ಮನರಂಜನೆ

IFFI ಗಾಲಾ ಪ್ರೀಮಿಯರ್ ನಲ್ಲಿ ಕನ್ನಡದ’ರುಧಿರ್ವನ’ ಪ್ರದರ್ಶನ

ಗೋವಾದಲ್ಲಿ ನಡೆಯುವ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರತೀ ವರ್ಷ ಒಂದಲ್ಲ ಒಂದು ಕನ್ನಡ ಚಿತ್ರದ ಪ್ರೀಮಿಯರ್ ಆಗುತ್ತಾ ಇರುತ್ತದೆ. ಈ ವರ್ಷ, ಕನ್ನಡಿಗ ಅಗ್ನಿ ನಿರ್ದೇಶನದ ಮೊದಲ ಚಿತ್ರ ‘ರುಧಿರ್ವನ’, ಗಾಲಾ ಪ್ರೀಮಿಯರ್ ವಿಭಾಗದಲ್ಲಿ ಪ್ರದರ್ಶನ ಕಂಡಿದೆ.

‘ರುಧಿರ್ವನ’ ಅಂದ್ರೆ ರಕ್ತಸಿಕ್ತವಾದ ಕಾಡು ಎಂದರ್ಥ. ಕಾಡಿನಲ್ಲಿ ನಡೆಯುವ ಒಂದಿಷ್ಟು ಅನಿರೀಕ್ಷಿತ ಘಟನೆಗಳ ಸುತ್ತ ಈ ಚಿತ್ರ ಸಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಕಾಡಿನಲ್ಲಿ ನಡೆಯುವ ಹಲವು ಕಥೆಗಳು ಚಿತ್ರವಾಗಿದ್ದು, ಆ ಸಾಲಿಗೆ ‘ರುದಿರ್ವನ’ ಸಹ ಸೇರಿದೆ

ಇದನ್ನು ಓದಿ: 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ಕಿಶೋರ್‌ ನೇಮಕ

‘ರುಧಿರ್ವನ’ ಚಿತ್ರದಲ್ಲಿ ಪಾವನಾ ಗೌಡ, ‘ಭೀಮಾ’ ಚಿತ್ರದ ಖ್ಯಾತಿಯ ಪ್ರಿಯಾ ಶಠಮರ್ಷಣ, ಬಲ ರಾಜವಾಡಿ, ಕೃಷ್ಣ ಹೆಬ್ಬಾಳೆ, ಮೇದಿನಿ ಕೆಳಮನೆ, ಅವಿನಾಶ್‌ ರೈ, ಅರ್ಜುನ್‌ ಕಜೆ, ಅಪೂರ್ವ ಮುಂತಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ನಿರ್ದೇಶಕ ಅಗ್ನಿ ಕಥೆ-ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿದ್ದಾರೆ.

ಸಂದೀಪ್‌ ವೆಲ್ಲೂರಿ ಛಾಯಾಗ್ರಹಣ, ರೋಣದ ಬಕ್ಕೇಶ್ ಸಂಗೀತ ಇರುವ ಈ ಚಿತ್ರವನ್ನು ಕ್ರೌಡ್‍ ಫಂಡಿಂಗ್‍ ಮೂಲಕ ನಿರ್ಮಿಸಲಾಗಿದೆ. ಅಗ್ನಿ ಮತ್ತು ಅವರು ಸ್ನೇಹಿತರಲ್ಲದೆ, ಅಗ್ನಿ ಅವರ ಯೂಟ್ಯೂಬ್‍ ಚಂದಾದಾರರು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಪಾಯಿಂಟ್‌ ಆಫ್ ವೀವ್‌ ಪಿಕ್ಚರ್‌ ಹೌಸ್‌ ಬ್ಯಾನರ್‌ ಅಡಿ ‘ರುಧಿರ್ವನ’ ಸಿನಿಮಾ ಮೂಡಿಬರಲಿದೆ.

ಆಂದೋಲನ ಡೆಸ್ಕ್

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

2 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

4 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

5 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

6 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

6 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

6 hours ago