ಮನರಂಜನೆ

ʼಸಿಕಂದರ್‌ʼ ನಲ್ಲಿ ಕನ್ನಡಿಗ ಕಿಶೋರ್‌

ಸಲ್ಮಾನ್‌ ಖಾನ್‌ ನಟನೆಯ ʼಸಿಕಂದರ್‌ʼ ಸಿನಿಮಾದ ಟ್ರೈಲರ್‌ ರಿಲೀಸ್‌ ಆಗಿ ಜನ ಮೆಚ್ಚುಗೆ ಪಡೆದಿದೆ. ಈ ಚಿತ್ರದಲ್ಲಿ ಸಲ್ಮಾನ್‌ ಖಾನ್‌ಗೆ ಕನ್ನಡತಿ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದು, ಚಿತ್ರದಲ್ಲಿ ಕನ್ನಡ ಪ್ರತಿಭೆಗಳ ಹವಾ ಜೋರಾಗಿದೆ.

ಸಿನಿಮಾದಲ್ಲಿ ಬಾಲಿವುಡ್‌ ಮಂದಿಗಿಂತ ದಕ್ಷಿಣದ ಕಲಾವಿದರೆ ಜಾಸ್ತಿಯಿದ್ದು, ಕನ್ನಡಿಗ ಕಿಶೋರ್‌ ಪೊಲೀಸ್‌ ಅಧಿಕಾರಿ ಪಾತ್ರದಲ್ಲಿ ಮಿಂಚಿದ್ದಾರೆ.

ಬಹುಭಾಷಾ ನಟ ಎಂದು ಸೈ ಎನಿಸಿಕೊಂಡಿರುವ ಕಿಶೋರ್‌, ಈ ಸಿನಿಮಾದಲ್ಲಿ ನಟ ಸಲ್ಮಾನ್‌ ಖಾನ್‌ ವಿರುದ್ದ ತೊಡೆತಟ್ಟಿದ್ದಾರೆ. ಟ್ರೈಲರ್‌ನಲ್ಲಿ ಇಬ್ಬರ ನಡುವೆ ಚಿಕ್ಕದಾಗಿ ಫೈಟ್‌ ಸೀನ್‌ ತೋರಿಸಲಾಗಿದೆ. ಈಗಾಗಲೇ ಟ್ರೈಲರ್‌ ನೋಡಿ ಮೆಚ್ಚರೋ ಅಭಿಮಾನಿಗಳಿಗೆ ಸಿನಿಮಾದಲ್ಲಿ ಕಿಶೋರ್‌ ಪಾತ್ರ ಹೇಗಿರಲಿದೆ ಎಂಬುದರ ಬಗ್ಗೆ ಕುತೂಹಲವಿದೆ.

ಇನ್ನೂ ಈ ಚಿತ್ರದಲ್ಲಿ ಕಾಜಲ್‌, ಬಾಹುಬಲಿ ಖ್ಯಾತಿಯ ಕಟ್ಟಪ್ಪ ಅಲಿಯಾಸ್‌ ಸತ್ಯರಾಜ್‌ ಸೇರಿದಂತೆ ಅನೇಕರು ನಟಿಸಿದ್ದಾರೆ. ದಕ್ಷಿಣದ ಖ್ಯಾತ ನಿರ್ದೇಶಕ ಎ.ಆರ್‌.ಮುರುಗದಾಸ್‌ ಈ ಚಿತ್ರವನ್ನು ನಿರ್ದೇಶನ ಮಾಡಿದ್ದು, ಇದೇ 30ರಂದು ಸಿನಿಮಾ ರಿಲೀಸ್‌ ಅಗಲಿದೆ.

ಆಂದೋಲನ ಡೆಸ್ಕ್

Recent Posts

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿದ ಮೊಜ್ತಾಬಾ? ದಾಳಿ ಬಗ್ಗೆ ಸಿಗದ ಸ್ಪಷ್ಟನೆ

ಟೆಹ್ರಾನ್ : ಇರಾನ್- ಇಸ್ರೇಲ್‌,‌ ಅಮೆರಿಕಾ ಯುದ್ಧ ದಿನಕ್ಕೊಂದು ಸ್ವರೂಪ ಪಡೆಯುತ್ತಿದ್ದು, ತಂದೆ ಸಾವಿನ ಬಳಿಕ ನೇಮಕಗೊಂಡ ಇರಾನ್‌ ಸುಪ್ರೀಂ…

2 mins ago

ಅಕ್ರಮ ಮರ ಕಡಿತಲೆ ತಡೆಗೆ ಸಚಿವ ಈಶ್ವರ್‌ ಖಂಡ್ರೆ ಖಡಕ್‌ ಸೂಚನೆ

ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…

1 hour ago

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ…

2 hours ago

ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು…

2 hours ago

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ನೀರಾವರಿ ಪೈಪ್‌ಗಳ ಬೆಲೆಯಲ್ಲೂ ಏರಿಕೆ

ಮೈಸೂರು: ಇರಾನ್‌ ಮತ್ತು ಇಸ್ರೇಲ್‌ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ…

2 hours ago

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಡಿಜಿಟಲ್‌ ಅರೆಸ್ಟ್‌ ಪ್ರಕರಣ: ಎಚ್ಚೆತ್ತುಕೊಳ್ಳದ ಜನತೆ

ಬೆಂಗಳೂರು: ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್‌ ಅರೆಸ್ಟ್‌ನಿಂದ ಕೋಟ್ಯಂತರ ರೂ. ಹಣವನ್ನು…

2 hours ago