ಮನರಂಜನೆ

ಕಮ್ಮಂಗಿ ನನ್ ಮಗನೇ’ ಎಂದು ಹಾಡಿದ ಶರಣ್‍, ವಿ. ಹರಿಕೃಷ್ಣ

ಶರಣ್‍ ಇತ್ತೀಚಿನ ಕೆಲವು ತಿಂಗಳುಗಳಲ್ಲಿ ‘ಮರ್ಯಾದೆ ಪ್ರಶ್ನೆ’, ‘ಟಕಿಲಾ’ ಮುಂತಾದ ಚಿತ್ರಗಳಿಗೆ ಹಾಡು ಹಾಡಿದ್ದರು. ಇದೀಗ ಅವರು ಪ್ರಣಂ ದೇವರಾಜ್ ಅಭಿನಯದ ‘S/O ಮುತ್ತಣ್ಣ’ ಚಿತ್ರದ ಹಾಡೊಂದಕ್ಕೆ ಧ್ವನಿಯಾಗಿದ್ದಾರೆ.

‘S/O ಮುತ್ತಣ್ಣ’ ಚಿತ್ರದ ‘ಕಮಂಗಿ ನನ್‍ ಮಗನೇ …’ ಎಂಬ ಹಾಡಿಗೆ ಶರಣ್ ಹಾಗೂ ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಧ್ವನಿಯಗಿದ್ದಾರೆ. ಈ ಹಾಡನ್ನು ಯೋಗರಾಜ್‍ ಭಟ್‍ ಬರೆದಿದ್ದಾರೆ. ಸಚಿನ್ ಬಸ್ರೂರ್ ಸಂಗೀತ ಸಂಯೋಜಿಸಿದ್ದು, ರಂಗಾಯಣ ರಘು ಹಾಗೂ ಪ್ರಣಂ ದೇವರಾಜ್ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ. ಈ ಹಾಡು ಮೇ.17 ರಂದು ಬಿಡುಗಡೆಯಾಗಲಿದೆ.

ಶ್ರೀಕಾಂತ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ‘S/O ಮುತ್ತಣ್ಣ’ ಚಿತ್ರವು ತಂದೆ-ಮಗನ ಬಾಂಧವ್ಯದ ಸುತ್ತ ಸುತ್ತುವ ಚಿತ್ರವಾಗಿದ್ದು, ರಂಗಾಯಣ ರಘು ಅಪ್ಪನಾಗಿ ನಟಿಸಿದರೆ, ಪ್ರಣಂ ದೇವರಾಜ್‍ ಮಗನಾಗಿ ಕಾಣಿಸಿಕೊಂಡಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ಪ್ರಣಂ ದೇವರಾಜ್‍, ‘ಮನುಷ್ಯ ತಂದೆಯಾಗುವ ಮುಂಚೆ ಸಾಮಾನ್ಯ ಮನುಷ್ಯ. ಹೆಂಡ್ತಿ, ಕೆಲಸ, ಮನೆ ನೋಡಿಕೊಳ್ಳುತ್ತಾನೆ. ಆದರೆ, ತಂದೆಯಾದ ಬಳಿಕ ರೋಲ್ ಮಾಡೆಲ್, ಟೀಚರ್, ಸ್ಟೋರಿ ಟೆಲ್ಲರ್ ಆಗ್ತಾರೆ. ಅಪ್ಪ-ಮಗನ ಬಾಂಧವ್ಯವನ್ನು ಹೇಗೆ ಇರುತ್ತದೆ ಎನ್ನುವುದನ್ನು ‘ಸನ್ ಆಫ್ ಮುತ್ತಣ್ಣ’ದಲ್ಲಿ ತೋರಿಸಲಾಗಿದೆ’ ಎಂದು ಹೇಳುತ್ತಾರೆ.

ಪುರಾತನ ಫಿಲಂಸ್ ನಿರ್ಮಾಣ ಮಾಡಿರುವ ‘ಸನ್‍ ಆಫ್‍ ಮುತ್ತಣ್ಣ’ ಚಿತ್ರದಲ್ಲಿ ಪ್ರಣಂಗೆ ನಾಯಕಿಯಾಗಿ ಖುಷಿ ರವಿ ಅಭಿನಯಿಸಿದ್ದು, ಸುಚೇಂದ್ರ ಪ್ರಸಾದ್‌, ಗಿರೀಶ್‌ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್‌ ಪ್ರಭು, ಸುಧಾ ಬೆಳವಾಡಿ ಮುಂತಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

‘S/o ಮುತ್ತಣ್ಣ’ ಚಿತ್ರಕ್ಕೆ ಸಚಿನ್‍ ಬಸ್ರೂರು ಸಂಗೀತ ಮತ್ತು ಸ್ಕೇಟಿಂಗ್ ಕೃಷ್ಣ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅನಿಲ ಸಿಲಿಂಡರ್ ಬೆಲೆ ಏರಿಕೆ ತರವಲ್ಲ

ಪಶ್ಚಿಮ ಏಷ್ಯಾದ ಯುದ್ಧದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ರೂ.೬೦…

11 mins ago

ಓದುಗರ ಪತ್ರ: ಮೈಸೂರು ಆಕಾಶವಾಣಿ ಪ್ರಸರಣ ಸಾಮರ್ಥ್ಯ ಹೆಚ್ಚಿಸಿ

ಭಾರತದಲ್ಲೇ ಮೊದಲ ಆಕಾಶವಾಣಿ ಕೇಂದ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮೈಸೂರಿನ ಆಕಾಶವಾಣಿ ಕೇಂದ್ರ ೯೦ ವಸಂತಗಳನ್ನು ಪೂರೈಸಿದ್ದು, ಪ್ರಭಾವಿ ಸಾರ್ವಜನಿಕ…

14 mins ago

ಓದುಗರ ಪತ್ರ: ಆಟ… ಕಿರೀಟ !

ಟಿ-೨೦ವಿಶ್ವಕಪ್‌ನಲ್ಲಿ ಕಿವೀಸ್ ಕಿವಿ ಹಿಂಡಿದ ಇಂಡಿಯಾ ಆಡಿದ್ದು ದಾಖಲೆಗಳ ಆಟ ! ಅದಕ್ಕೇ ಒಲಿಯಿತು ಭಾರತಕ್ಕೆ ವಿಶ್ವಕಪ್ ಕಿರೀಟ !…

16 mins ago

ಓದುಗರ ಪತ್ರ: ಕೊಲ್ಲಿ ಯುದ್ಧ: ವಿಶ್ವ ಸಂಸ್ಥೆಯ ಮೌನವೇಕೆ?

ಇರಾನ್ ಮೇಲೆ ಇಸ್ರೇಲ್-ಅಮೆರಿಕ ರಾಷ್ಟ್ರಗಳು ಯುದ್ಧ ನಡೆಸುತ್ತಿದ್ದು, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲ ಖಮೇನಿ ಅವರನ್ನು ಹತ್ಯೆ ಮಾಡಿವೆ. ಇದರಿಂದ…

19 mins ago

ಓದುಗರ ಪತ್ರ: ಕಾಲೇಜು ಮೈದಾನದಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಬೇಡ

ಮೈಸೂರಿನ ಮಹಾರಾಜ ಕಾಲೇಜಿಗೆ ೧೩೭ ವರ್ಷಗಳ ಇತಿಹಾಸವಿದೆ. ಕಾಲೇಜಿನಲ್ಲಿ ಉತ್ತಮ ಬೋಧನಾ ವ್ಯವಸ್ಥೆಯೂ ಇದ್ದು, ಪ್ರತಿವರ್ಷ ನೂರಾರು ವಿದ್ಯಾರ್ಥಿಗಳು ಇಲ್ಲಿ…

21 mins ago

ಗೂಗಲ್ ಮಹಾತ್ಮೆ: ಗೂಗಲ್ ಮಾತ್ರ ಸತ್ಯ, ಉಳಿದೆಲ್ಲವೂ ಮಿಥ್ಯ?

ರಮಾನಂದ ಶರ್ಮ ಯಾವುದೋ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಟೆಕ್ಕಿಯೊಬ್ಬರು ವೈದ್ಯರ ಬಳಿ ಹೋಗಿದ್ದರಂತೆ. ವೈದ್ಯರು ಅವರನ್ನು ಸ್ಥೂಲವಾಗಿ ಪರೀಕ್ಷಿಸಿ, ಮೂರು…

3 hours ago