Categories: ಮನರಂಜನೆ

ಟೈಗರ್‌ ಶ್ರಾಫ್‌ಗೆ ಆಕ್ಷನ್‌ ಕಟ್‌ ಹೇಳುತ್ತಿರುವ ಕನ್ನಡಿಗ ಎ.ಹರ್ಷ

ಬೆಂಗಳೂರು: ಕನ್ನಡದ ಯಶಸ್ವಿ ನಿರ್ದೇಶಕ ಎನಿಸಿಕೊಂಡಿರುವ ಎ. ಹರ್ಷ ಈಗ ಬಾಲಿವುಡ್‌ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಕನ್ನಡದಲ್ಲಿ ವೇದ, ಭಜರಂಗಿ, ಭಜರಂಗಿ-2 ಸಿನಿಮಾ ನಿರ್ದೇಶನ ಮಾಡಿರುವ ಹರ್ಷ, ತೆಲುಗು ಪ್ರಾಜೆಕ್ಟ್‌ ನಂತರ ಬಾಲಿವಡ್‌ ನಟ ಟೈಗರ್‌ ಶ್ರಾಫ್‌ ನಟನೆಯ ಭಾಗಿ-4 ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವು 2025ರ ಸೆಪ್ಟೆಂಬರ್‌.5ಕ್ಕೆ ತೆರೆ ಕಾಣಲಿದೆ.

ಸಜೀದ್‌ ನಾಡಿಯಾಡ್ವಾಲಾ ಎಂಟರ್ಟೈನ್ಮೆಂಟ್‌ ಬ್ಯಾನರ್‌ ಅಡಿಯಲ್ಲಿ ಭಾಗಿ-1 ಚಿತ್ರ ಬಿಡುಗಡೆಯಾಗಿತ್ತು. ಸಬೀರ್‌ ಖಾನ್‌ ಇದನ್ನು ನಿರ್ದೇಶಿಸಿದರು.

ನಂತರ ಅಹಮದ್‌ ಖಾನ್‌ ನಿರ್ದೇಶನದಲ್ಲಿ ಭಾಗಿ-2 ಹಾಗೂ ಭಾಗಿ-3 ಕ್ರಮವಾಗಿ 2018 ಮತ್ತು 2020ರಲ್ಲಿ ತೆರೆಗೆ ಅಪ್ಪಳಿಸಿ ಬಾಕ್ಸಾಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್‌ ಮಾಡಿದ್ದವು. ಈ ಸಿನಿಮಾಗಳಿಗೂ ಫಾಕ್ಸ್‌ ಸ್ಟಾರ್‌ ಸ್ಟುಡಿಯೋ ಜೊತೆಯಲ್ಲಿ ನಾಡಿಯಾಡ್ವಾಲಾ ಗ್ರ್ಯಾಂಡ್ಸ್ವನ್‌ ಬ್ಯಾನರ್‌ ನಿರ್ಮಾಣ ಮಾಡಿತ್ತು.

ನಾಡಿಯಾಡ್ವಾಲಾ ಗ್ರ್ಯಾಂಡ್ಸ್ವನ್‌ ಎಂಟರ್ಟೈನ್ಮೆಂಟ್‌ ಬ್ಯಾನರ್‌ ಅಡಿಯಲ್ಲೇ ಭಾಗಿ-4 ಚಿತ್ರವನ್ನು ನಿರ್ಮಾಣ ಮಾಡಲಿದ್ದು, ಭರ್ಜರಿ ಕಲೆಕ್ಷನ್‌ ನಿರೀಕ್ಷೆಯಲ್ಲಿದ್ದಾರೆ.

ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಮ್‌ನಲ್ಲಿ ಚಿತ್ರದ ಪೋಸ್ಟರ್ ಹಂಚಿಕೊಳ್ಳುವ ಮೂಲಕ ಭಾಗಿ-4 ನಿರ್ದೇಶನದ ಸುಳಿವು ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

6 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

6 hours ago

ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ :ಸೂರ್ಯಕುಮಾರ್ ಯಾದವ್ ನಾಯಕ

ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…

6 hours ago

ಮೊಟ್ಟೆ ಕ್ಯಾನ್ಸರ್‌ ಕಾರಕವಲ್ಲ : ಕೇಂದ್ರ ವರದಿ

ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…

6 hours ago

‘ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಿ’ : ಶಿವಶಂಕರ್ ಸೂಚನೆ

ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…

6 hours ago

ಮೈಸೂರು | ನಾಳೆಯಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…

7 hours ago