ಬೆಂಗಳೂರು: ಇತ್ತೀಚೆಗೆ ಕನ್ನಡ ಚಿತ್ರರಂಗ ಬಹಳ ಸಂಕಷ್ಟಕ್ಕೆ ಸಿಲುಕುತ್ತಿರುವ ಹಿನ್ನೆಲೆಯಲ್ಲಿ ಇಂದು ಕಲಾವಿದರ ಸಂಘ ವಿಶೇಷ ಹೋಮ-ಹವನ ನಡೆಸಿದೆ.
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಚಿತ್ರರಂಗದ ಏಳಿಗೆಗಾಗಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಪೂಜೆಯಲ್ಲಿ ಹಿರಿಯ ನಟಿ ಶಾಂತಲಾ, ಮಾಲತಿಶ್ರೀ ಮೈಸೂರು, ಪದ್ಮಜಾ ರಾವ್ ಸೇರಿದಂತೆ ಮೊದಲಾದವರು ದೀಪ ಬೆಳಗಿ ಚಾಲನೆ ನೀಡಿದರು.
ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ಹಿರಿಯ ನಟ ದೊಡ್ಡಣ್ಣ ನೇತೃತ್ವದಲ್ಲಿ ಪೂಜೆ ಹೋಮ-ಹವನ ನಡೆದಿದೆ. ಗಣಪತಿ ಹೋಮ, ಮೃತ್ಯುಂಜಯ ಹೋಮ ಸೇರಿದಂತೆ ಹಲವಾರು ಪೂಜೆಗಳನ್ನು ನೆರವೇರಿಸಲಾಗಿದೆ.
ಇಂದು ನಡೆದ ವಿಶೇಷ ಪೂಜೆಯಲ್ಲಿ ನಟ-ನಟಿಯರು ಸೇರಿದಂತೆ 600 ಮಂದಿ ಭಾಗಿಯಾಗಿದ್ದು, ಮುಂದಿನ ದಿನಗಳಲ್ಲಿ ಕನ್ನಡ ಚಿತ್ರರಂಗಕ್ಕೆ ಯಾವುದೇ ಸಮಸ್ಯೆ ಆಗದಿರಲಿ ಎಂದು ಪ್ರಾರ್ಥನೆ ಸಲ್ಲಿಸಲಾಯಿತು.
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…