ಮನರಂಜನೆ

ತಮಿಳು ಚಿತ್ರರಂಗಕ್ಕೆ ಕಾಲಿಟ್ಟ ಕನ್ನಡದ ಕೆವಿಎನ್ ಪ್ರೊಡಕ್ಷನ್ಸ್ …

ಕನ್ನಡದ ಕೆವಿಎನ್‍ ಪ್ರೊಡಕ್ಷನ್ಸ್ ಸಂಸ್ಥೆಯ ವೆಂಕಟ್ ‍ಕೆ. ನಾರಾಯಣ್‍, ಸದ್ಯ ಧ್ರುವ ಸರ್ಜಾ ಅಭಿನಯದ ‘ಕೆಡಿ – ದಿ ಡೆವಿಲ್‍’ ಮತ್ತು ಯಶ್‍ ಅಭಿನಯದ ‘ಟಾಕ್ಸಿಕ್‍’ ಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ. ಇವೆರಡೂ ಚಿತ್ರಗಳು ಪ್ಯಾನ್‍ ಇಂಡಿಯಾ ಚಿತ್ರಗಳಾಗಿದ್ದು, ಈ ಮಧ್ಯೆ, ಅವರು ತಮಿಳಿಗೆ ಕಾಲಿಟ್ಟಿದ್ದು, ತಮಿಳಿನಲ್ಲಿ ದೊಡ್ಡ ಬಜೆಟ್‍ನ ಚಿತ್ರವೊಮದನ್ನು ನಿರ್ಮಿಸುವುದಕ್ಕೆ ಸಜ್ಜಾಗುತ್ತಿದ್ದಾರೆ.

‘ಇಳಯದಳಪತಿ’ ವಿಜಯ್‍ ಅಭಿನಯದ 69ನೇ ಚಿತ್ರವನ್ನು ಕೆವಿಎನ್‍ ಪ್ರೊಡಕ್ಷನ್ಸ್ ಸಂಸ್ಥೆಯು ನಿರ್ಮಿಸುತ್ತಿದೆ ಎಂಬ ವಿಷಯ ಕೆಲವು ದಿನಗಳಿಂದ ಕೇಳಿಬರುತ್ತಿತ್ತು. ಅದಕ್ಕೆ ಸರಿಯಾಗಿ, ಶುಕ್ರವಾರ ಸಂಜೆ ಸೋಷಿಯಲ್‍ ಮೀಡಿಯಾದಲ್ಲಿ ವಿಜಯ್‍ ಚಿತ್ರವನ್ನು ನಿರ್ಮಿಸುತ್ತಿರುವುದಾಗಿ ಕೆವಿಎನ್‍ ಅಧಿಕೃತವಾಗಿ ಘೋಷಿಸಿತ್ತು. ಈ ಸಂಬಂಧ ಒಂದು ವೀಡಿಯೋ ಸಹ ಬಿಡುಗಡೆ ಮಾಡಿದ್ದ ಸಂಸ್ಥೆಯು, ಇನ್ನಷ್ಟು ಮಾಹಿತಿಯನ್ನು ಶನಿವಾರ ಸಂಜೆ ಬಿಡುಗಡೆ ಮಾಡುವುದಾಗಿ ಘೋಷಿಸಿತ್ತು. ಅದರಂತೆ ಇಂದು ಸಂಜೆ ವಿಜಯ್‍ 69 ಚಿತ್ರವನ್ನು ನಿರ್ಮಿಸುತ್ತಿರುವುದಾಗಿ ಹೇಳಿಕೊಂಡಿದೆ.

ಈ ಹೆಸರಿಡದ ಚಿತ್ರವನ್ನು ಎಚ್‍. ವಿನೋದ್‍ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ವಿನೋದ್‍, ಅಜಿತ್‍ ಅಭಿನಯದ ‘ತುನಿವು’, ‘ವಲಿಮೈ’ ಮತ್ತು ‘ನೇರ್ಕೊಂಡ ಪಾರ್ವೈ’ ಚಿತ್ರಗಳನ್ನು ನಿರ್ಮಿಸಿದ್ದರು. ಈಗ ವಿಜಯ್ ಅಭಿನಯದ ಚಿತ್ರವನ್ನು ಅವರು ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ.

500 ಕೋಟಿಗೂ ಅಧಿಕ ಬಜೆಟ್ ನಲ್ಲಿ ಈ ಚಿತ್ರ ತಯಾರಾಗುತ್ತಿದ್ದು, ವಿಜಯ್ ವಿಜಯ್ ಚಿತ್ರಬದುಕಿನ ಕೊನೆಯ ಚಿತ್ರವಾಗಲಿದೆ ಎಂದು ಹೇಳಲಾಗುತ್ತಿದೆ. ವಿಜಯ್‍ ಈಗಾಗಲೇ ರಾಜಕೀಯ ಪಕ್ಷವೊಂದನ್ನು ಸ್ಥಾಪಿಸಿದ್ದು, ಈ ಚಿತ್ರದ ನಂತರ ಪೂರ್ಣಪ್ರಮಾಣದಲ್ಲಿ ರಾಜಕೀಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಅದಕ್ಕೂ ಮೊದಲು ಈ ಚಿತ್ರದಲ್ಲಿ ಅವರು ನಟಿಸಲಿದ್ದಾರಂತೆ. ವಿಜಯ್ ರಾಜಕೀಯ ಜೀವನಕ್ಕೆ ಹತ್ತಿರವಿರೋ ಕಥೆ ಈ ಚಿತ್ರದಲ್ಲಿದ್ದು, ವಿಜಯ್ ರಾಜಕೀಯ ಭವಿಷ್ಯಕ್ಕೆ ಈ ಚಿತ್ರ ಭವ್ಯ ಮೆಟ್ಟಿಲಾಗಲಿದೆ ಎಂಬ ಸುದ್ದಿ ಇದೆ.

ಈ ಚಿತ್ರ ಸದ್ಯದಲ್ಲೇ ಪ್ರಾರಂಭವಾಗಲಿದ್ದು, ಈ ಚಿತ್ರಕ್ಕೆ ವಿಜಯ್‍ಗೆ 275 ಕೋಟಿ ರೂ. ಸಂಭಾವನೆ ಕೊಡಲಾಗುತ್ತಿದೆ ಎಂಬ ಗುಸುಗುಸು ಕೇಳಿಬರುತ್ತಿದೆ.

ಭೂಮಿಕಾ

Recent Posts

ಓದುಗರ ಪತ್ರ: ವಂಚನೆ ತಡೆಗಾಗಿ ನಿರ್ಬಂಧ

ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…

34 mins ago

ಓದುಗರ ಪತ್ರ: ಮರಗಳ ಹನನ ಏಕೆ?

ಮೈಸೂರಿನ ಕುಕ್ಕರಹಳ್ಳಿ ಕೆರೆ ಬಳಿ ಮೈಸೂರು ವಿಶ್ವವಿದ್ಯಾನಿಲಯದ ಹಿಂಭಾಗ ಮೈಸೂರು - ಚಾಮರಾಜನಗರ ರೈಲ್ವೆ ಹಳಿಯ ಪಕ್ಕದಲ್ಲಿದ್ದ ೩೫ ಮರಗಳನ್ನು…

36 mins ago

ಓದುಗರ ಪತ್ರ: ಎಥೆನಾಲ್: ಪ್ರಚಾರದ ಗಿಮಿಕ್ಕೋ?

ಜೂನ್ ೧೪ರಂದು ಆರಂಭವಾದ ಎಥೆನಾಲ್ ಜಗೃತಿ ಕೇವಲ ಕಾರ್ಪೊರೇಟ್ ಪ್ರಚಾರದ ಗಿಮಿಕ್‌ನಂತೆ ಕಾಣುತ್ತಿದೆ. ಪೆಟ್ರೋಲ್‌ಗೆ ಶೇ.೨೦ ಮಿಶ್ರಣದ ಗುರಿ ಮತ್ತು…

38 mins ago

ಓದುಗರ ಪತ್ರ: ದುಡ್ಡಿಗೆ ಬೆಲೆ ಇಲ್ಲವೇ?

ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನಮ್ಮ ಭಾರತೀಯ ಬ್ಯಾಂಕ್ಗಳು, ಕೇವಲ ಪೆನ್ನು,ಪೇಪರ್, ಸ್ಟೇಷನರಿ ವಸ್ತುಗಳು ಮತ್ತು ಮುದ್ರಣಕ್ಕಾಗಿ ೩,೮೭೦ ಕೋಟಿ…

40 mins ago

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

14 hours ago