ಮನರಂಜನೆ

ಕನ್ನಡದ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾದ ‘ಕಾಂತಾರ – ಚಾಪ್ಟರ್ 1’

ಕನ್ನಡದಲ್ಲಿ ಇದುವರೆಗೂ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾಗಿ ಯಶ್‍ ಅಭಿನಯದ ‘ಕೆಜಿಎಫ್‍ – ಚಾಪ್ಟರ್ 2’ ಮತ್ತು ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ ಚಿತ್ರಗಳಿದ್ದವು. ಈಗ ಆ ದಾಖಲೆಯನ್ನು ‘ಕಾಂತಾರ – ಚಾಪ್ಟರ್ 1’ ಮುರಿದಿದೆ.

ಇತ್ತೀಚೆಗೆ, ಚಿತ್ರವನ್ನು ನಿರ್ಮಿಸಿರುವ ಹೊಂಬಾಲೆ ಫಿಲಂಸ್‍ ಸಂಸ್ಥೆಯು ಚಿತ್ರದ ಗಳಿಕೆಯನ್ನು ಬಹಿರಂಗಪಡಿಸಿದ್ದು, ಚಿತ್ರವು ಒಂದು ತಿಂಗಳಲ್ಲಿ ಜಾಗತಿಕವಾಗಿ 867 ಕೋಟಿ ರೂ. ಸಂಗ್ರಹಿಸಿದೆ. ಈ ಪೈಕಿ ‘ಕಾಂತಾರ’ ಚಿತ್ರವು ಕರ್ನಾಟಕದಲ್ಲಿ 268 ಕೋಟಿ ರೂ. ಗಳಿಕೆ ಮಾಡಿದ್ದು, ರಾಜ್ಯದಲ್ಲಿ 200 ಕೋಟಿ ರೂ. ಗಡಿ ದಾಟಿದ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಇದನ್ನು ಓದಿ: ರಕ್ತ ಕಾಶ್ಮೀರ’ವನ್ನು ತೋರಿಸಲು ಬಾಬು ರೆಡಿ; ನವೆಂಬರ್ ತಿಂಗಳಲ್ಲಿ ಚಿತ್ರ ಬಿಡುಗಡೆ

ಬರೀ ಕರ್ನಾಟಕವಷ್ಟೇ ಅಲ್ಲ, ಚಿತ್ರ ಬಿಡುಗಡೆಯಾದ ಬೇರೆ ಕಡೆಗಳಲ್ಲೂ ಹೊಸ ದಾಖಲೆಯನ್ನೇ ಮಾಡಿದೆ. ಚಿತ್ರವು ಜಾಗತಿಕವಾಗಿ 867 ಕೋಟಿ ರೂ. ಗಳಿಕೆ ಮಾಡಿದ್ದು, ಇದರಲ್ಲಿ ವಿದೇಶಿ ಮಾರುಕಟ್ಟೆಯಿಂದ 116 ಕೋಟಿ ರೂ. ಗಳಿಕೆ ಮಾಡಿದರೆ, ಭಾರತದಲ್ಲಿ 751 ಕೋಟಿ ರೂ. ಸಂಗ್ರಹಿಸಿದೆ. ಈ ಮೂಲಕ ಭಾರತದಲ್ಲಿ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾಗಿ ಹೊರಹೊಮ್ಮಿದೆ. ಈ ವರ್ಷ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾಗಿ ‘ಛಾವಾ’ ಚಿತ್ರವಿತ್ತು. ಅದರ ಗಳಿಕೆಯನ್ನು ‘ಕಾಂತಾರ – ಚಾಪ್ಟರ್‍ 1’ ಮುರಿದಿದೆ.

‘ಕಾಂತಾರ – ಚಾಪ್ಟರ್ 1’ ಚಿತ್ರವನ್ನು ಹೊಂಬಾಳೆ ಫಿಲಂಸ್‍ ನಿರ್ಮಿಸಿದ್ದು, ರಿಷಭ್‍ ಶೆಟ್ಟಿ ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಅವರ ಜೊತೆಗೆ ರುಕ್ಮಿಣಿ ವಸಂತ್‍, ಅಚ್ಯುತ್‍ ಕುಮಾರ್‍, ಗುಲ್ಶನ್‍ ದೇವಯ್ಯ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅಜನೀಶ್‍ ಲೋಕನಾಥ್‍ ಸಂಗೀತವಿದೆ.

ಇನ್ನು, ಚಿತ್ರವು ಅಕ್ಟೋಬರ್ 31ರಿಂದ ಅಮೇಜಾನ್‍ ಪ್ರೈಮ್‍ ಓಟಿಟಿಯಲ್ಲಿ ಲಭ್ಯವಿದೆ. ಚಿತ್ರವು ಕನ್ನಡವಲ್ಲದೆ ಬೇರೆ ಭಾಷೆಗಳಲ್ಲೂ ಅಲ್ಲಿ ಸ್ಟ್ರೀಮ್‍ ಆಗುತ್ತಿದೆ.

ಆಂದೋಲನ ಡೆಸ್ಕ್

Recent Posts

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

2 hours ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

2 hours ago

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

2 hours ago

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

12 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

12 hours ago