ಮನರಂಜನೆ

ಕನ್ನಡದ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾದ ‘ಕಾಂತಾರ – ಚಾಪ್ಟರ್ 1’

ಕನ್ನಡದಲ್ಲಿ ಇದುವರೆಗೂ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾಗಿ ಯಶ್‍ ಅಭಿನಯದ ‘ಕೆಜಿಎಫ್‍ – ಚಾಪ್ಟರ್ 2’ ಮತ್ತು ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ ಚಿತ್ರಗಳಿದ್ದವು. ಈಗ ಆ ದಾಖಲೆಯನ್ನು ‘ಕಾಂತಾರ – ಚಾಪ್ಟರ್ 1’ ಮುರಿದಿದೆ.

ಇತ್ತೀಚೆಗೆ, ಚಿತ್ರವನ್ನು ನಿರ್ಮಿಸಿರುವ ಹೊಂಬಾಲೆ ಫಿಲಂಸ್‍ ಸಂಸ್ಥೆಯು ಚಿತ್ರದ ಗಳಿಕೆಯನ್ನು ಬಹಿರಂಗಪಡಿಸಿದ್ದು, ಚಿತ್ರವು ಒಂದು ತಿಂಗಳಲ್ಲಿ ಜಾಗತಿಕವಾಗಿ 867 ಕೋಟಿ ರೂ. ಸಂಗ್ರಹಿಸಿದೆ. ಈ ಪೈಕಿ ‘ಕಾಂತಾರ’ ಚಿತ್ರವು ಕರ್ನಾಟಕದಲ್ಲಿ 268 ಕೋಟಿ ರೂ. ಗಳಿಕೆ ಮಾಡಿದ್ದು, ರಾಜ್ಯದಲ್ಲಿ 200 ಕೋಟಿ ರೂ. ಗಡಿ ದಾಟಿದ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಇದನ್ನು ಓದಿ: ರಕ್ತ ಕಾಶ್ಮೀರ’ವನ್ನು ತೋರಿಸಲು ಬಾಬು ರೆಡಿ; ನವೆಂಬರ್ ತಿಂಗಳಲ್ಲಿ ಚಿತ್ರ ಬಿಡುಗಡೆ

ಬರೀ ಕರ್ನಾಟಕವಷ್ಟೇ ಅಲ್ಲ, ಚಿತ್ರ ಬಿಡುಗಡೆಯಾದ ಬೇರೆ ಕಡೆಗಳಲ್ಲೂ ಹೊಸ ದಾಖಲೆಯನ್ನೇ ಮಾಡಿದೆ. ಚಿತ್ರವು ಜಾಗತಿಕವಾಗಿ 867 ಕೋಟಿ ರೂ. ಗಳಿಕೆ ಮಾಡಿದ್ದು, ಇದರಲ್ಲಿ ವಿದೇಶಿ ಮಾರುಕಟ್ಟೆಯಿಂದ 116 ಕೋಟಿ ರೂ. ಗಳಿಕೆ ಮಾಡಿದರೆ, ಭಾರತದಲ್ಲಿ 751 ಕೋಟಿ ರೂ. ಸಂಗ್ರಹಿಸಿದೆ. ಈ ಮೂಲಕ ಭಾರತದಲ್ಲಿ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾಗಿ ಹೊರಹೊಮ್ಮಿದೆ. ಈ ವರ್ಷ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾಗಿ ‘ಛಾವಾ’ ಚಿತ್ರವಿತ್ತು. ಅದರ ಗಳಿಕೆಯನ್ನು ‘ಕಾಂತಾರ – ಚಾಪ್ಟರ್‍ 1’ ಮುರಿದಿದೆ.

‘ಕಾಂತಾರ – ಚಾಪ್ಟರ್ 1’ ಚಿತ್ರವನ್ನು ಹೊಂಬಾಳೆ ಫಿಲಂಸ್‍ ನಿರ್ಮಿಸಿದ್ದು, ರಿಷಭ್‍ ಶೆಟ್ಟಿ ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಅವರ ಜೊತೆಗೆ ರುಕ್ಮಿಣಿ ವಸಂತ್‍, ಅಚ್ಯುತ್‍ ಕುಮಾರ್‍, ಗುಲ್ಶನ್‍ ದೇವಯ್ಯ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅಜನೀಶ್‍ ಲೋಕನಾಥ್‍ ಸಂಗೀತವಿದೆ.

ಇನ್ನು, ಚಿತ್ರವು ಅಕ್ಟೋಬರ್ 31ರಿಂದ ಅಮೇಜಾನ್‍ ಪ್ರೈಮ್‍ ಓಟಿಟಿಯಲ್ಲಿ ಲಭ್ಯವಿದೆ. ಚಿತ್ರವು ಕನ್ನಡವಲ್ಲದೆ ಬೇರೆ ಭಾಷೆಗಳಲ್ಲೂ ಅಲ್ಲಿ ಸ್ಟ್ರೀಮ್‍ ಆಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

2 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

3 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

3 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

4 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

5 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

13 hours ago