ಮನರಂಜನೆ

ಪನೋರಮ ವಿಭಾಗಕ್ಕೆ ಕನ್ನಡದ ‘ಕೆರೆಬೇಟೆ’ ಮತ್ತು ‘ವೆಂಕ್ಯಾ’ ಆಯ್ಕೆ

ಪ್ರತಿಷ್ಠಿತ ಚಿತ್ರೋತ್ಸವಗಳಲ್ಲಿ ಒಂದಾಗಿರುವ ಗೋವಾದಲ್ಲಿ ನಡೆಯುವ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ (IFFI) ಕನ್ನಡದಿಂದ ‘ಕೆರೆಬೇಟೆ’ ಮತ್ತು ‘ವೆಂಕ್ಯಾ’ ಚಿತ್ರಗಳು ಆಯ್ಕೆಯಾಗಿವೆ.

ಗೋವಾದ ಪಣಜಿಯಲ್ಲಿ ನಡೆಯುವ 55ನೇ ಭಾರತೀಯ ಅಂತರಾಷ್ಟ್ರೀಯ ಚಿತ್ರೋತ್ಸವವು ನವೆಂಬರ್‍.20ರಿಂದ 28ರವರೆಗೂ ನಡೆಯಲಿದೆ. ಈ ಚಿತ್ರೋತ್ಸವಕ್ಕೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಅನೇಕ ಸಿನಿ ಗಣ್ಯರು ಸಾಕ್ಷಿಯಾಗಲಿದ್ದಾರೆ.

ಈ ಬಾರಿ ಪನೋರಮ ವಿಭಾಗಕ್ಕೆ 25 ಚಲನಚಿತ್ರಗಳು ಮತ್ತು 20 ಸಾಕ್ಷ್ಯಚಿತ್ರಗಳನ್ನು ಆಯ್ಕೆ ಮಾಡಲಾಗಿದೆ. ಭಾರತೀಯ ಪನೋರಮ ವಿಭಾಗದ ಆರಂಭಿಕ ಸಿನಿಮಾವಾಗಿ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಹಿಂದಿ ಚಿತ್ರವನ್ನು ಆಯ್ಕೆ ಮಾಡಲಾಗಿದೆ. ಇನ್ನು ಎರಡನೇ ಚಿತ್ರವಾಗಿ ಕನ್ನಡದ ‘ಕೆರೆಬೇಟೆ’ ಆಯ್ಕೆಯಾಗಿದೆ. ಇನ್ನೊಂದು ಚಿತ್ರವಾಗಿ ಪವನ್‍ ಒಡೆಯರ್‍ ನಿರ್ಮಾಣದ ಮತ್ತು ಸಾಗರ್‍ ಪುರಾಣಿಕ್‍ ನಟನೆ ಮತ್ತು ನಿರ್ದೇಶನದ ‘ವೆಂಕ್ಯಾ’ ಚಿತ್ರವು ಪ್ರದರ್ಶನವಾಗಲಿದೆ.

‘ಕೆರೆಬೇಟೆ’ ಚಿತ್ರವು ಮಾರ್ಚ್.15ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ಜನಮನ ಸಿನಿಮಾ ಸಂಸ್ಥೆಯಲ್ಲಿ ಮೂಡಿ ಬಂದಿದ್ದ ಚಿತ್ರದಲ್ಲಿ ಗೌರಿಶಂಕರ್‍, ಬಿಂದು ಶಿವರಾಂ, ಗೋಪಾಲಕೃಷ್ಣ ದೇಶಪಾಂಡೆ, ಹರಣಿ ಮುಂತಾದವರು ನಟಿಸಿದ್ದು, ರಾಜ್‍ಗುರು ಈ ಚಿತ್ರವನ್ನು ನಿರ್ದೇಶಿಸಿದ್ದರು.

ಇನ್ನು, ‘ವೆಂಕ್ಯಾ’ ಚಿತ್ರವನ್ನು ಪವನ್‍ ಒಡೆಯರ್‍ ತಮ್ಮ ಒಡೆಯರ್‍ ಮೂವೀಸ್‍ ಸಂಸ್ಥೆಯಡಿ ನಿರ್ಮಿಸಿದರೆ, ಸಾಗರ್‍ ಪುರಾಣಿಕ್‍ ನಿರ್ದೇಶನ ಮಾಡುವುದರ ಜೊತೆಗೆ ಚಿತ್ರದಲ್ಲಿ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಸಾಗರ್‌ಗೆ ಜೋಡಿಯಾಗಿ ಶಿಮ್ಲಾದ ರೂಪಾಲಿ ಸೂದ್ ಅಭಿನಯಿಸಿದ್ದಾರೆ.

‘ಕೆರೆಬೇಟೆ’ ಮತ್ತು ‘ವೆಂಕ್ಯಾ’ ಚಿತ್ರಗಳಲ್ಲದೆ, ಮಲಯಾಳಂ, ತಮಿಳು, ಮರಾಠಿ, ಬೆಂಗಾಲಿ, ತೆಲುಗು ಭಾಷೆಗಳ ಕೆಲವು ಜನಪ್ರಿಯ ಸಿನಿಮಾಗಳು ಈ ಪನೋರಮ ವಿಭಾಗದಲ್ಲಿ ಪ್ರದರ್ಶನ ಕಾಣಲಿವೆ.

ಆಂದೋಲನ ಡೆಸ್ಕ್

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

5 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

5 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

6 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

6 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

7 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

7 hours ago