ಮನರಂಜನೆ

IFFI ಗಾಲಾ ಪ್ರೀಮಿಯರ್ ನಲ್ಲಿ ಕನ್ನಡದ’ರುಧಿರ್ವನ’ ಪ್ರದರ್ಶನ

ಗೋವಾದಲ್ಲಿ ನಡೆಯುವ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರತೀ ವರ್ಷ ಒಂದಲ್ಲ ಒಂದು ಕನ್ನಡ ಚಿತ್ರದ ಪ್ರೀಮಿಯರ್ ಆಗುತ್ತಾ ಇರುತ್ತದೆ. ಈ ವರ್ಷ, ಕನ್ನಡಿಗ ಅಗ್ನಿ ನಿರ್ದೇಶನದ ಮೊದಲ ಚಿತ್ರ ‘ರುಧಿರ್ವನ’, ಗಾಲಾ ಪ್ರೀಮಿಯರ್ ವಿಭಾಗದಲ್ಲಿ ಪ್ರದರ್ಶನ ಕಂಡಿದೆ.

‘ರುಧಿರ್ವನ’ ಅಂದ್ರೆ ರಕ್ತಸಿಕ್ತವಾದ ಕಾಡು ಎಂದರ್ಥ. ಕಾಡಿನಲ್ಲಿ ನಡೆಯುವ ಒಂದಿಷ್ಟು ಅನಿರೀಕ್ಷಿತ ಘಟನೆಗಳ ಸುತ್ತ ಈ ಚಿತ್ರ ಸಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಕಾಡಿನಲ್ಲಿ ನಡೆಯುವ ಹಲವು ಕಥೆಗಳು ಚಿತ್ರವಾಗಿದ್ದು, ಆ ಸಾಲಿಗೆ ‘ರುದಿರ್ವನ’ ಸಹ ಸೇರಿದೆ

ಇದನ್ನು ಓದಿ: 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ಕಿಶೋರ್‌ ನೇಮಕ

‘ರುಧಿರ್ವನ’ ಚಿತ್ರದಲ್ಲಿ ಪಾವನಾ ಗೌಡ, ‘ಭೀಮಾ’ ಚಿತ್ರದ ಖ್ಯಾತಿಯ ಪ್ರಿಯಾ ಶಠಮರ್ಷಣ, ಬಲ ರಾಜವಾಡಿ, ಕೃಷ್ಣ ಹೆಬ್ಬಾಳೆ, ಮೇದಿನಿ ಕೆಳಮನೆ, ಅವಿನಾಶ್‌ ರೈ, ಅರ್ಜುನ್‌ ಕಜೆ, ಅಪೂರ್ವ ಮುಂತಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ನಿರ್ದೇಶಕ ಅಗ್ನಿ ಕಥೆ-ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿದ್ದಾರೆ.

ಸಂದೀಪ್‌ ವೆಲ್ಲೂರಿ ಛಾಯಾಗ್ರಹಣ, ರೋಣದ ಬಕ್ಕೇಶ್ ಸಂಗೀತ ಇರುವ ಈ ಚಿತ್ರವನ್ನು ಕ್ರೌಡ್‍ ಫಂಡಿಂಗ್‍ ಮೂಲಕ ನಿರ್ಮಿಸಲಾಗಿದೆ. ಅಗ್ನಿ ಮತ್ತು ಅವರು ಸ್ನೇಹಿತರಲ್ಲದೆ, ಅಗ್ನಿ ಅವರ ಯೂಟ್ಯೂಬ್‍ ಚಂದಾದಾರರು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಪಾಯಿಂಟ್‌ ಆಫ್ ವೀವ್‌ ಪಿಕ್ಚರ್‌ ಹೌಸ್‌ ಬ್ಯಾನರ್‌ ಅಡಿ ‘ರುಧಿರ್ವನ’ ಸಿನಿಮಾ ಮೂಡಿಬರಲಿದೆ.

ಆಂದೋಲನ ಡೆಸ್ಕ್

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

4 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

5 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

9 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

9 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

9 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

9 hours ago