ಮನರಂಜನೆ

ಮುಂದಕ್ಕೆ ಹೋದ ‘ಕಣ್ಣಪ್ಪ’; ಜೂನ್‍ ತಿಂಗಳಲ್ಲಿ ಬಿಡುಗಡೆ

‘ಕಣ್ಣಪ್ಪ’ ಚಿತ್ರವನ್ನು ಮೊದಲು ಏಪ್ರಿಲ್‍ 25ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿತ್ತು. ಆದರೆ, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ತಡವಾದ ಕಾರಣ, ಚಿತ್ರದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ಏಪ್ರಿಲ್‍ನಲ್ಲಿ ಬಿಡುಗಡೆ ಆಗಬೇಕಿದ್ದ ಚಿತ್ರವು, ಇದೀಗ ಜೂನ್‍ಗೆ ಶಿಫ್ಟ್ ಆಗಿದೆ.

‘ಕಣ್ಣಪ್ಪ’ ಚಿತ್ರವು ಜೂನ್‍ 27ರಂದು ಜಗತ್ತಿನಾದ್ಯಂತ ಪ್ಯಾನ್‍ ಇಂಡಿಯಾ ಚಿತ್ರವಾಗಿ ತೆಲುಗು, ಕನ್ನಡ, ಹಿಂದಿ, ತಮಿಳು ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.

ಶುಕ್ರವಾರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ ಚಿತ್ರದ ಅಧಿಕೃತ ಬಿಡುಗಡೆ ದಿನಾಂಕದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದಾರೆ. ಈ ಸಂದರ್ಭದಲ್ಲಿ ಡಾ. ಮೋಹನ್‍ ಬಾಬು, ವಿಷ್ಣು ಮಂಚು, ಪ್ರಭುದೇವ ಮತ್ತು ಚಿತ್ರದ ಕಾರ್ಯಕಾರಿ ನಿರ್ಮಾಪಕ ವಿನಯ್‍ ಮಹೇಶ್ವರಿ ಹಾಜರಿದ್ದರು.

‘ಕಣ್ಣಪ್ಪ’ ಸಿನಿಮಾ ಬರೀ ಇತಿಹಾಸವಲ್ಲ, ಇದು ಎರಡನೇ ಶತಮಾನದ ಚೋಳರ ಕಾಲದ ಕಥೆ. 14ನೇ ಶತಮಾನದಲ್ಲಿ ಕವಿ ಧೂರ್ಜಟಿ ಈ ಬಗ್ಗೆ ಬರೆದಿದ್ದಾರೆ. ಇದೆಲ್ಲವನ್ನೂ ಅಧ್ಯಯನ ನಡೆಸಿ ಈ ಸಿನಿಮಾ ಮಾಡಲಾಗಿದೆಯಂತೆ. ಕಣ್ಣಪ್ಪ ಶಿವಭಕ್ತನಾದ ಕಥೆಗಿಂತ ಅದಕ್ಕೂ ಮೊದಲು ಆತ ಯಾಕೆ ನಾಸ್ತಿಕನಾಗಿದ್ದ, ತಂದೆಯ ಜೊತೆಗೆ ಅವನ ಸಂಬಂಧ ಹೇಗಿತ್ತು ಮುಂತಾದ ಹಲವು ವಿಷಯಗಳನ್ನು ಈ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಲಾಗಿದೆಯಂತೆ.

‘ಕಣ್ಣಪ್ಪ’ ಚಿತ್ರದಲ್ಲಿ ಶಿವಭಕ್ತ ಕಣ್ಣಪ್ಪನಾಗಿ ವಿಷ್ಣು ಮಂಚು ನಟಿಸಿದ್ದು, ಡಾ. ಮೋಹನ್‍ ಬಾಬು, ಶರತ್‍ ಕುಮಾರ್, ಮಧು, ದೇವರಾಜ್‍ ಮುಂತಾದವರು ನಟಿಸಿದ್ದು, ಪ್ರಭಾಸ್‍, ಅಕ್ಷಯ್‍ ಕುಮಾರ್, ಮೋಹನ್‍ ಲಾಲ್‍, ಕಾಜಲ್‍ ಅಗರ್ವಾಲ್‍ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಎ.ವಿ.ಎ. ಎಂಟರ್‌ ಟೈನ್‌ಮೆಂಟ್‍ ಮತ್ತು 24 ಫ್ರೇಮ್ಸ್ ಫ್ಯಾಕ್ಟರಿ ಅಡಿ ಡಾ. ಮೋಹನ್‍ ಬಾಬು ನಿರ್ಮಿಸಿರುವ ‘ಕಣ್ಣಪ್ಪ’ ಚಿತ್ರವನ್ನು ಮುಕೇಶ್‍ ಕುಮಾರ್ ಸಿಂಗ್‍ ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ಸ್ಟೀಫನ್‍ ದೇವಸ್ಸಿ ಸಂಗೀತಸವಿದ್ದು, ಶೆಲ್ಡನ್‍ ಚಾವ್‍ ಅವರ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

5 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

5 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

5 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

5 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

5 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

5 hours ago