yedagai new movie kannada
ಕಳೆದ ವರ್ಷ ಬಿಡುಗಡೆಯಾದ ಚಿತ್ರಗಳ ಪೈಕಿ ಹಣಕಾಸಿನ ವಿಷಯದಲ್ಲಿ ದೊಡ್ಡ ಸದ್ದು ಮಾಡದ ಮತ್ತು ಕಂಟೆಂಟ್ ವಿಷಯದಲ್ಲಿ ಗಮನಸೆಳೆದ ಚಿತ್ರಗಳೆಂದೆರೆ ಅದು ‘ಬ್ಲಿಂಕ್’ ಮತ್ತು ‘ಶಾಖಾಹಾರಿ’. ಆ ಚಿತ್ರಗಳ ನಂತರ ಆ ನಿರ್ಮಾಪಕರು, ಹೊಸ ಚಿತ್ರಗಳನ್ನು ನಿರ್ಮಿಸದಿದ್ದರೂ, ಒಂದಿಷ್ಟು ಚಿತ್ರಗಳ ವಿತರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈಗ ’ಬ್ಲಿಂಕ್’ ಮತ್ತು ‘ಶಾಖಾಹಾರಿ’ ನಿರ್ಮಾಪಕರು, ದಿಗಂತ್ ಅಭಿನಯದ ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದ ಬಿಡುಗಡೆಗೆ ಕೈಜೋಡಿಸಿದ್ದಾರೆ.
ದಿಗಂತ್ ನಟನೆಯ ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರೀಕರಣ ಮುಗಿದು ಹಲವು ಸಮಯವಾದರೂ, ಚಿತ್ರವು ಕಾರಣಾಂತರಗಳಿಂದ ಬಿಡುಗಡೆ ಮುಂದಕ್ಕೆ ಹೋಗುತ್ತಲೇ ಇತ್ತು. ಈಗ ‘ಬ್ಲಿಂಕ್’ ನಿರ್ಮಾಪಕ ರವಿಚಂದ್ರ ಎ.ಜೆ ಮತ್ತು ‘ಶಾಖಾಹಾರಿ’ ನಿರ್ಮಾಪಕ ರಾಜೇಶ್ ಕೀಳಂಬಿ ಈ ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಮುಂದೆ ಬಂದಿದ್ದಾರೆ. ಈ ಮೂಲಕ ಚಿತ್ರಕ್ಕೆ ಮತ್ತೆ ಜೀವ ಬಂದಿದೆ.
ಇದನ್ನೂ ಓದಿ:- ಶಂಕರನ ಮಗ ಹಾಗೂ ಸಿಂಬನ ಕಥೆಯೇ ‘ನಾನು ಮತ್ತು ಗುಂಡ 2’
ಇದಕ್ಕೂ ಮೊದಲು ತಮ್ಮ ಜನನಿ ಪಿಕ್ಚರ್ಸ್ ಬ್ಯಾನರ್ ಅಡಿ ‘BTS’, ‘ನೋಡಿದವರು ಏನಂತರೆ’, ‘ಅನಾಮಧೇಯ ಅಶೋಕ್ ಕುಮಾರ್’ ಮತ್ತು ‘ಭಾವ ತೀರ ಯಾನ’ ಸೇರಿದಂತೆ ಕೆಲವು ಮೆಚ್ಚುಗೆ ಪಡೆದ ಚಿತ್ರಗಳನ್ನು ನಿರ್ಮಾಪಕ ರವಿಚಂದ್ರ ವಿತರಿಸಿದ್ದರು. ಈ ಸಾಲಿಗೆ ಈಗ ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರ ಸಹ ಸೇರಿದೆ.
ಈ ಕುರಿತು ಮಾತನಾಡುವ ನಿರ್ದೇಶಕ ಸಮರ್ಥ್ ಕಡಕೋಳ್, ‘ರಾಜೇಶ್ ಮತ್ತು ರವಿಚಂದ್ರ ಅವರ ಆಗಮನದಿಂದ ಚಿತ್ರಕ್ಕೆ ಮತ್ತಷ್ಟು ಬಲ ಬಂದಂತೆ ಆಗಿದೆ. ಇಬ್ಬರೂ ನಮ್ಮ ಚಿತ್ರದ ಬಿಡುಗಡೆಗೆ ಕೈ ಜೋಡಿಸಿರುವುದು ಖುಷಿಯಾಗಿದೆ’ ಎನ್ನುತ್ತಾರೆ.
‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದಲ್ಲಿ ದಿಗಂತ್ ಜೊತೆಗೆ ನಿಧಿ ಸುಬ್ಬಯ್ಯ, ಧನು ಹರ್ಷ, ನಿರೂಪ್ ಭಂಡಾರಿ, ‘ಭಜರಂಗಿ’ ಲೋಕಿ, ಕೃಷ್ಣ ಹೆಬ್ಬಾಳೆ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…