ಸುಮಾರು 10 ವರ್ಷಗಳ ಹಿಂದೆ ಶರಣ್ ಅಭಿನಯದ ‘ಅಧ್ಯಕ್ಷ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಮುಂಬೈ ಮೂಲದ ಹೆಬಾ ಪಟೇಲ್, ಆ ನಂತರ ಕನ್ನಡಕ್ಕಿಂತ ತೆಲುಗು ಚಿತ್ರರಂಗದಲ್ಲೇ ಬ್ಯುಸಿಯಾಗಿದ್ದರು. ಅಲ್ಲಿ ಹಲವು ಚಿತ್ರಗಳಲ್ಲಿ ನಟಿಸಿದ್ದರು. ಈಗ ಬಹಳ ದಿನಗಳ ನಂತರ ಅವರು ಕನ್ನಡಕ್ಕೆ ವಾಪಸ್ಸಾಗಿದ್ದಾರೆ. ಗುರು ದೇಶಪಾಂಡೆ ನಿರ್ಮಾಣದ ‘ರಾಮರಸ’ ಚಿತ್ರದಲ್ಲಿ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಇಂದು ಹೆಬಾ ಪಟೇಲ್ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅವರ ಪಾತ್ರವನ್ನು ಪರಿಚಯಿಸುವ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ‘ರಾಮರಸ’ ಚಿತ್ರದಲ್ಲಿ ಹೆಬಾ ಪಟೇಲ್, ಭ್ರಮರಿ ಎಂಬ ಪಾತ್ರವನ್ನು ನಿರ್ವಹಿಸಿದ್ದಾರೆ. ಅವರ ಪಾತ್ರವೇನು ಎಂಬುದನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ‘ಅವಳ ಅಂದಕ್ಕೆ ಸೋತವರು, ಮಾತಿಗೆ ಮರುಳಾದವರು, ನಡಿಗೆಗೆ ನಡುಗಿದವರಾರೂ, ಭೂಮಿ ಮೇಲೆ ಉಳಿದೇ ಇಲ್ಲ. ಗಂಡಸರ ಪಾಲಿಗೆ ಆಕೆ ರಹಸ್ಯ. ಆಕೆಯ ಹೆಸರು ಭ್ರಮರಿ’ ಎಂದು ಹೆಬಾ ಪಟೇಲ್ ಅವರನ್ನು ಪರಿಚಯಿಸಲಾಗಿದೆ.
ಜಿ ಸಿನಿಮಾಸ್ ಲಾಂಛನದಲ್ಲಿ ಗುರು ದೇಶಪಾಂಡೆ ನಿರ್ಮಿಸುತ್ತಿರುವ ‘ರಾಮರಸ’ ಚಿತ್ರವನ್ನು ‘ಜಟ್ಟ’ ಗಿರಿರಾಜ್ ಬರೆದು ನಿರ್ದೇಶನ ಮಾಡಿದ್ದಾರೆ. ಇದು ಗುರು ದೇಶಪಾಂಡೆ ನಿರ್ಮಾಣದ ನಾಲ್ಕನೇ ಚಿತ್ರ. ಈ ಹಿಂದೆ ಅವರು ‘ಜಂಟಲ್ಮ್ಯಾನ್’, ‘ಪೆಂಟಗನ್’ ಮತ್ತು ‘ಲವ್ ಯು ರಚ್ಚು’ ಚಿತ್ರಗಳನ್ನು ನಿರ್ಮಾಣ ಮಾಡಿದ್ದರು. ‘ರಾಮರಸ’ ಒಂದು ಹಾರಾರ್ ಕಾಮಿಡಿ ಜಾನರ್ನ ಚಿತ್ರವಾಗಿದ್ದು, ಜಿ ಅಕಾಡೆಮಿಯ 16 ಜನ ಹೊಸ ಪ್ರತಿಭೆಗಳಿಗೆ ತರಬೇತಿ ನೀಡಿ ಈ ಚಿತ್ರದಲ್ಲಿ ನಟಿಸಲು ಅವಕಾಶ ನೀಡಲಾಗಿದೆ.
‘ರಾಮರಸ’ ಚಿತ್ರದಲ್ಲಿ ‘ಬಿಗ್ ಬಾಸ್’ ವಿಜೇತ ಕಾರ್ತಿಕ್ ಮಹೇಶ್ ನಾಯಕನಾಗಿ ನಟಿಸುತ್ತಿದ್ದಾರೆ. ಹೆಬಾ ಪಟೇಲ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಮಿಕ್ಕಂತೆ ಚಿತ್ರದಲ್ಲಿ ಸಾಕಷ್ಟು ಹೊಸ ಪ್ರತಿಭೆಗಳಿವೆ. ಈ ಚಿತ್ರಕ್ಕೆ ಬಿ.ಜೆ. ಭರತ್ ಸಂಗೀತ ಸಂಯೋಜಿಸುತ್ತಿದ್ದಾರೆ.
ಬೆಂಗಳೂರು : ಬಾಗಲಕೋಟೆಯ ಹಳೆಯ ನಗರದಲ್ಲಿ ಚತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆಯ ವೇಳೆ ನಡೆದ…
ಸಿದ್ದಾಪುರ : ವಾಹನ ಚಲಾಯಿಸುವ ಆಸೆಯಿಂದ ಟ್ರಾಕ್ಟರ್ ಚಲಾಯಿಸಿದ ಕಾರ್ಮಿಕ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮಗುಚಿದ ಪರಿಣಾಮ ಸ್ಥಳದಲ್ಲೆ ಮೃತ…
ಮಂಡ್ಯ : ಜಿಲ್ಲೆಯ ಯುವ ಜನತೆಗೆ ನಗರದ ಚಿತ್ರಣವನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಹೆಲಿಕಾಪ್ಟರ್ ಜಾಯ್ ರೈಡ್ಅನ್ನು ಆಯೋಜಿಸಲಗಿದ್ದು, ಮೂರು ದಿನಗಳ…
ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಟೀಸರ್ ಇಂದು(ಫೆ.20) ಬಿಡುಗಡೆಯಾಗಿದೆ. 2 ನಿಮಿಷಗಳ ಈ ಟೀಸರ್…
ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…
ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…