ಮನರಂಜನೆ

ಮೂರು ದಿನಗಳಲ್ಲಿ 163 ಕೋಟಿ ರೂ. ಗಳಿಕೆ ಮಾಡಿದ ‘ಕಾಂತಾರ – ಚಾಪ್ಟರ್ 1’

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರವು ಜಗತ್ತಿನಾದ್ಯಂತ ಗುರುವಾರ ಬಿಡುಗಡೆಯಾಗಿದೆ. ಚಿತ್ರಕ್ಕೆ ಒಳ್ಳೆಯ ಓಪನಿಂಗ್‍ ಸಿಕ್ಕಿದ್ದು, ಕಳೆದ ಮೂರು ದಿನಗಳಲ್ಲಿ ಎಲ್ಲಾ ಕಡೆ ಹೌಸ್‍ಫುಲ್‍ ಪ್ರದರ್ಶನಗಳನ್ನು ಕಾಣುತ್ತಿದೆ.

‘ಕಾಂತಾರ – ಚಾಪ್ಟರ್ 1’ ಚಿತ್ರವು ಎಷ್ಟು ಗಳಿಕೆ ಮಾಡಿದೆ ಎಂಬ ಪ್ರಶ್ನೆ ಎಲ್ಲರಲ್ಲೂ ಇದ್ದೇ ಚಿತ್ರ. ಚಿತ್ರವು ಬಿಡುಗಡೆಯಾದ ಮೂರು ದಿನಗಳಲ್ಲಿ (ಗುರುವಾರ, ಶುಕ್ರವಾರ ಮತ್ತು ಶನಿವಾರ) 163.1 ಕೋಟಿ ರೂ. ಗಳಿಕೆ ಮಾಡಿದೆ ಎಂದು ಬಾಕ್ಸ್ ಆಫೀಸ್‍ ಟ್ರಾಕರ್‍ ಸಚ್ನಿಕ್‍ ಡಾಟ್‍ಕಾಂ ವರದಿ ಮಾಡಿದೆ.

ಈ ಪೈಕಿ ಚಿತ್ರವು ಮೊದಲ ದಿನ 61.85, ಎರಡನೇ ದಿನ 46 ಮತ್ತು ಮೂರನೇ ದಿನ 55.25 ಕೋಟಿ ರೂ.ಗಳನ್ನು ಗಳಿಕೆ ಮಾಡಿದೆ ಎಂದು ಹೇಳಲಾಗುತ್ತಿದೆ. ಒಟ್ಟಾರೆ ಮೂರು ದಿನಗಳಲ್ಲಿ 163.1 ಕೋಟಿ ರೂ. ಗಳಿಕೆಯಾಗಿದ್ದು, ಇದು ಬರೀ ಭಾರತದ ಲೆಕ್ಕ ಅಷ್ಟೇ. ಈ ಪೈಕಿ ಕರ್ನಾಟಕದ್ದೇ 47.6 ಕೋಟಿ ರೂ. ಗಳಿಕೆಯಾದರೆ, ಉತ್ತರ ಭಾರತದಿಂದ 50 ಕೋಟಿ ರೂ. ಗಳಿಕೆ ಮಾಡಿದೆ. ಇನ್ನು, ಚಿತ್ರವು ಮೊದಲ ದಿನ 88 ಕೋಟಿ ರೂ. ಗಳಿಕೆ ಮಾಡಿದ ಸುದ್ದಿ ಇತ್ತು. ಈ ಪೈಕಿ, ಭಾರತದ ಪಾಲು 74.25 ಕೋಟಿ ರೂ.ಗಳಷ್ಟಾದರೆ, ಬೇರೆ ದೇಶಗಳಲ್ಲಿ ಸುಮಾರು 13.50 ಕೋಟಿ ರೂ. ಗಳಿಕೆಯಾಗಿದೆ. ಚಿತ್ರಕ್ಕೆ ಬುಕ್‍ ಮೈ ಶೋನಲ್ಲಿ ಮೊದಲ ದಿನ (ಗುರುವಾರ) ದಾಖಲೆಯ 1.28 ಮಿಲಿಯನ್ ಪ್ಲಸ್‍ ಟಿಕೆಟ್‍ಗಳು ಮಾರಾಟವಾಗಿವೆ.

ಇದನ್ನೂ ಓದಿ:-ನೇಪಾಳದಲ್ಲಿ ಭೀಕರ ಪ್ರವಾಹ: 42 ಜನರು ಸಾವು

‘ಕಾಂತಾರ ಚಾಪ್ಟರ್ 1’ ಚಿತ್ರವನ್ನು ಹೊಂಬಾಳೆ ಫಿಲಂಸ್‍ ನಿರ್ಮಿಸಿದ್ದು, ರಿಷಭ್‍ ಶೆಟ್ಟಿ ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಅವರ ಜೊತೆಗೆ ರುಕ್ಮಿಣಿ ವಸಂತ್‍, ಅಚ್ಯುತ್‍ ಕುಮಾರ್, ಗುಲ್ಶನ್‍ ದೇವಯ್ಯ ಮುಂತಾದವರು ನಟಿಸಿದ್ದು, ಚಿತ್ರವು ಕನ್ನಡ ಸೇರಿದಂತೆ ತೆಲುಗು, ಹಿಂದಿ, ತಮಿಳು, ಮಲಯಾಳಂ, ಬಂಗಾಳಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ವಿಶ್ವಾದ್ಯಂತ ಬಿಡುಗಡೆಯಾಗಿದೆ.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

12 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

14 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

14 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

18 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

23 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

23 hours ago