ಮನರಂಜನೆ

ಕೊನೆಗೂ ಮುಗಿಯಿತು ‘ಕಾಂತಾರ – ಚಾಪ್ಟರ್ 1’ ಚಿತ್ರದ ಚಿತ್ರೀಕರಣ

ಕೆಲವೇ ದಿನಗಳ ಹಿಂದಷ್ಟೇ, ನಟ-ನಿರ್ದೇಶಕ ರಿಷಬ್ ಶೆಟ್ಟಿ‌ ಹುಟ್ಟುಹಬ್ಬಕ್ಕೆ ಹೊಂಬಾಳೆ ಫಿಲಂಸ್‌ ಕಡೆಯಿಂದ ‘ಕಾಂತಾರ – ಚಾಪ್ಟರ್ 1’ ಚಿತ್ರದ ಪೋಸ್ಟರ್‌ ಬಿಡುಗಡೆಯಾಗಿತ್ತು. ಇತ್ತೀಚೆಗೆ, ಚಿತ್ರತಂಡದಿಂದ ಇನ್ನೊಂದು ಸುದ್ದಿ ಬಂದಿದೆ. ಅದೇನೆಂದರೆ, ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿದ್ದು, ಚಿತ್ರವು ಅಕ್ಟೋಬರ್‌.2ರಂದು ವಿಶ್ವದಾದ್ಯಂತ ತೆರೆಗೆ ಬರಲಿದೆ.

‘ಕಾಂತಾರ – ಚಾಪ್ಟರ್ 1’ ಚಿತ್ರದ ಬಿಡುಗಡೆಗೆ ಎರಡೂವರೆ ತಿಂಗಳಿದ್ದರೂ, ಚಿತ್ರದ ಬಗ್ಗೆ ಅಪ್ಡೇಟ್‍ಗಳು ಹೊರಬಿದ್ದಿಲ್ಲ. ಅದರಲ್ಲೂ ಚಿತ್ರೀಕರಣ ಮುಗಿದಿರುವ ಸುದ್ದಿ ಇರಲಿಲ್ಲ. ಚಿತ್ರೀಕರಣ ಯಾವಾಗ ಮುಗಿಯುತ್ತದೆ? ಅಂದುಕೊಂಡಂತೆ ಅಕ್ಟೋಬರ್ 02ರಂದು ಬಿಡುಗಡೆಯಾಗುತ್ತದಾ? ಎಂಬ ಪ್ರಶ್ನೆ ರಿಷಭ್‍ ಶೆಟ್ಟಿ ಅಭಿಮಾನಿಗಳ ವಲಯದಲ್ಲಿ ಇತ್ತು.

ಅದಕ್ಕೇ ಪೂರಕವಾಗಿ ಚಿತ್ರದ ಚಿತ್ರೀಕರಣ ಮುಗಿದಿರುವ ಸುದ್ದಿ ಇಂದು ಬಂದಿದೆ. ಅದರ ಜೊತೆಗೆ ಒಂದು ಮೇಕಿಂಗ್‍ ವೀಡಿಯೋ ಸಹ ಹೊಂಬಾಳೆ ಫಿಲಂಸ್‍ ಮತ್ತು ರಿಷಭ್‍ ಶೆಟ್ಟಿ ತಮ್ಮ ಸೋಷಿಯಲ್‍ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದರಲ್ಲಿ ಚಿತ್ರ ಮೂಡಿಬಂದ ರೀತಿಯ ಕುರಿತಾದ ದೃಶ್ಯಗಳಿವೆ. ಜೊತೆಗೆ ಇಂಥದ್ದೊಂದು ಚಿತ್ರವನ್ನು ಮಾಡಿ ಮುಗಿಸುವುದಕ್ಕೆ ಸಹಕರಿಸಿದ ಕಲಾವಿದರು ಮತ್ತು ತಂತ್ರಜ್ಞರಿಗೆ ರಿಷಭ್‍ ಧನ್ಯವಾದಗಳನ್ನು ತಿಳಿಸಿದ್ದಾರೆ.

‘ಕಾಂತಾರ: ಅಧ್ಯಾಯ 1’ ಚಿತ್ರವು ಆಧ್ಯಾತ್ಮ ಮತ್ತು ಸಾಹಸಗಾಥೆಯ ಸಮ್ಮಿಶ್ರಣದ ಸಿನಿಮಾ ಎಂದು ಹೇಳಲಾಗುತ್ತಿದೆ. ಈ ಚಿತ್ರಕ್ಕಾಗಿ ಕುಂದಾಪುರದಲ್ಲಿ ಬರೋಬ್ಬರಿ 25 ಎಕರೆ ಪ್ರದೇಶದಲ್ಲಿ ಬೃಹತ್‌ ಸೆಟ್‌ ಹಾಕಿ ಚಿತ್ರೀಕರಣ ಮಾಡಲಾಗಿದೆಯಂತೆ. ಕಾಲ್ಪನಿಕ ಊರೊಂದರನ್ನು ನಿರ್ಮಿಸಿ, ಅಲ್ಲಿ ನೂರಾರು ದಿನಗಳ ಚಿತ್ರೀಕರಣ ಮಾಡಲಾಗಿದೆ. ಭಾರತೀಯ ಹಾಗೂ ಅಂತರರಾಷ್ಟ್ರೀಯ ತಂತ್ರಜ್ಞರೂ ಈ ಸಿನಿಮಾಕ್ಕೆ ಕೈ ಜೋಡಿಸಿದ್ದಾರೆ. 45 ರಿಂದ 50 ದಿನಗಳ ಕಾಲ ಸುಮಾರು 500 ತರಬೇತಿದಾರರು, 3000ಕ್ಕೂ ಹೆಚ್ಚು ಜೂನಿಯರ್‌ ಕಲಾವಿದರು ಈ ಸಿನಿಮಾದ ಶೂಟಿಂಗ್‌ನಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ.

‘ಕಾಂತಾರ – ಅಧ್ಯಾಯ 1’ ಚಿತ್ರವನ್ನು ಹೊಂಬಾಳೆ ಫಿಲಂಸ್‍ನ ವಿಜಯ್‍ ಕಿರಗಂದೂರು ನಿರ್ಮಿಸುತ್ತಿದ್ದಾರೆ. ಇದೊಂದು ಪ್ಯಾನ್‍ ಇಂಡಿಯಾ ಚಿತ್ರವಾಗಿದ್ದು ಕನ್ನಡದಲ್ಲಿ ನಿರ್ಮಾಣವಾಗಿ, ನಂತರ ತೆಲುಗು, ತಮಿಳು, ಹಿಂದಿ, ಮಲಯಾಳಂ, ಬಂಗಾಲಿ ಸೇರಿದಂತೆ ಬೇರೆ ಭಾಷೆಗಳಿಗೆ ಡಬ್‍ ಆಗಿ ಬಿಡುಗಡೆಯಾಗಲಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

3 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

3 hours ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

3 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಮೂಳೆಗಳು ಮುರಿಯುತ್ತಿದ್ದರೂ ಬದುಕು ಕಟ್ಟಿಕೊಂಡ ರಾಧಿಕಾ

ಪಂಜುಗಂಗೊಳ್ಳಿ  ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…

3 hours ago

ಪಣ್ಣೇದೊಡ್ಡಿ ಡೇರಿ ಆಡಳಿತ-ಹಾಲು ಉತ್ಪಾದಕರ ಮಾರಾಮಾರಿ

ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…

3 hours ago