ಗೋವಾದಲ್ಲಿ ನಡೆಯುವ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರತೀ ವರ್ಷ ಒಂದಲ್ಲ ಒಂದು ಕನ್ನಡ ಚಿತ್ರದ ಪ್ರೀಮಿಯರ್ ಆಗುತ್ತಾ ಇರುತ್ತದೆ. ಈ ವರ್ಷ, ಕನ್ನಡಿಗ ಅಗ್ನಿ ನಿರ್ದೇಶನದ ಮೊದಲ ಚಿತ್ರ ‘ರುಧಿರ್ವನ’, ಗಾಲಾ ಪ್ರೀಮಿಯರ್ ವಿಭಾಗದಲ್ಲಿ ಪ್ರದರ್ಶನ ಕಂಡಿದೆ.
‘ರುಧಿರ್ವನ’ ಅಂದ್ರೆ ರಕ್ತಸಿಕ್ತವಾದ ಕಾಡು ಎಂದರ್ಥ. ಕಾಡಿನಲ್ಲಿ ನಡೆಯುವ ಒಂದಿಷ್ಟು ಅನಿರೀಕ್ಷಿತ ಘಟನೆಗಳ ಸುತ್ತ ಈ ಚಿತ್ರ ಸಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಕಾಡಿನಲ್ಲಿ ನಡೆಯುವ ಹಲವು ಕಥೆಗಳು ಚಿತ್ರವಾಗಿದ್ದು, ಆ ಸಾಲಿಗೆ ‘ರುದಿರ್ವನ’ ಸಹ ಸೇರಿದೆ
ಇದನ್ನು ಓದಿ: 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ಕಿಶೋರ್ ನೇಮಕ
‘ರುಧಿರ್ವನ’ ಚಿತ್ರದಲ್ಲಿ ಪಾವನಾ ಗೌಡ, ‘ಭೀಮಾ’ ಚಿತ್ರದ ಖ್ಯಾತಿಯ ಪ್ರಿಯಾ ಶಠಮರ್ಷಣ, ಬಲ ರಾಜವಾಡಿ, ಕೃಷ್ಣ ಹೆಬ್ಬಾಳೆ, ಮೇದಿನಿ ಕೆಳಮನೆ, ಅವಿನಾಶ್ ರೈ, ಅರ್ಜುನ್ ಕಜೆ, ಅಪೂರ್ವ ಮುಂತಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ನಿರ್ದೇಶಕ ಅಗ್ನಿ ಕಥೆ-ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿದ್ದಾರೆ.
ಸಂದೀಪ್ ವೆಲ್ಲೂರಿ ಛಾಯಾಗ್ರಹಣ, ರೋಣದ ಬಕ್ಕೇಶ್ ಸಂಗೀತ ಇರುವ ಈ ಚಿತ್ರವನ್ನು ಕ್ರೌಡ್ ಫಂಡಿಂಗ್ ಮೂಲಕ ನಿರ್ಮಿಸಲಾಗಿದೆ. ಅಗ್ನಿ ಮತ್ತು ಅವರು ಸ್ನೇಹಿತರಲ್ಲದೆ, ಅಗ್ನಿ ಅವರ ಯೂಟ್ಯೂಬ್ ಚಂದಾದಾರರು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಪಾಯಿಂಟ್ ಆಫ್ ವೀವ್ ಪಿಕ್ಚರ್ ಹೌಸ್ ಬ್ಯಾನರ್ ಅಡಿ ‘ರುಧಿರ್ವನ’ ಸಿನಿಮಾ ಮೂಡಿಬರಲಿದೆ.
ನನ್ನ ನಡೆತೆಯನ್ನು ಬಹು ಎಚ್ಚರಿಕೆಯಿಂದ ಕಾಯ್ದುಕೊಂಡಿದ್ದೆ ನನ್ನ ಮದುವೆಯಾದ ಕಾಲಕ್ಕೆ ನಾನು ಪ್ರೌಢಶಾಲೆಯಲ್ಲಿ ಓದುತ್ತಿದ್ದೆ. ನಾನು ಉಪಾಧ್ಯಾಯರ ಪ್ರೀತಿಯನ್ನು ಯಾವಾಗಲೂ…
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…