ಕನ್ನಡದ ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆಯ ವೆಂಕಟ್ ಕೆ. ನಾರಾಯಣ್, ಸದ್ಯ ಧ್ರುವ ಸರ್ಜಾ ಅಭಿನಯದ ‘ಕೆಡಿ – ದಿ ಡೆವಿಲ್’ ಮತ್ತು ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ. ಇವೆರಡೂ ಚಿತ್ರಗಳು ಪ್ಯಾನ್ ಇಂಡಿಯಾ ಚಿತ್ರಗಳಾಗಿದ್ದು, ಈ ಮಧ್ಯೆ, ಅವರು ತಮಿಳಿಗೆ ಕಾಲಿಟ್ಟಿದ್ದು, ತಮಿಳಿನಲ್ಲಿ ದೊಡ್ಡ ಬಜೆಟ್ನ ಚಿತ್ರವೊಮದನ್ನು ನಿರ್ಮಿಸುವುದಕ್ಕೆ ಸಜ್ಜಾಗುತ್ತಿದ್ದಾರೆ.
‘ಇಳಯದಳಪತಿ’ ವಿಜಯ್ ಅಭಿನಯದ 69ನೇ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆಯು ನಿರ್ಮಿಸುತ್ತಿದೆ ಎಂಬ ವಿಷಯ ಕೆಲವು ದಿನಗಳಿಂದ ಕೇಳಿಬರುತ್ತಿತ್ತು. ಅದಕ್ಕೆ ಸರಿಯಾಗಿ, ಶುಕ್ರವಾರ ಸಂಜೆ ಸೋಷಿಯಲ್ ಮೀಡಿಯಾದಲ್ಲಿ ವಿಜಯ್ ಚಿತ್ರವನ್ನು ನಿರ್ಮಿಸುತ್ತಿರುವುದಾಗಿ ಕೆವಿಎನ್ ಅಧಿಕೃತವಾಗಿ ಘೋಷಿಸಿತ್ತು. ಈ ಸಂಬಂಧ ಒಂದು ವೀಡಿಯೋ ಸಹ ಬಿಡುಗಡೆ ಮಾಡಿದ್ದ ಸಂಸ್ಥೆಯು, ಇನ್ನಷ್ಟು ಮಾಹಿತಿಯನ್ನು ಶನಿವಾರ ಸಂಜೆ ಬಿಡುಗಡೆ ಮಾಡುವುದಾಗಿ ಘೋಷಿಸಿತ್ತು. ಅದರಂತೆ ಇಂದು ಸಂಜೆ ವಿಜಯ್ 69 ಚಿತ್ರವನ್ನು ನಿರ್ಮಿಸುತ್ತಿರುವುದಾಗಿ ಹೇಳಿಕೊಂಡಿದೆ.
ಈ ಹೆಸರಿಡದ ಚಿತ್ರವನ್ನು ಎಚ್. ವಿನೋದ್ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ವಿನೋದ್, ಅಜಿತ್ ಅಭಿನಯದ ‘ತುನಿವು’, ‘ವಲಿಮೈ’ ಮತ್ತು ‘ನೇರ್ಕೊಂಡ ಪಾರ್ವೈ’ ಚಿತ್ರಗಳನ್ನು ನಿರ್ಮಿಸಿದ್ದರು. ಈಗ ವಿಜಯ್ ಅಭಿನಯದ ಚಿತ್ರವನ್ನು ಅವರು ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ.
500 ಕೋಟಿಗೂ ಅಧಿಕ ಬಜೆಟ್ ನಲ್ಲಿ ಈ ಚಿತ್ರ ತಯಾರಾಗುತ್ತಿದ್ದು, ವಿಜಯ್ ವಿಜಯ್ ಚಿತ್ರಬದುಕಿನ ಕೊನೆಯ ಚಿತ್ರವಾಗಲಿದೆ ಎಂದು ಹೇಳಲಾಗುತ್ತಿದೆ. ವಿಜಯ್ ಈಗಾಗಲೇ ರಾಜಕೀಯ ಪಕ್ಷವೊಂದನ್ನು ಸ್ಥಾಪಿಸಿದ್ದು, ಈ ಚಿತ್ರದ ನಂತರ ಪೂರ್ಣಪ್ರಮಾಣದಲ್ಲಿ ರಾಜಕೀಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಅದಕ್ಕೂ ಮೊದಲು ಈ ಚಿತ್ರದಲ್ಲಿ ಅವರು ನಟಿಸಲಿದ್ದಾರಂತೆ. ವಿಜಯ್ ರಾಜಕೀಯ ಜೀವನಕ್ಕೆ ಹತ್ತಿರವಿರೋ ಕಥೆ ಈ ಚಿತ್ರದಲ್ಲಿದ್ದು, ವಿಜಯ್ ರಾಜಕೀಯ ಭವಿಷ್ಯಕ್ಕೆ ಈ ಚಿತ್ರ ಭವ್ಯ ಮೆಟ್ಟಿಲಾಗಲಿದೆ ಎಂಬ ಸುದ್ದಿ ಇದೆ.
ಈ ಚಿತ್ರ ಸದ್ಯದಲ್ಲೇ ಪ್ರಾರಂಭವಾಗಲಿದ್ದು, ಈ ಚಿತ್ರಕ್ಕೆ ವಿಜಯ್ಗೆ 275 ಕೋಟಿ ರೂ. ಸಂಭಾವನೆ ಕೊಡಲಾಗುತ್ತಿದೆ ಎಂಬ ಗುಸುಗುಸು ಕೇಳಿಬರುತ್ತಿದೆ.
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…
ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…
ಕಾಂಗ್ರೆಸ್ ಮಾಡುವ ಪಾಪಕ್ಕೆ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಬೇಕಾಗುತ್ತದೆ ದೊಡ್ಡಬಳ್ಳಾಪುರ: ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ ಸೃಷ್ಟಿಯಾಗಿದ್ದು, ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ…