ಮನರಂಜನೆ

ಕನ್ನಡದ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾದ ‘ಕಾಂತಾರ – ಚಾಪ್ಟರ್ 1’

ಕನ್ನಡದಲ್ಲಿ ಇದುವರೆಗೂ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾಗಿ ಯಶ್‍ ಅಭಿನಯದ ‘ಕೆಜಿಎಫ್‍ – ಚಾಪ್ಟರ್ 2’ ಮತ್ತು ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ ಚಿತ್ರಗಳಿದ್ದವು. ಈಗ ಆ ದಾಖಲೆಯನ್ನು ‘ಕಾಂತಾರ – ಚಾಪ್ಟರ್ 1’ ಮುರಿದಿದೆ.

ಇತ್ತೀಚೆಗೆ, ಚಿತ್ರವನ್ನು ನಿರ್ಮಿಸಿರುವ ಹೊಂಬಾಲೆ ಫಿಲಂಸ್‍ ಸಂಸ್ಥೆಯು ಚಿತ್ರದ ಗಳಿಕೆಯನ್ನು ಬಹಿರಂಗಪಡಿಸಿದ್ದು, ಚಿತ್ರವು ಒಂದು ತಿಂಗಳಲ್ಲಿ ಜಾಗತಿಕವಾಗಿ 867 ಕೋಟಿ ರೂ. ಸಂಗ್ರಹಿಸಿದೆ. ಈ ಪೈಕಿ ‘ಕಾಂತಾರ’ ಚಿತ್ರವು ಕರ್ನಾಟಕದಲ್ಲಿ 268 ಕೋಟಿ ರೂ. ಗಳಿಕೆ ಮಾಡಿದ್ದು, ರಾಜ್ಯದಲ್ಲಿ 200 ಕೋಟಿ ರೂ. ಗಡಿ ದಾಟಿದ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಇದನ್ನು ಓದಿ: ರಕ್ತ ಕಾಶ್ಮೀರ’ವನ್ನು ತೋರಿಸಲು ಬಾಬು ರೆಡಿ; ನವೆಂಬರ್ ತಿಂಗಳಲ್ಲಿ ಚಿತ್ರ ಬಿಡುಗಡೆ

ಬರೀ ಕರ್ನಾಟಕವಷ್ಟೇ ಅಲ್ಲ, ಚಿತ್ರ ಬಿಡುಗಡೆಯಾದ ಬೇರೆ ಕಡೆಗಳಲ್ಲೂ ಹೊಸ ದಾಖಲೆಯನ್ನೇ ಮಾಡಿದೆ. ಚಿತ್ರವು ಜಾಗತಿಕವಾಗಿ 867 ಕೋಟಿ ರೂ. ಗಳಿಕೆ ಮಾಡಿದ್ದು, ಇದರಲ್ಲಿ ವಿದೇಶಿ ಮಾರುಕಟ್ಟೆಯಿಂದ 116 ಕೋಟಿ ರೂ. ಗಳಿಕೆ ಮಾಡಿದರೆ, ಭಾರತದಲ್ಲಿ 751 ಕೋಟಿ ರೂ. ಸಂಗ್ರಹಿಸಿದೆ. ಈ ಮೂಲಕ ಭಾರತದಲ್ಲಿ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾಗಿ ಹೊರಹೊಮ್ಮಿದೆ. ಈ ವರ್ಷ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾಗಿ ‘ಛಾವಾ’ ಚಿತ್ರವಿತ್ತು. ಅದರ ಗಳಿಕೆಯನ್ನು ‘ಕಾಂತಾರ – ಚಾಪ್ಟರ್‍ 1’ ಮುರಿದಿದೆ.

‘ಕಾಂತಾರ – ಚಾಪ್ಟರ್ 1’ ಚಿತ್ರವನ್ನು ಹೊಂಬಾಳೆ ಫಿಲಂಸ್‍ ನಿರ್ಮಿಸಿದ್ದು, ರಿಷಭ್‍ ಶೆಟ್ಟಿ ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಅವರ ಜೊತೆಗೆ ರುಕ್ಮಿಣಿ ವಸಂತ್‍, ಅಚ್ಯುತ್‍ ಕುಮಾರ್‍, ಗುಲ್ಶನ್‍ ದೇವಯ್ಯ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅಜನೀಶ್‍ ಲೋಕನಾಥ್‍ ಸಂಗೀತವಿದೆ.

ಇನ್ನು, ಚಿತ್ರವು ಅಕ್ಟೋಬರ್ 31ರಿಂದ ಅಮೇಜಾನ್‍ ಪ್ರೈಮ್‍ ಓಟಿಟಿಯಲ್ಲಿ ಲಭ್ಯವಿದೆ. ಚಿತ್ರವು ಕನ್ನಡವಲ್ಲದೆ ಬೇರೆ ಭಾಷೆಗಳಲ್ಲೂ ಅಲ್ಲಿ ಸ್ಟ್ರೀಮ್‍ ಆಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಲೆಕ್ಕ ಕೇಳುವ ಹಕ್ಕಿರೋದು ಜನತೆಗೆ, ಮಂಡ್ಯ ಸಂಸದರಲ್ಲ: ಸಚಿವ ಚಲುವರಾಯಸ್ವಾಮಿ ತಿರುಗೇಟು

ಮಂಡ್ಯ: ರಾಜ್ಯ ಸರ್ಕಾರ ಜಿಲ್ಲೆಗೆ ಬಿಡುಗಡೆ ಮಾಡಿರುವ ಅನುದಾನದ ಲೆಕ್ಕವನ್ನು ಜಿಲ್ಲೆಯ ಜನತೆ ಕೇಳಬೇಕೆ ಹೊರತು ಸಂಸದರಲ್ಲ ಎಂದು ಕೃಷಿ…

13 mins ago

ಚಿಕ್ಕಬಳ್ಳಾಪುರ ಜಿಲ್ಲೆಗೆ ಕೇಂದ್ರ ಸರ್ಕಾರ ಬಂಪರ್‌ ಕೊಡುಗೆ: ಏನದು ಗೊತ್ತಾ.?

ಚಿಕ್ಕಬಳ್ಳಾಪುರ: ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರೂ 184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ…

24 mins ago

ಯುದ್ಧ ಎಲ್ಲಿ ನಡೆದರೂ ಸಂಕಷ್ಟ ಬರುವುದು ಅಡುಗೆ ಮನೆಯೊಳಗೆ

ಶೇಷಾದ್ರಿ ಗಂಜೂರು: ಮಾಧ್ಯಮ ತಜ್ಞರು ಟೆಹರಾನ್‌: ಮಧ್ಯಪ್ರಾಚ್ಯದ ಸಂಘರ್ಷಗಳ ಸಮಯದಲ್ಲಿ ಜಾಗತಿಕ ತೈಲ ಬೆಲೆ ಗಗನಕ್ಕೇರುವುದು, ಇದರಿಂದ ಸಾರಿಗೆ ವೆಚ್ಚ…

1 hour ago

ಸಫಾರಿ ವೇಳೆ ಮೊಬೈಲ್ ನಿಷೇಧ: ವನ್ಯಜೀವಿ ಛಾಯಾಗ್ರಾಹಕರಿಂದ ಸ್ವಾಗತ: ಕೆಲ ಸಫಾರಿ ಪ್ರಿಯರಿಗೆ ಬೇಸರ

ಬಂಡೀಪುರ, ನಾಗರಹೊಳೆ: ನಾಗರಹೊಳೆ ಬಂಡೀಪುರದಲ್ಲಿ ಸಫಾರಿ ಪುನರಾರಂಭವಾದ ಸಂತೋಷ ಒಂದೆಡೆಯಾದರೆ, ಸಫಾರಿ ವೇಳೆ ಮೊಬೈಲ್ ಬಳಕೆಗೆ ನಿಷೇಧವೇರಿರುವುದು ಕೆಲ ಸಫಾರಿ…

1 hour ago

ಮಂಡ್ಯ: ಕನ್ನಡ ಶಾಲೆಗಳ ಉಳಿವಿಗೆ ಹೋರಾಟ: ವಾಟಾಳ್‌ ನಾಗರಾಜ್‌ ಬಂಧನ

ಮಂಡ್ಯ: ಜಿಲ್ಲೆಯ 1463 ಕನ್ನಡ ಶಾಲೆಗಳನ್ನು ಉಳಿಸಿ ಹಾಗೂ ಉಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ ಮಂಡ್ಯ ನಗರದ ಸಂಜಯ…

2 hours ago

ಸಫಾರಿ ಸ್ಥಗಿತ, ಪುನರಾರಂಭ ಸಮರ್ಥಿಸಿಕೊಂಡ ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಕಳೆದ ನವೆಂಬರ್‌ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತುಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ,…

2 hours ago