ಗೋವಾದಲ್ಲಿ ನಡೆಯುವ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರತೀ ವರ್ಷ ಒಂದಲ್ಲ ಒಂದು ಕನ್ನಡ ಚಿತ್ರದ ಪ್ರೀಮಿಯರ್ ಆಗುತ್ತಾ ಇರುತ್ತದೆ. ಈ ವರ್ಷ, ಕನ್ನಡಿಗ ಅಗ್ನಿ ನಿರ್ದೇಶನದ ಮೊದಲ ಚಿತ್ರ ‘ರುಧಿರ್ವನ’, ಗಾಲಾ ಪ್ರೀಮಿಯರ್ ವಿಭಾಗದಲ್ಲಿ ಪ್ರದರ್ಶನ ಕಂಡಿದೆ.
‘ರುಧಿರ್ವನ’ ಅಂದ್ರೆ ರಕ್ತಸಿಕ್ತವಾದ ಕಾಡು ಎಂದರ್ಥ. ಕಾಡಿನಲ್ಲಿ ನಡೆಯುವ ಒಂದಿಷ್ಟು ಅನಿರೀಕ್ಷಿತ ಘಟನೆಗಳ ಸುತ್ತ ಈ ಚಿತ್ರ ಸಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಕಾಡಿನಲ್ಲಿ ನಡೆಯುವ ಹಲವು ಕಥೆಗಳು ಚಿತ್ರವಾಗಿದ್ದು, ಆ ಸಾಲಿಗೆ ‘ರುದಿರ್ವನ’ ಸಹ ಸೇರಿದೆ
ಇದನ್ನು ಓದಿ: 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ಕಿಶೋರ್ ನೇಮಕ
‘ರುಧಿರ್ವನ’ ಚಿತ್ರದಲ್ಲಿ ಪಾವನಾ ಗೌಡ, ‘ಭೀಮಾ’ ಚಿತ್ರದ ಖ್ಯಾತಿಯ ಪ್ರಿಯಾ ಶಠಮರ್ಷಣ, ಬಲ ರಾಜವಾಡಿ, ಕೃಷ್ಣ ಹೆಬ್ಬಾಳೆ, ಮೇದಿನಿ ಕೆಳಮನೆ, ಅವಿನಾಶ್ ರೈ, ಅರ್ಜುನ್ ಕಜೆ, ಅಪೂರ್ವ ಮುಂತಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ನಿರ್ದೇಶಕ ಅಗ್ನಿ ಕಥೆ-ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿದ್ದಾರೆ.
ಸಂದೀಪ್ ವೆಲ್ಲೂರಿ ಛಾಯಾಗ್ರಹಣ, ರೋಣದ ಬಕ್ಕೇಶ್ ಸಂಗೀತ ಇರುವ ಈ ಚಿತ್ರವನ್ನು ಕ್ರೌಡ್ ಫಂಡಿಂಗ್ ಮೂಲಕ ನಿರ್ಮಿಸಲಾಗಿದೆ. ಅಗ್ನಿ ಮತ್ತು ಅವರು ಸ್ನೇಹಿತರಲ್ಲದೆ, ಅಗ್ನಿ ಅವರ ಯೂಟ್ಯೂಬ್ ಚಂದಾದಾರರು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಪಾಯಿಂಟ್ ಆಫ್ ವೀವ್ ಪಿಕ್ಚರ್ ಹೌಸ್ ಬ್ಯಾನರ್ ಅಡಿ ‘ರುಧಿರ್ವನ’ ಸಿನಿಮಾ ಮೂಡಿಬರಲಿದೆ.
ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…
ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…
ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…
ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…
ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…
ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…