‘ಕಣ್ಣಪ್ಪ’ ಚಿತ್ರವನ್ನು ಮೊದಲು ಏಪ್ರಿಲ್ 25ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿತ್ತು. ಆದರೆ, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ತಡವಾದ ಕಾರಣ, ಚಿತ್ರದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ಏಪ್ರಿಲ್ನಲ್ಲಿ ಬಿಡುಗಡೆ ಆಗಬೇಕಿದ್ದ ಚಿತ್ರವು, ಇದೀಗ ಜೂನ್ಗೆ ಶಿಫ್ಟ್ ಆಗಿದೆ.
‘ಕಣ್ಣಪ್ಪ’ ಚಿತ್ರವು ಜೂನ್ 27ರಂದು ಜಗತ್ತಿನಾದ್ಯಂತ ಪ್ಯಾನ್ ಇಂಡಿಯಾ ಚಿತ್ರವಾಗಿ ತೆಲುಗು, ಕನ್ನಡ, ಹಿಂದಿ, ತಮಿಳು ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.
ಶುಕ್ರವಾರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಚಿತ್ರದ ಅಧಿಕೃತ ಬಿಡುಗಡೆ ದಿನಾಂಕದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದಾರೆ. ಈ ಸಂದರ್ಭದಲ್ಲಿ ಡಾ. ಮೋಹನ್ ಬಾಬು, ವಿಷ್ಣು ಮಂಚು, ಪ್ರಭುದೇವ ಮತ್ತು ಚಿತ್ರದ ಕಾರ್ಯಕಾರಿ ನಿರ್ಮಾಪಕ ವಿನಯ್ ಮಹೇಶ್ವರಿ ಹಾಜರಿದ್ದರು.
‘ಕಣ್ಣಪ್ಪ’ ಸಿನಿಮಾ ಬರೀ ಇತಿಹಾಸವಲ್ಲ, ಇದು ಎರಡನೇ ಶತಮಾನದ ಚೋಳರ ಕಾಲದ ಕಥೆ. 14ನೇ ಶತಮಾನದಲ್ಲಿ ಕವಿ ಧೂರ್ಜಟಿ ಈ ಬಗ್ಗೆ ಬರೆದಿದ್ದಾರೆ. ಇದೆಲ್ಲವನ್ನೂ ಅಧ್ಯಯನ ನಡೆಸಿ ಈ ಸಿನಿಮಾ ಮಾಡಲಾಗಿದೆಯಂತೆ. ಕಣ್ಣಪ್ಪ ಶಿವಭಕ್ತನಾದ ಕಥೆಗಿಂತ ಅದಕ್ಕೂ ಮೊದಲು ಆತ ಯಾಕೆ ನಾಸ್ತಿಕನಾಗಿದ್ದ, ತಂದೆಯ ಜೊತೆಗೆ ಅವನ ಸಂಬಂಧ ಹೇಗಿತ್ತು ಮುಂತಾದ ಹಲವು ವಿಷಯಗಳನ್ನು ಈ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಲಾಗಿದೆಯಂತೆ.
‘ಕಣ್ಣಪ್ಪ’ ಚಿತ್ರದಲ್ಲಿ ಶಿವಭಕ್ತ ಕಣ್ಣಪ್ಪನಾಗಿ ವಿಷ್ಣು ಮಂಚು ನಟಿಸಿದ್ದು, ಡಾ. ಮೋಹನ್ ಬಾಬು, ಶರತ್ ಕುಮಾರ್, ಮಧು, ದೇವರಾಜ್ ಮುಂತಾದವರು ನಟಿಸಿದ್ದು, ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಲಾಲ್, ಕಾಜಲ್ ಅಗರ್ವಾಲ್ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಎ.ವಿ.ಎ. ಎಂಟರ್ ಟೈನ್ಮೆಂಟ್ ಮತ್ತು 24 ಫ್ರೇಮ್ಸ್ ಫ್ಯಾಕ್ಟರಿ ಅಡಿ ಡಾ. ಮೋಹನ್ ಬಾಬು ನಿರ್ಮಿಸಿರುವ ‘ಕಣ್ಣಪ್ಪ’ ಚಿತ್ರವನ್ನು ಮುಕೇಶ್ ಕುಮಾರ್ ಸಿಂಗ್ ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ಸ್ಟೀಫನ್ ದೇವಸ್ಸಿ ಸಂಗೀತಸವಿದ್ದು, ಶೆಲ್ಡನ್ ಚಾವ್ ಅವರ ಛಾಯಾಗ್ರಹಣವಿದೆ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…
ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…
ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್ ಪೀಠದ ಕಡೆಗೆ ಪೇಪರ್ ಹರಿದು…
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…