ಮನರಂಜನೆ

ತಮಿಳು ಚಿತ್ರರಂಗಕ್ಕೆ ಕಾಲಿಟ್ಟ ಕನ್ನಡದ ಕೆವಿಎನ್ ಪ್ರೊಡಕ್ಷನ್ಸ್ …

ಕನ್ನಡದ ಕೆವಿಎನ್‍ ಪ್ರೊಡಕ್ಷನ್ಸ್ ಸಂಸ್ಥೆಯ ವೆಂಕಟ್ ‍ಕೆ. ನಾರಾಯಣ್‍, ಸದ್ಯ ಧ್ರುವ ಸರ್ಜಾ ಅಭಿನಯದ ‘ಕೆಡಿ – ದಿ ಡೆವಿಲ್‍’ ಮತ್ತು ಯಶ್‍ ಅಭಿನಯದ ‘ಟಾಕ್ಸಿಕ್‍’ ಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ. ಇವೆರಡೂ ಚಿತ್ರಗಳು ಪ್ಯಾನ್‍ ಇಂಡಿಯಾ ಚಿತ್ರಗಳಾಗಿದ್ದು, ಈ ಮಧ್ಯೆ, ಅವರು ತಮಿಳಿಗೆ ಕಾಲಿಟ್ಟಿದ್ದು, ತಮಿಳಿನಲ್ಲಿ ದೊಡ್ಡ ಬಜೆಟ್‍ನ ಚಿತ್ರವೊಮದನ್ನು ನಿರ್ಮಿಸುವುದಕ್ಕೆ ಸಜ್ಜಾಗುತ್ತಿದ್ದಾರೆ.

‘ಇಳಯದಳಪತಿ’ ವಿಜಯ್‍ ಅಭಿನಯದ 69ನೇ ಚಿತ್ರವನ್ನು ಕೆವಿಎನ್‍ ಪ್ರೊಡಕ್ಷನ್ಸ್ ಸಂಸ್ಥೆಯು ನಿರ್ಮಿಸುತ್ತಿದೆ ಎಂಬ ವಿಷಯ ಕೆಲವು ದಿನಗಳಿಂದ ಕೇಳಿಬರುತ್ತಿತ್ತು. ಅದಕ್ಕೆ ಸರಿಯಾಗಿ, ಶುಕ್ರವಾರ ಸಂಜೆ ಸೋಷಿಯಲ್‍ ಮೀಡಿಯಾದಲ್ಲಿ ವಿಜಯ್‍ ಚಿತ್ರವನ್ನು ನಿರ್ಮಿಸುತ್ತಿರುವುದಾಗಿ ಕೆವಿಎನ್‍ ಅಧಿಕೃತವಾಗಿ ಘೋಷಿಸಿತ್ತು. ಈ ಸಂಬಂಧ ಒಂದು ವೀಡಿಯೋ ಸಹ ಬಿಡುಗಡೆ ಮಾಡಿದ್ದ ಸಂಸ್ಥೆಯು, ಇನ್ನಷ್ಟು ಮಾಹಿತಿಯನ್ನು ಶನಿವಾರ ಸಂಜೆ ಬಿಡುಗಡೆ ಮಾಡುವುದಾಗಿ ಘೋಷಿಸಿತ್ತು. ಅದರಂತೆ ಇಂದು ಸಂಜೆ ವಿಜಯ್‍ 69 ಚಿತ್ರವನ್ನು ನಿರ್ಮಿಸುತ್ತಿರುವುದಾಗಿ ಹೇಳಿಕೊಂಡಿದೆ.

ಈ ಹೆಸರಿಡದ ಚಿತ್ರವನ್ನು ಎಚ್‍. ವಿನೋದ್‍ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ವಿನೋದ್‍, ಅಜಿತ್‍ ಅಭಿನಯದ ‘ತುನಿವು’, ‘ವಲಿಮೈ’ ಮತ್ತು ‘ನೇರ್ಕೊಂಡ ಪಾರ್ವೈ’ ಚಿತ್ರಗಳನ್ನು ನಿರ್ಮಿಸಿದ್ದರು. ಈಗ ವಿಜಯ್ ಅಭಿನಯದ ಚಿತ್ರವನ್ನು ಅವರು ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ.

500 ಕೋಟಿಗೂ ಅಧಿಕ ಬಜೆಟ್ ನಲ್ಲಿ ಈ ಚಿತ್ರ ತಯಾರಾಗುತ್ತಿದ್ದು, ವಿಜಯ್ ವಿಜಯ್ ಚಿತ್ರಬದುಕಿನ ಕೊನೆಯ ಚಿತ್ರವಾಗಲಿದೆ ಎಂದು ಹೇಳಲಾಗುತ್ತಿದೆ. ವಿಜಯ್‍ ಈಗಾಗಲೇ ರಾಜಕೀಯ ಪಕ್ಷವೊಂದನ್ನು ಸ್ಥಾಪಿಸಿದ್ದು, ಈ ಚಿತ್ರದ ನಂತರ ಪೂರ್ಣಪ್ರಮಾಣದಲ್ಲಿ ರಾಜಕೀಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಅದಕ್ಕೂ ಮೊದಲು ಈ ಚಿತ್ರದಲ್ಲಿ ಅವರು ನಟಿಸಲಿದ್ದಾರಂತೆ. ವಿಜಯ್ ರಾಜಕೀಯ ಜೀವನಕ್ಕೆ ಹತ್ತಿರವಿರೋ ಕಥೆ ಈ ಚಿತ್ರದಲ್ಲಿದ್ದು, ವಿಜಯ್ ರಾಜಕೀಯ ಭವಿಷ್ಯಕ್ಕೆ ಈ ಚಿತ್ರ ಭವ್ಯ ಮೆಟ್ಟಿಲಾಗಲಿದೆ ಎಂಬ ಸುದ್ದಿ ಇದೆ.

ಈ ಚಿತ್ರ ಸದ್ಯದಲ್ಲೇ ಪ್ರಾರಂಭವಾಗಲಿದ್ದು, ಈ ಚಿತ್ರಕ್ಕೆ ವಿಜಯ್‍ಗೆ 275 ಕೋಟಿ ರೂ. ಸಂಭಾವನೆ ಕೊಡಲಾಗುತ್ತಿದೆ ಎಂಬ ಗುಸುಗುಸು ಕೇಳಿಬರುತ್ತಿದೆ.

ಭೂಮಿಕಾ

Recent Posts

ಚಿತ್ರದುರ್ಗದಲ್ಲಿ ಭೀಕರ ಬಸ್‌ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10ಕ್ಕೂ…

2 mins ago

ಭೀಕರ ರಸ್ತೆ ದುರಂತ: ಬಸ್‌ಗೆ ಬೆಂಕಿ ತಗುಲಿ 20ಕ್ಕೂ ಹೆಚ್ಚು ಮಂದಿ ಸಾವು

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಕ್ರಾಸ್‌ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 20ಕ್ಕೂ ಹೆಚ್ಚು ಮಂದಿ ಸಜೀವ…

11 mins ago

ಓದುಗರ ಪತ್ರ:  ಮರ್ಯಾದಾ ಹತ್ಯೆಯಲ್ಲಿ ಜಾತಿ ಜೀವಂತಿಕೆ

ಜಾತಿ ವ್ಯವಸ್ಥೆಯು ಅಸಮಾನತೆಯನ್ನು ಸೃಷ್ಟಿ ಮಾಡಿದೆ. ಈ ಜಾತಿ ವ್ಯವಸ್ಥೆ ಈಗಲೂ ಜೀವಂತ ವಾಗಿದೆ ಎನ್ನುವುದಕ್ಕೆ ಬೇರೆ ಜಾತಿಯ ಹುಡುಗನನ್ನು…

24 mins ago

ಓದುಗರ ಪತ್ರ:  ಚಲನಚಿತ್ರ ರಂಗದಲ್ಲಿ ಏನಿದು ಗದ್ದಲ?

೬೦ರ ದಶಕದ ಸಿನಿಮಾರಂಗ ಯಾವ ಗಲಾಟೆ ಇಲ್ಲದೆ ಸಾಗಿತ್ತು. ರಾಜಕುಮಾರ್ ಅವರ ಸಮಕಾಲಿನ ನಟರಾದ ಕಲ್ಯಾಣ್ ಕುಮಾರ್, ಶ್ರೀನಾಥ್, ನರಸಿಂಹರಾಜು,…

25 mins ago

ಓದುಗರ ಪತ್ರ: ಚಾಮುಂಡಿಬೆಟ್ಟ ಯಥಾಸ್ಥಿತಿಯಲ್ಲೇ ಇರಲಿ

ನಾಡದೇವತೆಯಾದ ಶ್ರೀ ಚಾಮುಂಡೇಶ್ವರಿ ನೆಲೆಸಿರುವ ಬೆಟ್ಟವನ್ನು ಯಥಾಸ್ಥಿತಿಯಲ್ಲಿ ಇರುವಂತೆ ಉಳಿಸಿಕೊಳ್ಳುವುದು ಮೈಸೂರಿಗರ ಆದ್ಯ ಕರ್ತವ್ಯವಾಗಿದೆ. ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ…

28 mins ago

ಓದುಗರ ಪತ್ರ: ಪುಸ್ತಕ ಉಡುಗೊರೆ ಸಂಸ್ಕೃತಿ ಬೆಳೆಸಿ

ಚಿತ್ರದುರ್ಗದ ಪೇಟೆ ಬೀದಿಯ ಉಡುಗೊರೆ (ಗಿಫ್ಟ್) ಮಾರಾಟ ಮಳಿಗೆ ಮಕ್ಕಳು ಮತ್ತು ಪೋಷಕರಿಂದ ತುಂಬಿ ಹೋಗಿತ್ತು. ಅಲ್ಲಿದ್ದ ಹುಡುಗರನ್ನು ಏಕೆ…

43 mins ago