ಮನರಂಜನೆ

ಅಚ್ಯುತ್‍ ಕುಮಾರ್ ಮಗಳ ಪಾತ್ರದಲ್ಲಿ ಶರಣ್ಯ: ಕೌಂತೇಯ ಚಿತ್ರಕ್ಕೆ ಚಾಲನೆ

‘ಕೃಷ್ಣಂ ಪ್ರಣಯ ಸಖಿ’, ‘ಫಾರೆಸ್ಟ್’ ಮುಂತಾದ ಚಿತ್ರಗಳಲ್ಲಿ ನಟಿಸಿರುವ ಶರಣ್ಯ ಶೆಟ್ಟಿ, ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರದ ಭಾಗವಾಗಿದ್ದಾರೆ. ಈ ಬಾರಿ ಅವರು ‘ಕೌಂತೇಯ’ ಚಿತ್ರದಲ್ಲಿ ಅಚ್ಯುತ್ ಕುಮಾರ್ ಮಗಳಾಗಿ ನಟಿಸುತ್ತಿದ್ದು, ಈ ಚಿತ್ರದ ಮುಹೂರ್ತ ಇತ್ತೀಚೆಗೆ ಕಂಠೀರವ ಸ್ಟುಡಿಯೋದಲ್ಲಿ ನಡೆದಿದೆ.

ಹೆಸರು ಕೇಳಿದರೆ ಇದೊಂದು ಪೌರಾಣಿಕ ಚಿತ್ರ ಎಂದನಿಸಬಹುದು. ಏಕೆಂದರೆ, ‘ಕೌಂತೇಯ’ ಎಂದರೆ ಮಹಾಭಾರತದ ಕರ್ಣನ ಇನ್ನೊಂದು ಹೆಸರು. ಹಾಗಂತ ಇದು ಪೌರಾಣಿಕ ಚಿತ್ರವಲ್ಲ, ಇದೊಂದು ಕ್ರೈಂ ಸ್ಟೋರಿಯಂತೆ. ಕಥೆಗೆ ಇದೇ ಹೆಸರು ಸೂಕ್ತ ಎಂದು ಈ ಹೆಸರು ಇಡಲಾಗಿದೆ.

‘ಕೌಂತೇಯ’ ಚಿತ್ರವನ್ನು ಮಹಾಕಾಳಿ ಪಿಕ್ಚರ್ಸ್ ಬ್ಯಾನರ್ ಅಡಿ ಸುರೇಶ್‍ ಕುಮಾರ್ ನಿರ್ಮಿಸುತ್ತಿದ್ದು, ಬಿ.ಕೆ. ಚಂದ್ರಹಾಸ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ‘ಬಿಗ್ ಬಾಸ್’ ನೀತು ಕೂಡ ಈ ಚಿತ್ರದಲ್ಲಿ ಒಬ್ಬ ಮಹಿಳಾ ಪೊಲೀಸ್ ಪಾತ್ರ ಮಾಡುತ್ತಿದ್ದಾರೆ. ಸುರೇಶ್‍ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಪಿ.ಎಲ್. ರವಿ ಛಾಯಾಗ್ರಹಣ, ಬಿ.ಜೆ.ಭರತ್ ಹಿನ್ನೆಲೆ ಸಂಗೀತವಿದೆ.

ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಚಂದ್ರಹಾಸ, ‘ಇದೊಂದು ಮರ್ಡರ್ ಮಿಸ್ಟ್ರಿ ಕುರಿತಾದ ಚಿತ್ರ. ಜೂನ್.೯ರಿಂದ ಮೊದಲ ಹಂತದ ಚಿತ್ರೀಕರಣ ಮಾಡುತ್ತಿದ್ದೇವೆ. ಬೆಂಗಳೂರು ಹಾಗೂ ಮೈಸೂರಿನಲ್ಲೇ ಬಹುತೇಕ ಚಿತ್ರೀಕರಣ ನಡೆಯಲಿದೆ. ಚಿತ್ರದಲ್ಲಿ ಹಾಡುಗಳಿಲ್ಲ. ಹಿನ್ನೆಲೆ ಸಂಗೀತ ಪ್ರಮುಖ ಪಾತ್ರ ವಹಿಸುತ್ತದೆ’ ಎಂದರು.

ಅಚ್ಯುತ್ ಕುಮಾರ್ ಈ ಚಿತ್ರದಲ್ಲಿ ರಂಗನಾಥ ಎಂಬ ನಿವೃತ್ತಿಯ ಅಂಚಿನಲ್ಲಿರುವ ಸಬ್ ಇನ್ಸ್ ಪೆಕ್ಟರ್ ಪಾತ್ರ ಮಾಡುತ್ತಿದ್ದಾರಂತೆ. ‘ಕರ್ತವ್ಯದ ಕೊನೆಯ ದಿನಗಳಲ್ಲಿ ಆತ ಎದುರಿಸುವ ರೋಚಕ ಕೇಸ್ ಒಂದರ ಕಥೆಯಿದು. ಕಡೆಯ ದಿನಗಳಲ್ಲಿ ಆತ ಈ ಕೊಲೆ ಕೇಸಿನ ಜತೆಗೆ ಏನೇನು ಸವಾಲುಗಳನ್ನು ಎದುರಿಸುತ್ತಾನೆ ಎಂಬುದನ್ನು ಥ್ರಿಲ್ಲಿಂಗ್ ಆಗಿ ಹೇಳುವ ಪ್ರಯತ್ನ ಮಾಡಲಾಗುತ್ತಿದೆ’ ಎಂದರು.

ಶರಣ್ಯ ಶೆಟ್ಟಿ ಇದೇ ಮೊದಲ ಬಾರಿಗೆ ಪತ್ರಕರ್ತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಅಚ್ಯುತ್ ಕುಮಾರ್ ಅವರ ಮಗಳಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ಇಲ್ಲಿ ನಾನೊಬ್ಬ ಕ್ರೈಮ್ ರಿಪೋರ್ಟರ್ ಅಗಿ ನಟಿಸುತ್ತಿದ್ದು, ತುಂಬಾ ಗಟ್ಟಿ ಮತ್ತು ಬೋಲ್ಡ್ ಆದ ಪಾತ್ರ ನನ್ನದು. ಜತೆಗೆ ತಂದೆ ಮಗಳ ನಡುವಿನ ಬಾಂಧವ್ಯ ಸಹ ಇರುತ್ತದೆ’ ಎಂದರು.

ಆಂದೋಲನ ಡೆಸ್ಕ್

Recent Posts

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

6 hours ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

9 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

10 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

11 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

11 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

11 hours ago