Categories: ಮನರಂಜನೆ

ಟೈಗರ್‌ ಶ್ರಾಫ್‌ಗೆ ಆಕ್ಷನ್‌ ಕಟ್‌ ಹೇಳುತ್ತಿರುವ ಕನ್ನಡಿಗ ಎ.ಹರ್ಷ

ಬೆಂಗಳೂರು: ಕನ್ನಡದ ಯಶಸ್ವಿ ನಿರ್ದೇಶಕ ಎನಿಸಿಕೊಂಡಿರುವ ಎ. ಹರ್ಷ ಈಗ ಬಾಲಿವುಡ್‌ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಕನ್ನಡದಲ್ಲಿ ವೇದ, ಭಜರಂಗಿ, ಭಜರಂಗಿ-2 ಸಿನಿಮಾ ನಿರ್ದೇಶನ ಮಾಡಿರುವ ಹರ್ಷ, ತೆಲುಗು ಪ್ರಾಜೆಕ್ಟ್‌ ನಂತರ ಬಾಲಿವಡ್‌ ನಟ ಟೈಗರ್‌ ಶ್ರಾಫ್‌ ನಟನೆಯ ಭಾಗಿ-4 ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವು 2025ರ ಸೆಪ್ಟೆಂಬರ್‌.5ಕ್ಕೆ ತೆರೆ ಕಾಣಲಿದೆ.

ಸಜೀದ್‌ ನಾಡಿಯಾಡ್ವಾಲಾ ಎಂಟರ್ಟೈನ್ಮೆಂಟ್‌ ಬ್ಯಾನರ್‌ ಅಡಿಯಲ್ಲಿ ಭಾಗಿ-1 ಚಿತ್ರ ಬಿಡುಗಡೆಯಾಗಿತ್ತು. ಸಬೀರ್‌ ಖಾನ್‌ ಇದನ್ನು ನಿರ್ದೇಶಿಸಿದರು.

ನಂತರ ಅಹಮದ್‌ ಖಾನ್‌ ನಿರ್ದೇಶನದಲ್ಲಿ ಭಾಗಿ-2 ಹಾಗೂ ಭಾಗಿ-3 ಕ್ರಮವಾಗಿ 2018 ಮತ್ತು 2020ರಲ್ಲಿ ತೆರೆಗೆ ಅಪ್ಪಳಿಸಿ ಬಾಕ್ಸಾಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್‌ ಮಾಡಿದ್ದವು. ಈ ಸಿನಿಮಾಗಳಿಗೂ ಫಾಕ್ಸ್‌ ಸ್ಟಾರ್‌ ಸ್ಟುಡಿಯೋ ಜೊತೆಯಲ್ಲಿ ನಾಡಿಯಾಡ್ವಾಲಾ ಗ್ರ್ಯಾಂಡ್ಸ್ವನ್‌ ಬ್ಯಾನರ್‌ ನಿರ್ಮಾಣ ಮಾಡಿತ್ತು.

ನಾಡಿಯಾಡ್ವಾಲಾ ಗ್ರ್ಯಾಂಡ್ಸ್ವನ್‌ ಎಂಟರ್ಟೈನ್ಮೆಂಟ್‌ ಬ್ಯಾನರ್‌ ಅಡಿಯಲ್ಲೇ ಭಾಗಿ-4 ಚಿತ್ರವನ್ನು ನಿರ್ಮಾಣ ಮಾಡಲಿದ್ದು, ಭರ್ಜರಿ ಕಲೆಕ್ಷನ್‌ ನಿರೀಕ್ಷೆಯಲ್ಲಿದ್ದಾರೆ.

ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಮ್‌ನಲ್ಲಿ ಚಿತ್ರದ ಪೋಸ್ಟರ್ ಹಂಚಿಕೊಳ್ಳುವ ಮೂಲಕ ಭಾಗಿ-4 ನಿರ್ದೇಶನದ ಸುಳಿವು ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

16 mins ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

17 mins ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

19 mins ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

21 mins ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

27 mins ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

33 mins ago