ಮನರಂಜನೆ

ಅಚ್ಯುತ್‍ ಕುಮಾರ್ ಮಗಳ ಪಾತ್ರದಲ್ಲಿ ಶರಣ್ಯ: ಕೌಂತೇಯ ಚಿತ್ರಕ್ಕೆ ಚಾಲನೆ

‘ಕೃಷ್ಣಂ ಪ್ರಣಯ ಸಖಿ’, ‘ಫಾರೆಸ್ಟ್’ ಮುಂತಾದ ಚಿತ್ರಗಳಲ್ಲಿ ನಟಿಸಿರುವ ಶರಣ್ಯ ಶೆಟ್ಟಿ, ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರದ ಭಾಗವಾಗಿದ್ದಾರೆ. ಈ ಬಾರಿ ಅವರು ‘ಕೌಂತೇಯ’ ಚಿತ್ರದಲ್ಲಿ ಅಚ್ಯುತ್ ಕುಮಾರ್ ಮಗಳಾಗಿ ನಟಿಸುತ್ತಿದ್ದು, ಈ ಚಿತ್ರದ ಮುಹೂರ್ತ ಇತ್ತೀಚೆಗೆ ಕಂಠೀರವ ಸ್ಟುಡಿಯೋದಲ್ಲಿ ನಡೆದಿದೆ.

ಹೆಸರು ಕೇಳಿದರೆ ಇದೊಂದು ಪೌರಾಣಿಕ ಚಿತ್ರ ಎಂದನಿಸಬಹುದು. ಏಕೆಂದರೆ, ‘ಕೌಂತೇಯ’ ಎಂದರೆ ಮಹಾಭಾರತದ ಕರ್ಣನ ಇನ್ನೊಂದು ಹೆಸರು. ಹಾಗಂತ ಇದು ಪೌರಾಣಿಕ ಚಿತ್ರವಲ್ಲ, ಇದೊಂದು ಕ್ರೈಂ ಸ್ಟೋರಿಯಂತೆ. ಕಥೆಗೆ ಇದೇ ಹೆಸರು ಸೂಕ್ತ ಎಂದು ಈ ಹೆಸರು ಇಡಲಾಗಿದೆ.

‘ಕೌಂತೇಯ’ ಚಿತ್ರವನ್ನು ಮಹಾಕಾಳಿ ಪಿಕ್ಚರ್ಸ್ ಬ್ಯಾನರ್ ಅಡಿ ಸುರೇಶ್‍ ಕುಮಾರ್ ನಿರ್ಮಿಸುತ್ತಿದ್ದು, ಬಿ.ಕೆ. ಚಂದ್ರಹಾಸ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ‘ಬಿಗ್ ಬಾಸ್’ ನೀತು ಕೂಡ ಈ ಚಿತ್ರದಲ್ಲಿ ಒಬ್ಬ ಮಹಿಳಾ ಪೊಲೀಸ್ ಪಾತ್ರ ಮಾಡುತ್ತಿದ್ದಾರೆ. ಸುರೇಶ್‍ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಪಿ.ಎಲ್. ರವಿ ಛಾಯಾಗ್ರಹಣ, ಬಿ.ಜೆ.ಭರತ್ ಹಿನ್ನೆಲೆ ಸಂಗೀತವಿದೆ.

ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಚಂದ್ರಹಾಸ, ‘ಇದೊಂದು ಮರ್ಡರ್ ಮಿಸ್ಟ್ರಿ ಕುರಿತಾದ ಚಿತ್ರ. ಜೂನ್.೯ರಿಂದ ಮೊದಲ ಹಂತದ ಚಿತ್ರೀಕರಣ ಮಾಡುತ್ತಿದ್ದೇವೆ. ಬೆಂಗಳೂರು ಹಾಗೂ ಮೈಸೂರಿನಲ್ಲೇ ಬಹುತೇಕ ಚಿತ್ರೀಕರಣ ನಡೆಯಲಿದೆ. ಚಿತ್ರದಲ್ಲಿ ಹಾಡುಗಳಿಲ್ಲ. ಹಿನ್ನೆಲೆ ಸಂಗೀತ ಪ್ರಮುಖ ಪಾತ್ರ ವಹಿಸುತ್ತದೆ’ ಎಂದರು.

ಅಚ್ಯುತ್ ಕುಮಾರ್ ಈ ಚಿತ್ರದಲ್ಲಿ ರಂಗನಾಥ ಎಂಬ ನಿವೃತ್ತಿಯ ಅಂಚಿನಲ್ಲಿರುವ ಸಬ್ ಇನ್ಸ್ ಪೆಕ್ಟರ್ ಪಾತ್ರ ಮಾಡುತ್ತಿದ್ದಾರಂತೆ. ‘ಕರ್ತವ್ಯದ ಕೊನೆಯ ದಿನಗಳಲ್ಲಿ ಆತ ಎದುರಿಸುವ ರೋಚಕ ಕೇಸ್ ಒಂದರ ಕಥೆಯಿದು. ಕಡೆಯ ದಿನಗಳಲ್ಲಿ ಆತ ಈ ಕೊಲೆ ಕೇಸಿನ ಜತೆಗೆ ಏನೇನು ಸವಾಲುಗಳನ್ನು ಎದುರಿಸುತ್ತಾನೆ ಎಂಬುದನ್ನು ಥ್ರಿಲ್ಲಿಂಗ್ ಆಗಿ ಹೇಳುವ ಪ್ರಯತ್ನ ಮಾಡಲಾಗುತ್ತಿದೆ’ ಎಂದರು.

ಶರಣ್ಯ ಶೆಟ್ಟಿ ಇದೇ ಮೊದಲ ಬಾರಿಗೆ ಪತ್ರಕರ್ತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಅಚ್ಯುತ್ ಕುಮಾರ್ ಅವರ ಮಗಳಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ಇಲ್ಲಿ ನಾನೊಬ್ಬ ಕ್ರೈಮ್ ರಿಪೋರ್ಟರ್ ಅಗಿ ನಟಿಸುತ್ತಿದ್ದು, ತುಂಬಾ ಗಟ್ಟಿ ಮತ್ತು ಬೋಲ್ಡ್ ಆದ ಪಾತ್ರ ನನ್ನದು. ಜತೆಗೆ ತಂದೆ ಮಗಳ ನಡುವಿನ ಬಾಂಧವ್ಯ ಸಹ ಇರುತ್ತದೆ’ ಎಂದರು.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

2 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

3 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

3 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

4 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

5 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

9 hours ago