ಮನರಂಜನೆ

ಕೆಂಪಾನ‌ ಗಲ್ಲದ ಹುಡುಗಿ…’ ಹಿಂದೆ ಬಿದ್ದ ಸೂರ್ಯ

‘ಚುಟುಚುಟು ಅಂತೈತಿ…’ ಹಾಡಿನ ನಂತರ ಕನ್ನಡದಲ್ಲಿ ಉತ್ತರ ಕರ್ನಾಟಕ ಸೊಗಡಿನ ಹಾಡುಗಳ ಸಂಖ್ಯೆ ಹೆಚ್ಚಾಗಿದೆ. ಈಗ ‘ಸೂರ್ಯ’ ಎಂಬ ಹೊಸ ಚಿತ್ರದಲ್ಲೂ ‘ಕೆಂಪಾನ ಗಲ್ಲದ ಹುಡುಗಿ…’ ಎಂಬ ಉತ್ತರ ಕರ್ನಾಟಕ ಶೈಲಿಯ ಹಾಡು ಹಾಡಿದ್ದು, ಈ ಹಾಡನ್ನು ರವೀಂದ್ರ ಸೊರಗಾಂವಿ ಮತ್ತು ಸ್ಫೂರ್ತಿ ಹಾಡಿದ್ದಾರೆ. ಈ ಹಾಡು ಇತ್ತೀಚೆಗೆ ಬಿಡುಗಡೆ ಆಗಿದೆ.

ಬೆಳಗಾವಿ ಮೂಲದ ಬಸವರಾಜ ಬೆಣ್ಣೆ ಹಾಗೂ ರವಿ ಬೆಣ್ಣೆ, ನಂದಿ ಸಿನಿಮಾಸ್ ಮೂಲಕ ನಿರ್ಮಿಸುತ್ತಿರುವ ‘ಸೂರ್ಯ’ ಚಿತ್ರವನ್ನು ಸಾಗರ್ ದಾಸ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಪ್ರಶಾಂತ್ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ಹರ್ಷಿತಾ ನಾಯಕಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಯುವಕನೊಬ್ಬ ತನ್ನ ಪ್ರೀತಿಯನ್ನು ಪಡೆದುಕೊಳ್ಳಲು ಏನೆಲ್ಲಾ ಹೋರಾಟ, ಸಾಹಸ ಮಾಡುತ್ತಾನೆ ಎಂಬುದನ್ನು ಈ ಚಿತ್ರದ ಮೂಲಕ‌ ಸಾಗರ್ ದಾಸ್ ಹೇಳಲು ಹೊರಟಿದ್ದಾರಂತೆ. ಬಿ. ಸುರೇಶ್ ಜೊತೆ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದ ಅನುಭವವಿರುವ ಸಾಗರ್ ದಾಸ್‍ಗೆ ಇದು ಮೊದಲ ಚಿತ್ರ. ‘ಸೂರ್ಯ ಎನ್ನುವುದು ಇಲ್ಲಿ ನಾಯಕನ ಹೆಸರು. ಆತ ತನ್ನ ಪ್ರೀತಿಗೋಸ್ಕರ ಸಮರ ಸಾರಿ ಅದನ್ನು ಹೇಗೆ ಉಳಿಸಿಕೊಳ್ಳುತ್ತಾನೆ ಎನ್ನುವುದೇ ಚಿತ್ರದ ಕಥಾಹಂದರ. ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡುತ್ತಲೇ ನಾನೊಂದು ಕಥೆ ಮಾಡಿಕೊಂಡಿದ್ದೆ. ನನ್ನ ಸ್ನೇಹಿತನ ಮೂಲಕ ನಿರ್ಮಾಪಕರ ಪರಿಚಯವಾಗಿ, ಅವರಿಗೆ ಈ ಕಥೆ ಹೇಳಿದಾಗ ಇಷ್ಟಪಟ್ಟು ಚಿತ್ರ ನಿರ್ಮಾಣಕ್ಕೆ ಮುಂದಾದರು. ಬೆಂಗಳೂರು ಸುತ್ತಮುತ್ತ ಹಾಗೂ ಪೂನಾದಲ್ಲಿ ಚಿತ್ರದ ಚಿತ್ರೀಕರಣ ನಡೆಸಿದ್ದೇವೆ. ಜೂನ್ ಅಥವಾ ಜುಲೈ ವೇಳೆಗೆ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆಯಿದೆ. ಆರ್ಮುಗಂ ರವಿಶಂಕರ್ ಅವರನ್ನು ಇದುವರೆಗೂ ನೋಡಿರದಂಥ ಪಾತ್ರದಲ್ಲಿ ಕಾಣಬಹುದು. ಶ್ರುತಿ ವೈದ್ಯೆಯಾಗಿ ನಟಿಸಿದ್ದಾರೆ. ಪ್ರಮೋದ್ ಶೆಟ್ಟಿ ಅವರಿಲ್ಲಿ ಉತ್ತರ ಕರ್ನಾಟಕ ಭಾಗದ ವಿಲನ್ ಪಾತ್ರ ನಿರ್ವಹಿಸಿದ್ದಾರೆ’ ಎಂದು ಮಾಹಿತಿ ನೀಡಿದರು.

ಚಿತ್ರದ ಐದು ಹಾಡುಗಳಿಗೆ ಶ್ರೀ ಶಾಸ್ತ್ರಿ ಅವರು ಸಂಗೀತ ಸಂಯೋಜನೆ ಮಾಡಿದರೆ, ಮನುರಾಜ್ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

8 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

11 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

15 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

17 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

18 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

19 hours ago