Kantara: Chapter 1
ಕೆಲವೇ ದಿನಗಳ ಹಿಂದಷ್ಟೇ, ನಟ-ನಿರ್ದೇಶಕ ರಿಷಬ್ ಶೆಟ್ಟಿ ಹುಟ್ಟುಹಬ್ಬಕ್ಕೆ ಹೊಂಬಾಳೆ ಫಿಲಂಸ್ ಕಡೆಯಿಂದ ‘ಕಾಂತಾರ – ಚಾಪ್ಟರ್ 1’ ಚಿತ್ರದ ಪೋಸ್ಟರ್ ಬಿಡುಗಡೆಯಾಗಿತ್ತು. ಇತ್ತೀಚೆಗೆ, ಚಿತ್ರತಂಡದಿಂದ ಇನ್ನೊಂದು ಸುದ್ದಿ ಬಂದಿದೆ. ಅದೇನೆಂದರೆ, ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿದ್ದು, ಚಿತ್ರವು ಅಕ್ಟೋಬರ್.2ರಂದು ವಿಶ್ವದಾದ್ಯಂತ ತೆರೆಗೆ ಬರಲಿದೆ.
‘ಕಾಂತಾರ – ಚಾಪ್ಟರ್ 1’ ಚಿತ್ರದ ಬಿಡುಗಡೆಗೆ ಎರಡೂವರೆ ತಿಂಗಳಿದ್ದರೂ, ಚಿತ್ರದ ಬಗ್ಗೆ ಅಪ್ಡೇಟ್ಗಳು ಹೊರಬಿದ್ದಿಲ್ಲ. ಅದರಲ್ಲೂ ಚಿತ್ರೀಕರಣ ಮುಗಿದಿರುವ ಸುದ್ದಿ ಇರಲಿಲ್ಲ. ಚಿತ್ರೀಕರಣ ಯಾವಾಗ ಮುಗಿಯುತ್ತದೆ? ಅಂದುಕೊಂಡಂತೆ ಅಕ್ಟೋಬರ್ 02ರಂದು ಬಿಡುಗಡೆಯಾಗುತ್ತದಾ? ಎಂಬ ಪ್ರಶ್ನೆ ರಿಷಭ್ ಶೆಟ್ಟಿ ಅಭಿಮಾನಿಗಳ ವಲಯದಲ್ಲಿ ಇತ್ತು.
ಅದಕ್ಕೇ ಪೂರಕವಾಗಿ ಚಿತ್ರದ ಚಿತ್ರೀಕರಣ ಮುಗಿದಿರುವ ಸುದ್ದಿ ಇಂದು ಬಂದಿದೆ. ಅದರ ಜೊತೆಗೆ ಒಂದು ಮೇಕಿಂಗ್ ವೀಡಿಯೋ ಸಹ ಹೊಂಬಾಳೆ ಫಿಲಂಸ್ ಮತ್ತು ರಿಷಭ್ ಶೆಟ್ಟಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದರಲ್ಲಿ ಚಿತ್ರ ಮೂಡಿಬಂದ ರೀತಿಯ ಕುರಿತಾದ ದೃಶ್ಯಗಳಿವೆ. ಜೊತೆಗೆ ಇಂಥದ್ದೊಂದು ಚಿತ್ರವನ್ನು ಮಾಡಿ ಮುಗಿಸುವುದಕ್ಕೆ ಸಹಕರಿಸಿದ ಕಲಾವಿದರು ಮತ್ತು ತಂತ್ರಜ್ಞರಿಗೆ ರಿಷಭ್ ಧನ್ಯವಾದಗಳನ್ನು ತಿಳಿಸಿದ್ದಾರೆ.
‘ಕಾಂತಾರ: ಅಧ್ಯಾಯ 1’ ಚಿತ್ರವು ಆಧ್ಯಾತ್ಮ ಮತ್ತು ಸಾಹಸಗಾಥೆಯ ಸಮ್ಮಿಶ್ರಣದ ಸಿನಿಮಾ ಎಂದು ಹೇಳಲಾಗುತ್ತಿದೆ. ಈ ಚಿತ್ರಕ್ಕಾಗಿ ಕುಂದಾಪುರದಲ್ಲಿ ಬರೋಬ್ಬರಿ 25 ಎಕರೆ ಪ್ರದೇಶದಲ್ಲಿ ಬೃಹತ್ ಸೆಟ್ ಹಾಕಿ ಚಿತ್ರೀಕರಣ ಮಾಡಲಾಗಿದೆಯಂತೆ. ಕಾಲ್ಪನಿಕ ಊರೊಂದರನ್ನು ನಿರ್ಮಿಸಿ, ಅಲ್ಲಿ ನೂರಾರು ದಿನಗಳ ಚಿತ್ರೀಕರಣ ಮಾಡಲಾಗಿದೆ. ಭಾರತೀಯ ಹಾಗೂ ಅಂತರರಾಷ್ಟ್ರೀಯ ತಂತ್ರಜ್ಞರೂ ಈ ಸಿನಿಮಾಕ್ಕೆ ಕೈ ಜೋಡಿಸಿದ್ದಾರೆ. 45 ರಿಂದ 50 ದಿನಗಳ ಕಾಲ ಸುಮಾರು 500 ತರಬೇತಿದಾರರು, 3000ಕ್ಕೂ ಹೆಚ್ಚು ಜೂನಿಯರ್ ಕಲಾವಿದರು ಈ ಸಿನಿಮಾದ ಶೂಟಿಂಗ್ನಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ.
‘ಕಾಂತಾರ – ಅಧ್ಯಾಯ 1’ ಚಿತ್ರವನ್ನು ಹೊಂಬಾಳೆ ಫಿಲಂಸ್ನ ವಿಜಯ್ ಕಿರಗಂದೂರು ನಿರ್ಮಿಸುತ್ತಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು ಕನ್ನಡದಲ್ಲಿ ನಿರ್ಮಾಣವಾಗಿ, ನಂತರ ತೆಲುಗು, ತಮಿಳು, ಹಿಂದಿ, ಮಲಯಾಳಂ, ಬಂಗಾಲಿ ಸೇರಿದಂತೆ ಬೇರೆ ಭಾಷೆಗಳಿಗೆ ಡಬ್ ಆಗಿ ಬಿಡುಗಡೆಯಾಗಲಿದೆ.
ಹೊಸದಿಲ್ಲಿ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಹಾರ್ಮುಜ್ ಜಲಸಂಧಿ ಬಂದ್ ಆಗುವ ಆತಂಕದಲ್ಲಿದ್ದ ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಜಯ ಸಿಕ್ಕಿದೆ.…
ತಿರುವನಂತಪುರಂ : 2025ರ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತಿದ್ದ ವೈರಲ್ ಸ್ಟಾರ್ ಮೊನಾಲಿಸಾ ಭೋಸ್ಲೆ ಅವರು ತಮ್ಮ ಪ್ರಿಯಕರ ಮುಹಮ್ಮದ್…
ಸಿಎಂಗೆ ಶಾಸಕ ಗಣೇಶ್ ಪ್ರಸಾದ್ ಮನವಿ; ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ:…
ಹೊಸದಿಲ್ಲಿ : ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ದೇಶದ ಇಂಧನ…
ವನ್ಯಜೀವಿ ಚಿತ್ರಗಳನ್ನು ಮೊಬೈಲ್ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…
ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…