ಮನರಂಜನೆ

ಮೂರು ದಿನಗಳಲ್ಲಿ 163 ಕೋಟಿ ರೂ. ಗಳಿಕೆ ಮಾಡಿದ ‘ಕಾಂತಾರ – ಚಾಪ್ಟರ್ 1’

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರವು ಜಗತ್ತಿನಾದ್ಯಂತ ಗುರುವಾರ ಬಿಡುಗಡೆಯಾಗಿದೆ. ಚಿತ್ರಕ್ಕೆ ಒಳ್ಳೆಯ ಓಪನಿಂಗ್‍ ಸಿಕ್ಕಿದ್ದು, ಕಳೆದ ಮೂರು ದಿನಗಳಲ್ಲಿ ಎಲ್ಲಾ ಕಡೆ ಹೌಸ್‍ಫುಲ್‍ ಪ್ರದರ್ಶನಗಳನ್ನು ಕಾಣುತ್ತಿದೆ.

‘ಕಾಂತಾರ – ಚಾಪ್ಟರ್ 1’ ಚಿತ್ರವು ಎಷ್ಟು ಗಳಿಕೆ ಮಾಡಿದೆ ಎಂಬ ಪ್ರಶ್ನೆ ಎಲ್ಲರಲ್ಲೂ ಇದ್ದೇ ಚಿತ್ರ. ಚಿತ್ರವು ಬಿಡುಗಡೆಯಾದ ಮೂರು ದಿನಗಳಲ್ಲಿ (ಗುರುವಾರ, ಶುಕ್ರವಾರ ಮತ್ತು ಶನಿವಾರ) 163.1 ಕೋಟಿ ರೂ. ಗಳಿಕೆ ಮಾಡಿದೆ ಎಂದು ಬಾಕ್ಸ್ ಆಫೀಸ್‍ ಟ್ರಾಕರ್‍ ಸಚ್ನಿಕ್‍ ಡಾಟ್‍ಕಾಂ ವರದಿ ಮಾಡಿದೆ.

ಈ ಪೈಕಿ ಚಿತ್ರವು ಮೊದಲ ದಿನ 61.85, ಎರಡನೇ ದಿನ 46 ಮತ್ತು ಮೂರನೇ ದಿನ 55.25 ಕೋಟಿ ರೂ.ಗಳನ್ನು ಗಳಿಕೆ ಮಾಡಿದೆ ಎಂದು ಹೇಳಲಾಗುತ್ತಿದೆ. ಒಟ್ಟಾರೆ ಮೂರು ದಿನಗಳಲ್ಲಿ 163.1 ಕೋಟಿ ರೂ. ಗಳಿಕೆಯಾಗಿದ್ದು, ಇದು ಬರೀ ಭಾರತದ ಲೆಕ್ಕ ಅಷ್ಟೇ. ಈ ಪೈಕಿ ಕರ್ನಾಟಕದ್ದೇ 47.6 ಕೋಟಿ ರೂ. ಗಳಿಕೆಯಾದರೆ, ಉತ್ತರ ಭಾರತದಿಂದ 50 ಕೋಟಿ ರೂ. ಗಳಿಕೆ ಮಾಡಿದೆ. ಇನ್ನು, ಚಿತ್ರವು ಮೊದಲ ದಿನ 88 ಕೋಟಿ ರೂ. ಗಳಿಕೆ ಮಾಡಿದ ಸುದ್ದಿ ಇತ್ತು. ಈ ಪೈಕಿ, ಭಾರತದ ಪಾಲು 74.25 ಕೋಟಿ ರೂ.ಗಳಷ್ಟಾದರೆ, ಬೇರೆ ದೇಶಗಳಲ್ಲಿ ಸುಮಾರು 13.50 ಕೋಟಿ ರೂ. ಗಳಿಕೆಯಾಗಿದೆ. ಚಿತ್ರಕ್ಕೆ ಬುಕ್‍ ಮೈ ಶೋನಲ್ಲಿ ಮೊದಲ ದಿನ (ಗುರುವಾರ) ದಾಖಲೆಯ 1.28 ಮಿಲಿಯನ್ ಪ್ಲಸ್‍ ಟಿಕೆಟ್‍ಗಳು ಮಾರಾಟವಾಗಿವೆ.

ಇದನ್ನೂ ಓದಿ:-ನೇಪಾಳದಲ್ಲಿ ಭೀಕರ ಪ್ರವಾಹ: 42 ಜನರು ಸಾವು

‘ಕಾಂತಾರ ಚಾಪ್ಟರ್ 1’ ಚಿತ್ರವನ್ನು ಹೊಂಬಾಳೆ ಫಿಲಂಸ್‍ ನಿರ್ಮಿಸಿದ್ದು, ರಿಷಭ್‍ ಶೆಟ್ಟಿ ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಅವರ ಜೊತೆಗೆ ರುಕ್ಮಿಣಿ ವಸಂತ್‍, ಅಚ್ಯುತ್‍ ಕುಮಾರ್, ಗುಲ್ಶನ್‍ ದೇವಯ್ಯ ಮುಂತಾದವರು ನಟಿಸಿದ್ದು, ಚಿತ್ರವು ಕನ್ನಡ ಸೇರಿದಂತೆ ತೆಲುಗು, ಹಿಂದಿ, ತಮಿಳು, ಮಲಯಾಳಂ, ಬಂಗಾಳಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ವಿಶ್ವಾದ್ಯಂತ ಬಿಡುಗಡೆಯಾಗಿದೆ.

ಆಂದೋಲನ ಡೆಸ್ಕ್

Recent Posts

ಹುಣಸೂರು| ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ: ಮೂವರಿಗೆ ಗಾಯ

ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…

2 hours ago

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡು ಹಂದಿ ರಕ್ಷಣೆ

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…

3 hours ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಏರಿಕೆ

ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ 991…

3 hours ago

ಪತ್ನಿ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…

5 hours ago

ಓದುಗರ ಪತ್ರ: ಜಾಗೃತಿ

ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…

5 hours ago

ಓದುಗರ ಪತ್ರ: ಅಶ್ಲೀಲ ಹಾಡು ನಿಷೇಧ ಸ್ವಾಗತಾರ್ಹ

ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…

5 hours ago