ಸಲ್ಮಾನ್ ಖಾನ್ ನಟನೆಯ ʼಸಿಕಂದರ್ʼ ಸಿನಿಮಾದ ಟ್ರೈಲರ್ ರಿಲೀಸ್ ಆಗಿ ಜನ ಮೆಚ್ಚುಗೆ ಪಡೆದಿದೆ. ಈ ಚಿತ್ರದಲ್ಲಿ ಸಲ್ಮಾನ್ ಖಾನ್ಗೆ ಕನ್ನಡತಿ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದು, ಚಿತ್ರದಲ್ಲಿ ಕನ್ನಡ ಪ್ರತಿಭೆಗಳ ಹವಾ ಜೋರಾಗಿದೆ.
ಸಿನಿಮಾದಲ್ಲಿ ಬಾಲಿವುಡ್ ಮಂದಿಗಿಂತ ದಕ್ಷಿಣದ ಕಲಾವಿದರೆ ಜಾಸ್ತಿಯಿದ್ದು, ಕನ್ನಡಿಗ ಕಿಶೋರ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಮಿಂಚಿದ್ದಾರೆ.
ಬಹುಭಾಷಾ ನಟ ಎಂದು ಸೈ ಎನಿಸಿಕೊಂಡಿರುವ ಕಿಶೋರ್, ಈ ಸಿನಿಮಾದಲ್ಲಿ ನಟ ಸಲ್ಮಾನ್ ಖಾನ್ ವಿರುದ್ದ ತೊಡೆತಟ್ಟಿದ್ದಾರೆ. ಟ್ರೈಲರ್ನಲ್ಲಿ ಇಬ್ಬರ ನಡುವೆ ಚಿಕ್ಕದಾಗಿ ಫೈಟ್ ಸೀನ್ ತೋರಿಸಲಾಗಿದೆ. ಈಗಾಗಲೇ ಟ್ರೈಲರ್ ನೋಡಿ ಮೆಚ್ಚರೋ ಅಭಿಮಾನಿಗಳಿಗೆ ಸಿನಿಮಾದಲ್ಲಿ ಕಿಶೋರ್ ಪಾತ್ರ ಹೇಗಿರಲಿದೆ ಎಂಬುದರ ಬಗ್ಗೆ ಕುತೂಹಲವಿದೆ.
ಇನ್ನೂ ಈ ಚಿತ್ರದಲ್ಲಿ ಕಾಜಲ್, ಬಾಹುಬಲಿ ಖ್ಯಾತಿಯ ಕಟ್ಟಪ್ಪ ಅಲಿಯಾಸ್ ಸತ್ಯರಾಜ್ ಸೇರಿದಂತೆ ಅನೇಕರು ನಟಿಸಿದ್ದಾರೆ. ದಕ್ಷಿಣದ ಖ್ಯಾತ ನಿರ್ದೇಶಕ ಎ.ಆರ್.ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದು, ಇದೇ 30ರಂದು ಸಿನಿಮಾ ರಿಲೀಸ್ ಅಗಲಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…