ಮನರಂಜನೆ

‘ಎಡಗೈ’ ಜೊತಯಾದ ‘ಬ್ಲಿಂಕ್’ ಮತ್ತು ‘ಶಾಖಹಾರಿ’ ನಿರ್ಮಾಪಕರು

ಕಳೆದ ವರ್ಷ ಬಿಡುಗಡೆಯಾದ ಚಿತ್ರಗಳ ಪೈಕಿ ಹಣಕಾಸಿನ ವಿಷಯದಲ್ಲಿ ದೊಡ್ಡ ಸದ್ದು ಮಾಡದ ಮತ್ತು ಕಂಟೆಂಟ್‍ ವಿಷಯದಲ್ಲಿ ಗಮನಸೆಳೆದ ಚಿತ್ರಗಳೆಂದೆರೆ ಅದು ‘ಬ್ಲಿಂಕ್‍’ ಮತ್ತು ‘ಶಾಖಾಹಾರಿ’. ಆ ಚಿತ್ರಗಳ ನಂತರ ಆ ನಿರ್ಮಾಪಕರು, ಹೊಸ ಚಿತ್ರಗಳನ್ನು ನಿರ್ಮಿಸದಿದ್ದರೂ, ಒಂದಿಷ್ಟು ಚಿತ್ರಗಳ ವಿತರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈಗ ’ಬ್ಲಿಂಕ್’ ಮತ್ತು ‘ಶಾಖಾಹಾರಿ’ ನಿರ್ಮಾಪಕರು, ದಿಗಂತ್‍ ಅಭಿನಯದ ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದ ಬಿಡುಗಡೆಗೆ ಕೈಜೋಡಿಸಿದ್ದಾರೆ.

ದಿಗಂತ್ ನಟನೆಯ ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರೀಕರಣ ಮುಗಿದು ಹಲವು ಸಮಯವಾದರೂ, ಚಿತ್ರವು ಕಾರಣಾಂತರಗಳಿಂದ ಬಿಡುಗಡೆ ಮುಂದಕ್ಕೆ ಹೋಗುತ್ತಲೇ ಇತ್ತು. ಈಗ ‘ಬ್ಲಿಂಕ್‍’ ನಿರ್ಮಾಪಕ ರವಿಚಂದ್ರ ಎ.ಜೆ ಮತ್ತು ‘ಶಾಖಾಹಾರಿ’ ನಿರ್ಮಾಪಕ ರಾಜೇಶ್ ಕೀಳಂಬಿ ಈ ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಮುಂದೆ ಬಂದಿದ್ದಾರೆ. ಈ ಮೂಲಕ ಚಿತ್ರಕ್ಕೆ ಮತ್ತೆ ಜೀವ ಬಂದಿದೆ.

ಇದನ್ನೂ ಓದಿ:- ಶಂಕರನ ಮಗ ಹಾಗೂ ಸಿಂಬನ ಕಥೆಯೇ ‘ನಾನು ಮತ್ತು ಗುಂಡ 2’

ಇದಕ್ಕೂ ಮೊದಲು ತಮ್ಮ ಜನನಿ ಪಿಕ್ಚರ್ಸ್ ಬ್ಯಾನರ್ ಅಡಿ ‘BTS’, ‘ನೋಡಿದವರು ಏನಂತರೆ’, ‘ಅನಾಮಧೇಯ ಅಶೋಕ್ ಕುಮಾರ್’ ಮತ್ತು ‘ಭಾವ ತೀರ ಯಾನ’ ಸೇರಿದಂತೆ ಕೆಲವು ಮೆಚ್ಚುಗೆ ಪಡೆದ ಚಿತ್ರಗಳನ್ನು ನಿರ್ಮಾಪಕ ರವಿಚಂದ್ರ ವಿತರಿಸಿದ್ದರು. ಈ ಸಾಲಿಗೆ ಈಗ ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರ ಸಹ ಸೇರಿದೆ.

ಈ ಕುರಿತು ಮಾತನಾಡುವ ನಿರ್ದೇಶಕ ಸಮರ್ಥ್‍ ಕಡಕೋಳ್‍, ‘ರಾಜೇಶ್‍ ಮತ್ತು ರವಿಚಂದ್ರ ಅವರ ಆಗಮನದಿಂದ ಚಿತ್ರಕ್ಕೆ ಮತ್ತಷ್ಟು ಬಲ ಬಂದಂತೆ ಆಗಿದೆ. ಇಬ್ಬರೂ ನಮ್ಮ ಚಿತ್ರದ ಬಿಡುಗಡೆಗೆ ಕೈ ಜೋಡಿಸಿರುವುದು ಖುಷಿಯಾಗಿದೆ’ ಎನ್ನುತ್ತಾರೆ.

‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದಲ್ಲಿ ದಿಗಂತ್‍ ಜೊತೆಗೆ ನಿಧಿ ಸುಬ್ಬಯ್ಯ, ಧನು ಹರ್ಷ, ನಿರೂಪ್ ಭಂಡಾರಿ, ‘ಭಜರಂಗಿ’ ಲೋಕಿ, ಕೃಷ್ಣ ಹೆಬ್ಬಾಳೆ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

2 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

2 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

2 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

5 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

5 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

5 hours ago