ಕನ್ನಡದ ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆಯ ವೆಂಕಟ್ ಕೆ. ನಾರಾಯಣ್, ಸದ್ಯ ಧ್ರುವ ಸರ್ಜಾ ಅಭಿನಯದ ‘ಕೆಡಿ – ದಿ ಡೆವಿಲ್’ ಮತ್ತು ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ. ಇವೆರಡೂ ಚಿತ್ರಗಳು ಪ್ಯಾನ್ ಇಂಡಿಯಾ ಚಿತ್ರಗಳಾಗಿದ್ದು, ಈ ಮಧ್ಯೆ, ಅವರು ತಮಿಳಿಗೆ ಕಾಲಿಟ್ಟಿದ್ದು, ತಮಿಳಿನಲ್ಲಿ ದೊಡ್ಡ ಬಜೆಟ್ನ ಚಿತ್ರವೊಮದನ್ನು ನಿರ್ಮಿಸುವುದಕ್ಕೆ ಸಜ್ಜಾಗುತ್ತಿದ್ದಾರೆ.
‘ಇಳಯದಳಪತಿ’ ವಿಜಯ್ ಅಭಿನಯದ 69ನೇ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆಯು ನಿರ್ಮಿಸುತ್ತಿದೆ ಎಂಬ ವಿಷಯ ಕೆಲವು ದಿನಗಳಿಂದ ಕೇಳಿಬರುತ್ತಿತ್ತು. ಅದಕ್ಕೆ ಸರಿಯಾಗಿ, ಶುಕ್ರವಾರ ಸಂಜೆ ಸೋಷಿಯಲ್ ಮೀಡಿಯಾದಲ್ಲಿ ವಿಜಯ್ ಚಿತ್ರವನ್ನು ನಿರ್ಮಿಸುತ್ತಿರುವುದಾಗಿ ಕೆವಿಎನ್ ಅಧಿಕೃತವಾಗಿ ಘೋಷಿಸಿತ್ತು. ಈ ಸಂಬಂಧ ಒಂದು ವೀಡಿಯೋ ಸಹ ಬಿಡುಗಡೆ ಮಾಡಿದ್ದ ಸಂಸ್ಥೆಯು, ಇನ್ನಷ್ಟು ಮಾಹಿತಿಯನ್ನು ಶನಿವಾರ ಸಂಜೆ ಬಿಡುಗಡೆ ಮಾಡುವುದಾಗಿ ಘೋಷಿಸಿತ್ತು. ಅದರಂತೆ ಇಂದು ಸಂಜೆ ವಿಜಯ್ 69 ಚಿತ್ರವನ್ನು ನಿರ್ಮಿಸುತ್ತಿರುವುದಾಗಿ ಹೇಳಿಕೊಂಡಿದೆ.
ಈ ಹೆಸರಿಡದ ಚಿತ್ರವನ್ನು ಎಚ್. ವಿನೋದ್ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ವಿನೋದ್, ಅಜಿತ್ ಅಭಿನಯದ ‘ತುನಿವು’, ‘ವಲಿಮೈ’ ಮತ್ತು ‘ನೇರ್ಕೊಂಡ ಪಾರ್ವೈ’ ಚಿತ್ರಗಳನ್ನು ನಿರ್ಮಿಸಿದ್ದರು. ಈಗ ವಿಜಯ್ ಅಭಿನಯದ ಚಿತ್ರವನ್ನು ಅವರು ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ.
500 ಕೋಟಿಗೂ ಅಧಿಕ ಬಜೆಟ್ ನಲ್ಲಿ ಈ ಚಿತ್ರ ತಯಾರಾಗುತ್ತಿದ್ದು, ವಿಜಯ್ ವಿಜಯ್ ಚಿತ್ರಬದುಕಿನ ಕೊನೆಯ ಚಿತ್ರವಾಗಲಿದೆ ಎಂದು ಹೇಳಲಾಗುತ್ತಿದೆ. ವಿಜಯ್ ಈಗಾಗಲೇ ರಾಜಕೀಯ ಪಕ್ಷವೊಂದನ್ನು ಸ್ಥಾಪಿಸಿದ್ದು, ಈ ಚಿತ್ರದ ನಂತರ ಪೂರ್ಣಪ್ರಮಾಣದಲ್ಲಿ ರಾಜಕೀಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಅದಕ್ಕೂ ಮೊದಲು ಈ ಚಿತ್ರದಲ್ಲಿ ಅವರು ನಟಿಸಲಿದ್ದಾರಂತೆ. ವಿಜಯ್ ರಾಜಕೀಯ ಜೀವನಕ್ಕೆ ಹತ್ತಿರವಿರೋ ಕಥೆ ಈ ಚಿತ್ರದಲ್ಲಿದ್ದು, ವಿಜಯ್ ರಾಜಕೀಯ ಭವಿಷ್ಯಕ್ಕೆ ಈ ಚಿತ್ರ ಭವ್ಯ ಮೆಟ್ಟಿಲಾಗಲಿದೆ ಎಂಬ ಸುದ್ದಿ ಇದೆ.
ಈ ಚಿತ್ರ ಸದ್ಯದಲ್ಲೇ ಪ್ರಾರಂಭವಾಗಲಿದ್ದು, ಈ ಚಿತ್ರಕ್ಕೆ ವಿಜಯ್ಗೆ 275 ಕೋಟಿ ರೂ. ಸಂಭಾವನೆ ಕೊಡಲಾಗುತ್ತಿದೆ ಎಂಬ ಗುಸುಗುಸು ಕೇಳಿಬರುತ್ತಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…