ಚಿತ್ರರಂಗ ಬಹಳ ಸಂಕಷ್ಟಕ್ಕೆ ಸಿಲುಕುತ್ತಿರುವ ಹಿನ್ನೆಲೆಯಲ್ಲಿ ಇಂದು ಕಲಾವಿದರ ಸಂಘ ವಿಶೇಷ ಹೋಮ-ಹವನ ನಡೆಸಿದೆ.
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಚಿತ್ರರಂಗದ ಏಳಿಗೆಗಾಗಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಪೂಜೆಯಲ್ಲಿ ಹಿರಿಯ ನಟಿ ಶಾಂತಲಾ, ಮಾಲತಿಶ್ರೀ ಮೈಸೂರು, ಪದ್ಮಜಾ ರಾವ್ ಸೇರಿದಂತೆ ಮೊದಲಾದವರು ದೀಪ ಬೆಳಗಿ ಚಾಲನೆ ನೀಡಿದರು.
ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ಹಿರಿಯ ನಟ ದೊಡ್ಡಣ್ಣ ನೇತೃತ್ವದಲ್ಲಿ ಪೂಜೆ ಹೋಮ-ಹವನ ನಡೆದಿದೆ. ಗಣಪತಿ ಹೋಮ, ಮೃತ್ಯುಂಜಯ ಹೋಮ ಸೇರಿದಂತೆ ಹಲವಾರು ಪೂಜೆಗಳನ್ನು ನೆರವೇರಿಸಲಾಗಿದೆ.
ಇಂದು ನಡೆದ ವಿಶೇಷ ಪೂಜೆಯಲ್ಲಿ ನಟ-ನಟಿಯರು ಸೇರಿದಂತೆ 600 ಮಂದಿ ಭಾಗಿಯಾಗಿದ್ದು, ಮುಂದಿನ ದಿನಗಳಲ್ಲಿ ಕನ್ನಡ ಚಿತ್ರರಂಗಕ್ಕೆ ಯಾವುದೇ ಸಮಸ್ಯೆ ಆಗದಿರಲಿ ಎಂದು ಪ್ರಾರ್ಥನೆ ಸಲ್ಲಿಸಲಾಯಿತು.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…