ಗೋವಾದಲ್ಲಿ ನಡೆಯುವ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರತೀ ವರ್ಷ ಒಂದಲ್ಲ ಒಂದು ಕನ್ನಡ ಚಿತ್ರದ ಪ್ರೀಮಿಯರ್ ಆಗುತ್ತಾ ಇರುತ್ತದೆ. ಈ ವರ್ಷ, ಕನ್ನಡಿಗ ಅಗ್ನಿ ನಿರ್ದೇಶನದ ಮೊದಲ ಚಿತ್ರ ‘ರುಧಿರ್ವನ’, ಗಾಲಾ ಪ್ರೀಮಿಯರ್ ವಿಭಾಗದಲ್ಲಿ ಪ್ರದರ್ಶನ ಕಂಡಿದೆ.
‘ರುಧಿರ್ವನ’ ಅಂದ್ರೆ ರಕ್ತಸಿಕ್ತವಾದ ಕಾಡು ಎಂದರ್ಥ. ಕಾಡಿನಲ್ಲಿ ನಡೆಯುವ ಒಂದಿಷ್ಟು ಅನಿರೀಕ್ಷಿತ ಘಟನೆಗಳ ಸುತ್ತ ಈ ಚಿತ್ರ ಸಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಕಾಡಿನಲ್ಲಿ ನಡೆಯುವ ಹಲವು ಕಥೆಗಳು ಚಿತ್ರವಾಗಿದ್ದು, ಆ ಸಾಲಿಗೆ ‘ರುದಿರ್ವನ’ ಸಹ ಸೇರಿದೆ
ಇದನ್ನು ಓದಿ: 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ಕಿಶೋರ್ ನೇಮಕ
‘ರುಧಿರ್ವನ’ ಚಿತ್ರದಲ್ಲಿ ಪಾವನಾ ಗೌಡ, ‘ಭೀಮಾ’ ಚಿತ್ರದ ಖ್ಯಾತಿಯ ಪ್ರಿಯಾ ಶಠಮರ್ಷಣ, ಬಲ ರಾಜವಾಡಿ, ಕೃಷ್ಣ ಹೆಬ್ಬಾಳೆ, ಮೇದಿನಿ ಕೆಳಮನೆ, ಅವಿನಾಶ್ ರೈ, ಅರ್ಜುನ್ ಕಜೆ, ಅಪೂರ್ವ ಮುಂತಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ನಿರ್ದೇಶಕ ಅಗ್ನಿ ಕಥೆ-ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿದ್ದಾರೆ.
ಸಂದೀಪ್ ವೆಲ್ಲೂರಿ ಛಾಯಾಗ್ರಹಣ, ರೋಣದ ಬಕ್ಕೇಶ್ ಸಂಗೀತ ಇರುವ ಈ ಚಿತ್ರವನ್ನು ಕ್ರೌಡ್ ಫಂಡಿಂಗ್ ಮೂಲಕ ನಿರ್ಮಿಸಲಾಗಿದೆ. ಅಗ್ನಿ ಮತ್ತು ಅವರು ಸ್ನೇಹಿತರಲ್ಲದೆ, ಅಗ್ನಿ ಅವರ ಯೂಟ್ಯೂಬ್ ಚಂದಾದಾರರು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಪಾಯಿಂಟ್ ಆಫ್ ವೀವ್ ಪಿಕ್ಚರ್ ಹೌಸ್ ಬ್ಯಾನರ್ ಅಡಿ ‘ರುಧಿರ್ವನ’ ಸಿನಿಮಾ ಮೂಡಿಬರಲಿದೆ.
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…
ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…