ಮನರಂಜನೆ

ಕನ್ನಡದ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾದ ‘ಕಾಂತಾರ – ಚಾಪ್ಟರ್ 1’

ಕನ್ನಡದಲ್ಲಿ ಇದುವರೆಗೂ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾಗಿ ಯಶ್‍ ಅಭಿನಯದ ‘ಕೆಜಿಎಫ್‍ – ಚಾಪ್ಟರ್ 2’ ಮತ್ತು ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ ಚಿತ್ರಗಳಿದ್ದವು. ಈಗ ಆ ದಾಖಲೆಯನ್ನು ‘ಕಾಂತಾರ – ಚಾಪ್ಟರ್ 1’ ಮುರಿದಿದೆ.

ಇತ್ತೀಚೆಗೆ, ಚಿತ್ರವನ್ನು ನಿರ್ಮಿಸಿರುವ ಹೊಂಬಾಲೆ ಫಿಲಂಸ್‍ ಸಂಸ್ಥೆಯು ಚಿತ್ರದ ಗಳಿಕೆಯನ್ನು ಬಹಿರಂಗಪಡಿಸಿದ್ದು, ಚಿತ್ರವು ಒಂದು ತಿಂಗಳಲ್ಲಿ ಜಾಗತಿಕವಾಗಿ 867 ಕೋಟಿ ರೂ. ಸಂಗ್ರಹಿಸಿದೆ. ಈ ಪೈಕಿ ‘ಕಾಂತಾರ’ ಚಿತ್ರವು ಕರ್ನಾಟಕದಲ್ಲಿ 268 ಕೋಟಿ ರೂ. ಗಳಿಕೆ ಮಾಡಿದ್ದು, ರಾಜ್ಯದಲ್ಲಿ 200 ಕೋಟಿ ರೂ. ಗಡಿ ದಾಟಿದ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಇದನ್ನು ಓದಿ: ರಕ್ತ ಕಾಶ್ಮೀರ’ವನ್ನು ತೋರಿಸಲು ಬಾಬು ರೆಡಿ; ನವೆಂಬರ್ ತಿಂಗಳಲ್ಲಿ ಚಿತ್ರ ಬಿಡುಗಡೆ

ಬರೀ ಕರ್ನಾಟಕವಷ್ಟೇ ಅಲ್ಲ, ಚಿತ್ರ ಬಿಡುಗಡೆಯಾದ ಬೇರೆ ಕಡೆಗಳಲ್ಲೂ ಹೊಸ ದಾಖಲೆಯನ್ನೇ ಮಾಡಿದೆ. ಚಿತ್ರವು ಜಾಗತಿಕವಾಗಿ 867 ಕೋಟಿ ರೂ. ಗಳಿಕೆ ಮಾಡಿದ್ದು, ಇದರಲ್ಲಿ ವಿದೇಶಿ ಮಾರುಕಟ್ಟೆಯಿಂದ 116 ಕೋಟಿ ರೂ. ಗಳಿಕೆ ಮಾಡಿದರೆ, ಭಾರತದಲ್ಲಿ 751 ಕೋಟಿ ರೂ. ಸಂಗ್ರಹಿಸಿದೆ. ಈ ಮೂಲಕ ಭಾರತದಲ್ಲಿ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾಗಿ ಹೊರಹೊಮ್ಮಿದೆ. ಈ ವರ್ಷ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾಗಿ ‘ಛಾವಾ’ ಚಿತ್ರವಿತ್ತು. ಅದರ ಗಳಿಕೆಯನ್ನು ‘ಕಾಂತಾರ – ಚಾಪ್ಟರ್‍ 1’ ಮುರಿದಿದೆ.

‘ಕಾಂತಾರ – ಚಾಪ್ಟರ್ 1’ ಚಿತ್ರವನ್ನು ಹೊಂಬಾಳೆ ಫಿಲಂಸ್‍ ನಿರ್ಮಿಸಿದ್ದು, ರಿಷಭ್‍ ಶೆಟ್ಟಿ ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಅವರ ಜೊತೆಗೆ ರುಕ್ಮಿಣಿ ವಸಂತ್‍, ಅಚ್ಯುತ್‍ ಕುಮಾರ್‍, ಗುಲ್ಶನ್‍ ದೇವಯ್ಯ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅಜನೀಶ್‍ ಲೋಕನಾಥ್‍ ಸಂಗೀತವಿದೆ.

ಇನ್ನು, ಚಿತ್ರವು ಅಕ್ಟೋಬರ್ 31ರಿಂದ ಅಮೇಜಾನ್‍ ಪ್ರೈಮ್‍ ಓಟಿಟಿಯಲ್ಲಿ ಲಭ್ಯವಿದೆ. ಚಿತ್ರವು ಕನ್ನಡವಲ್ಲದೆ ಬೇರೆ ಭಾಷೆಗಳಲ್ಲೂ ಅಲ್ಲಿ ಸ್ಟ್ರೀಮ್‍ ಆಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

6 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

6 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

6 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

6 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

6 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

6 hours ago