ಮನರಂಜನೆ

ಪನೋರಮ ವಿಭಾಗಕ್ಕೆ ಕನ್ನಡದ ‘ಕೆರೆಬೇಟೆ’ ಮತ್ತು ‘ವೆಂಕ್ಯಾ’ ಆಯ್ಕೆ

ಪ್ರತಿಷ್ಠಿತ ಚಿತ್ರೋತ್ಸವಗಳಲ್ಲಿ ಒಂದಾಗಿರುವ ಗೋವಾದಲ್ಲಿ ನಡೆಯುವ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ (IFFI) ಕನ್ನಡದಿಂದ ‘ಕೆರೆಬೇಟೆ’ ಮತ್ತು ‘ವೆಂಕ್ಯಾ’ ಚಿತ್ರಗಳು ಆಯ್ಕೆಯಾಗಿವೆ.

ಗೋವಾದ ಪಣಜಿಯಲ್ಲಿ ನಡೆಯುವ 55ನೇ ಭಾರತೀಯ ಅಂತರಾಷ್ಟ್ರೀಯ ಚಿತ್ರೋತ್ಸವವು ನವೆಂಬರ್‍.20ರಿಂದ 28ರವರೆಗೂ ನಡೆಯಲಿದೆ. ಈ ಚಿತ್ರೋತ್ಸವಕ್ಕೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಅನೇಕ ಸಿನಿ ಗಣ್ಯರು ಸಾಕ್ಷಿಯಾಗಲಿದ್ದಾರೆ.

ಈ ಬಾರಿ ಪನೋರಮ ವಿಭಾಗಕ್ಕೆ 25 ಚಲನಚಿತ್ರಗಳು ಮತ್ತು 20 ಸಾಕ್ಷ್ಯಚಿತ್ರಗಳನ್ನು ಆಯ್ಕೆ ಮಾಡಲಾಗಿದೆ. ಭಾರತೀಯ ಪನೋರಮ ವಿಭಾಗದ ಆರಂಭಿಕ ಸಿನಿಮಾವಾಗಿ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಹಿಂದಿ ಚಿತ್ರವನ್ನು ಆಯ್ಕೆ ಮಾಡಲಾಗಿದೆ. ಇನ್ನು ಎರಡನೇ ಚಿತ್ರವಾಗಿ ಕನ್ನಡದ ‘ಕೆರೆಬೇಟೆ’ ಆಯ್ಕೆಯಾಗಿದೆ. ಇನ್ನೊಂದು ಚಿತ್ರವಾಗಿ ಪವನ್‍ ಒಡೆಯರ್‍ ನಿರ್ಮಾಣದ ಮತ್ತು ಸಾಗರ್‍ ಪುರಾಣಿಕ್‍ ನಟನೆ ಮತ್ತು ನಿರ್ದೇಶನದ ‘ವೆಂಕ್ಯಾ’ ಚಿತ್ರವು ಪ್ರದರ್ಶನವಾಗಲಿದೆ.

‘ಕೆರೆಬೇಟೆ’ ಚಿತ್ರವು ಮಾರ್ಚ್.15ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ಜನಮನ ಸಿನಿಮಾ ಸಂಸ್ಥೆಯಲ್ಲಿ ಮೂಡಿ ಬಂದಿದ್ದ ಚಿತ್ರದಲ್ಲಿ ಗೌರಿಶಂಕರ್‍, ಬಿಂದು ಶಿವರಾಂ, ಗೋಪಾಲಕೃಷ್ಣ ದೇಶಪಾಂಡೆ, ಹರಣಿ ಮುಂತಾದವರು ನಟಿಸಿದ್ದು, ರಾಜ್‍ಗುರು ಈ ಚಿತ್ರವನ್ನು ನಿರ್ದೇಶಿಸಿದ್ದರು.

ಇನ್ನು, ‘ವೆಂಕ್ಯಾ’ ಚಿತ್ರವನ್ನು ಪವನ್‍ ಒಡೆಯರ್‍ ತಮ್ಮ ಒಡೆಯರ್‍ ಮೂವೀಸ್‍ ಸಂಸ್ಥೆಯಡಿ ನಿರ್ಮಿಸಿದರೆ, ಸಾಗರ್‍ ಪುರಾಣಿಕ್‍ ನಿರ್ದೇಶನ ಮಾಡುವುದರ ಜೊತೆಗೆ ಚಿತ್ರದಲ್ಲಿ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಸಾಗರ್‌ಗೆ ಜೋಡಿಯಾಗಿ ಶಿಮ್ಲಾದ ರೂಪಾಲಿ ಸೂದ್ ಅಭಿನಯಿಸಿದ್ದಾರೆ.

‘ಕೆರೆಬೇಟೆ’ ಮತ್ತು ‘ವೆಂಕ್ಯಾ’ ಚಿತ್ರಗಳಲ್ಲದೆ, ಮಲಯಾಳಂ, ತಮಿಳು, ಮರಾಠಿ, ಬೆಂಗಾಲಿ, ತೆಲುಗು ಭಾಷೆಗಳ ಕೆಲವು ಜನಪ್ರಿಯ ಸಿನಿಮಾಗಳು ಈ ಪನೋರಮ ವಿಭಾಗದಲ್ಲಿ ಪ್ರದರ್ಶನ ಕಾಣಲಿವೆ.

ಆಂದೋಲನ ಡೆಸ್ಕ್

Recent Posts

ಕೊಡಗಿನಲ್ಲಿದ್ದನೊಬ್ಬ ಚೆ ಗುವೆರ!

ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…

25 seconds ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.21 ಗುರುವಾರ

2 hours ago

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

10 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

12 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

13 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

15 hours ago