ಮನರಂಜನೆ

ಕೊನೆಗೂ ಮುಗಿಯಿತು ‘ಕಾಂತಾರ – ಚಾಪ್ಟರ್ 1’ ಚಿತ್ರದ ಚಿತ್ರೀಕರಣ

ಕೆಲವೇ ದಿನಗಳ ಹಿಂದಷ್ಟೇ, ನಟ-ನಿರ್ದೇಶಕ ರಿಷಬ್ ಶೆಟ್ಟಿ‌ ಹುಟ್ಟುಹಬ್ಬಕ್ಕೆ ಹೊಂಬಾಳೆ ಫಿಲಂಸ್‌ ಕಡೆಯಿಂದ ‘ಕಾಂತಾರ – ಚಾಪ್ಟರ್ 1’ ಚಿತ್ರದ ಪೋಸ್ಟರ್‌ ಬಿಡುಗಡೆಯಾಗಿತ್ತು. ಇತ್ತೀಚೆಗೆ, ಚಿತ್ರತಂಡದಿಂದ ಇನ್ನೊಂದು ಸುದ್ದಿ ಬಂದಿದೆ. ಅದೇನೆಂದರೆ, ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿದ್ದು, ಚಿತ್ರವು ಅಕ್ಟೋಬರ್‌.2ರಂದು ವಿಶ್ವದಾದ್ಯಂತ ತೆರೆಗೆ ಬರಲಿದೆ.

‘ಕಾಂತಾರ – ಚಾಪ್ಟರ್ 1’ ಚಿತ್ರದ ಬಿಡುಗಡೆಗೆ ಎರಡೂವರೆ ತಿಂಗಳಿದ್ದರೂ, ಚಿತ್ರದ ಬಗ್ಗೆ ಅಪ್ಡೇಟ್‍ಗಳು ಹೊರಬಿದ್ದಿಲ್ಲ. ಅದರಲ್ಲೂ ಚಿತ್ರೀಕರಣ ಮುಗಿದಿರುವ ಸುದ್ದಿ ಇರಲಿಲ್ಲ. ಚಿತ್ರೀಕರಣ ಯಾವಾಗ ಮುಗಿಯುತ್ತದೆ? ಅಂದುಕೊಂಡಂತೆ ಅಕ್ಟೋಬರ್ 02ರಂದು ಬಿಡುಗಡೆಯಾಗುತ್ತದಾ? ಎಂಬ ಪ್ರಶ್ನೆ ರಿಷಭ್‍ ಶೆಟ್ಟಿ ಅಭಿಮಾನಿಗಳ ವಲಯದಲ್ಲಿ ಇತ್ತು.

ಅದಕ್ಕೇ ಪೂರಕವಾಗಿ ಚಿತ್ರದ ಚಿತ್ರೀಕರಣ ಮುಗಿದಿರುವ ಸುದ್ದಿ ಇಂದು ಬಂದಿದೆ. ಅದರ ಜೊತೆಗೆ ಒಂದು ಮೇಕಿಂಗ್‍ ವೀಡಿಯೋ ಸಹ ಹೊಂಬಾಳೆ ಫಿಲಂಸ್‍ ಮತ್ತು ರಿಷಭ್‍ ಶೆಟ್ಟಿ ತಮ್ಮ ಸೋಷಿಯಲ್‍ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದರಲ್ಲಿ ಚಿತ್ರ ಮೂಡಿಬಂದ ರೀತಿಯ ಕುರಿತಾದ ದೃಶ್ಯಗಳಿವೆ. ಜೊತೆಗೆ ಇಂಥದ್ದೊಂದು ಚಿತ್ರವನ್ನು ಮಾಡಿ ಮುಗಿಸುವುದಕ್ಕೆ ಸಹಕರಿಸಿದ ಕಲಾವಿದರು ಮತ್ತು ತಂತ್ರಜ್ಞರಿಗೆ ರಿಷಭ್‍ ಧನ್ಯವಾದಗಳನ್ನು ತಿಳಿಸಿದ್ದಾರೆ.

‘ಕಾಂತಾರ: ಅಧ್ಯಾಯ 1’ ಚಿತ್ರವು ಆಧ್ಯಾತ್ಮ ಮತ್ತು ಸಾಹಸಗಾಥೆಯ ಸಮ್ಮಿಶ್ರಣದ ಸಿನಿಮಾ ಎಂದು ಹೇಳಲಾಗುತ್ತಿದೆ. ಈ ಚಿತ್ರಕ್ಕಾಗಿ ಕುಂದಾಪುರದಲ್ಲಿ ಬರೋಬ್ಬರಿ 25 ಎಕರೆ ಪ್ರದೇಶದಲ್ಲಿ ಬೃಹತ್‌ ಸೆಟ್‌ ಹಾಕಿ ಚಿತ್ರೀಕರಣ ಮಾಡಲಾಗಿದೆಯಂತೆ. ಕಾಲ್ಪನಿಕ ಊರೊಂದರನ್ನು ನಿರ್ಮಿಸಿ, ಅಲ್ಲಿ ನೂರಾರು ದಿನಗಳ ಚಿತ್ರೀಕರಣ ಮಾಡಲಾಗಿದೆ. ಭಾರತೀಯ ಹಾಗೂ ಅಂತರರಾಷ್ಟ್ರೀಯ ತಂತ್ರಜ್ಞರೂ ಈ ಸಿನಿಮಾಕ್ಕೆ ಕೈ ಜೋಡಿಸಿದ್ದಾರೆ. 45 ರಿಂದ 50 ದಿನಗಳ ಕಾಲ ಸುಮಾರು 500 ತರಬೇತಿದಾರರು, 3000ಕ್ಕೂ ಹೆಚ್ಚು ಜೂನಿಯರ್‌ ಕಲಾವಿದರು ಈ ಸಿನಿಮಾದ ಶೂಟಿಂಗ್‌ನಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ.

‘ಕಾಂತಾರ – ಅಧ್ಯಾಯ 1’ ಚಿತ್ರವನ್ನು ಹೊಂಬಾಳೆ ಫಿಲಂಸ್‍ನ ವಿಜಯ್‍ ಕಿರಗಂದೂರು ನಿರ್ಮಿಸುತ್ತಿದ್ದಾರೆ. ಇದೊಂದು ಪ್ಯಾನ್‍ ಇಂಡಿಯಾ ಚಿತ್ರವಾಗಿದ್ದು ಕನ್ನಡದಲ್ಲಿ ನಿರ್ಮಾಣವಾಗಿ, ನಂತರ ತೆಲುಗು, ತಮಿಳು, ಹಿಂದಿ, ಮಲಯಾಳಂ, ಬಂಗಾಲಿ ಸೇರಿದಂತೆ ಬೇರೆ ಭಾಷೆಗಳಿಗೆ ಡಬ್‍ ಆಗಿ ಬಿಡುಗಡೆಯಾಗಲಿದೆ.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

23 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

23 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

23 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

23 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

23 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

23 hours ago