ಮನರಂಜನೆ

ಮುಂದಕ್ಕೆ ಹೋದ ‘ಕಣ್ಣಪ್ಪ’; ಜೂನ್‍ ತಿಂಗಳಲ್ಲಿ ಬಿಡುಗಡೆ

‘ಕಣ್ಣಪ್ಪ’ ಚಿತ್ರವನ್ನು ಮೊದಲು ಏಪ್ರಿಲ್‍ 25ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿತ್ತು. ಆದರೆ, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ತಡವಾದ ಕಾರಣ, ಚಿತ್ರದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ಏಪ್ರಿಲ್‍ನಲ್ಲಿ ಬಿಡುಗಡೆ ಆಗಬೇಕಿದ್ದ ಚಿತ್ರವು, ಇದೀಗ ಜೂನ್‍ಗೆ ಶಿಫ್ಟ್ ಆಗಿದೆ.

‘ಕಣ್ಣಪ್ಪ’ ಚಿತ್ರವು ಜೂನ್‍ 27ರಂದು ಜಗತ್ತಿನಾದ್ಯಂತ ಪ್ಯಾನ್‍ ಇಂಡಿಯಾ ಚಿತ್ರವಾಗಿ ತೆಲುಗು, ಕನ್ನಡ, ಹಿಂದಿ, ತಮಿಳು ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.

ಶುಕ್ರವಾರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ ಚಿತ್ರದ ಅಧಿಕೃತ ಬಿಡುಗಡೆ ದಿನಾಂಕದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದಾರೆ. ಈ ಸಂದರ್ಭದಲ್ಲಿ ಡಾ. ಮೋಹನ್‍ ಬಾಬು, ವಿಷ್ಣು ಮಂಚು, ಪ್ರಭುದೇವ ಮತ್ತು ಚಿತ್ರದ ಕಾರ್ಯಕಾರಿ ನಿರ್ಮಾಪಕ ವಿನಯ್‍ ಮಹೇಶ್ವರಿ ಹಾಜರಿದ್ದರು.

‘ಕಣ್ಣಪ್ಪ’ ಸಿನಿಮಾ ಬರೀ ಇತಿಹಾಸವಲ್ಲ, ಇದು ಎರಡನೇ ಶತಮಾನದ ಚೋಳರ ಕಾಲದ ಕಥೆ. 14ನೇ ಶತಮಾನದಲ್ಲಿ ಕವಿ ಧೂರ್ಜಟಿ ಈ ಬಗ್ಗೆ ಬರೆದಿದ್ದಾರೆ. ಇದೆಲ್ಲವನ್ನೂ ಅಧ್ಯಯನ ನಡೆಸಿ ಈ ಸಿನಿಮಾ ಮಾಡಲಾಗಿದೆಯಂತೆ. ಕಣ್ಣಪ್ಪ ಶಿವಭಕ್ತನಾದ ಕಥೆಗಿಂತ ಅದಕ್ಕೂ ಮೊದಲು ಆತ ಯಾಕೆ ನಾಸ್ತಿಕನಾಗಿದ್ದ, ತಂದೆಯ ಜೊತೆಗೆ ಅವನ ಸಂಬಂಧ ಹೇಗಿತ್ತು ಮುಂತಾದ ಹಲವು ವಿಷಯಗಳನ್ನು ಈ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಲಾಗಿದೆಯಂತೆ.

‘ಕಣ್ಣಪ್ಪ’ ಚಿತ್ರದಲ್ಲಿ ಶಿವಭಕ್ತ ಕಣ್ಣಪ್ಪನಾಗಿ ವಿಷ್ಣು ಮಂಚು ನಟಿಸಿದ್ದು, ಡಾ. ಮೋಹನ್‍ ಬಾಬು, ಶರತ್‍ ಕುಮಾರ್, ಮಧು, ದೇವರಾಜ್‍ ಮುಂತಾದವರು ನಟಿಸಿದ್ದು, ಪ್ರಭಾಸ್‍, ಅಕ್ಷಯ್‍ ಕುಮಾರ್, ಮೋಹನ್‍ ಲಾಲ್‍, ಕಾಜಲ್‍ ಅಗರ್ವಾಲ್‍ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಎ.ವಿ.ಎ. ಎಂಟರ್‌ ಟೈನ್‌ಮೆಂಟ್‍ ಮತ್ತು 24 ಫ್ರೇಮ್ಸ್ ಫ್ಯಾಕ್ಟರಿ ಅಡಿ ಡಾ. ಮೋಹನ್‍ ಬಾಬು ನಿರ್ಮಿಸಿರುವ ‘ಕಣ್ಣಪ್ಪ’ ಚಿತ್ರವನ್ನು ಮುಕೇಶ್‍ ಕುಮಾರ್ ಸಿಂಗ್‍ ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ಸ್ಟೀಫನ್‍ ದೇವಸ್ಸಿ ಸಂಗೀತಸವಿದ್ದು, ಶೆಲ್ಡನ್‍ ಚಾವ್‍ ಅವರ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

3 hours ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

4 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

5 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

6 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

6 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

7 hours ago