ಮನರಂಜನೆ

ಕೊನೆಗೂ ಮುಗಿಯಿತು ‘ಕಾಂತಾರ – ಚಾಪ್ಟರ್ 1’ ಚಿತ್ರದ ಚಿತ್ರೀಕರಣ

ಕೆಲವೇ ದಿನಗಳ ಹಿಂದಷ್ಟೇ, ನಟ-ನಿರ್ದೇಶಕ ರಿಷಬ್ ಶೆಟ್ಟಿ‌ ಹುಟ್ಟುಹಬ್ಬಕ್ಕೆ ಹೊಂಬಾಳೆ ಫಿಲಂಸ್‌ ಕಡೆಯಿಂದ ‘ಕಾಂತಾರ – ಚಾಪ್ಟರ್ 1’ ಚಿತ್ರದ ಪೋಸ್ಟರ್‌ ಬಿಡುಗಡೆಯಾಗಿತ್ತು. ಇತ್ತೀಚೆಗೆ, ಚಿತ್ರತಂಡದಿಂದ ಇನ್ನೊಂದು ಸುದ್ದಿ ಬಂದಿದೆ. ಅದೇನೆಂದರೆ, ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿದ್ದು, ಚಿತ್ರವು ಅಕ್ಟೋಬರ್‌.2ರಂದು ವಿಶ್ವದಾದ್ಯಂತ ತೆರೆಗೆ ಬರಲಿದೆ.

‘ಕಾಂತಾರ – ಚಾಪ್ಟರ್ 1’ ಚಿತ್ರದ ಬಿಡುಗಡೆಗೆ ಎರಡೂವರೆ ತಿಂಗಳಿದ್ದರೂ, ಚಿತ್ರದ ಬಗ್ಗೆ ಅಪ್ಡೇಟ್‍ಗಳು ಹೊರಬಿದ್ದಿಲ್ಲ. ಅದರಲ್ಲೂ ಚಿತ್ರೀಕರಣ ಮುಗಿದಿರುವ ಸುದ್ದಿ ಇರಲಿಲ್ಲ. ಚಿತ್ರೀಕರಣ ಯಾವಾಗ ಮುಗಿಯುತ್ತದೆ? ಅಂದುಕೊಂಡಂತೆ ಅಕ್ಟೋಬರ್ 02ರಂದು ಬಿಡುಗಡೆಯಾಗುತ್ತದಾ? ಎಂಬ ಪ್ರಶ್ನೆ ರಿಷಭ್‍ ಶೆಟ್ಟಿ ಅಭಿಮಾನಿಗಳ ವಲಯದಲ್ಲಿ ಇತ್ತು.

ಅದಕ್ಕೇ ಪೂರಕವಾಗಿ ಚಿತ್ರದ ಚಿತ್ರೀಕರಣ ಮುಗಿದಿರುವ ಸುದ್ದಿ ಇಂದು ಬಂದಿದೆ. ಅದರ ಜೊತೆಗೆ ಒಂದು ಮೇಕಿಂಗ್‍ ವೀಡಿಯೋ ಸಹ ಹೊಂಬಾಳೆ ಫಿಲಂಸ್‍ ಮತ್ತು ರಿಷಭ್‍ ಶೆಟ್ಟಿ ತಮ್ಮ ಸೋಷಿಯಲ್‍ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದರಲ್ಲಿ ಚಿತ್ರ ಮೂಡಿಬಂದ ರೀತಿಯ ಕುರಿತಾದ ದೃಶ್ಯಗಳಿವೆ. ಜೊತೆಗೆ ಇಂಥದ್ದೊಂದು ಚಿತ್ರವನ್ನು ಮಾಡಿ ಮುಗಿಸುವುದಕ್ಕೆ ಸಹಕರಿಸಿದ ಕಲಾವಿದರು ಮತ್ತು ತಂತ್ರಜ್ಞರಿಗೆ ರಿಷಭ್‍ ಧನ್ಯವಾದಗಳನ್ನು ತಿಳಿಸಿದ್ದಾರೆ.

‘ಕಾಂತಾರ: ಅಧ್ಯಾಯ 1’ ಚಿತ್ರವು ಆಧ್ಯಾತ್ಮ ಮತ್ತು ಸಾಹಸಗಾಥೆಯ ಸಮ್ಮಿಶ್ರಣದ ಸಿನಿಮಾ ಎಂದು ಹೇಳಲಾಗುತ್ತಿದೆ. ಈ ಚಿತ್ರಕ್ಕಾಗಿ ಕುಂದಾಪುರದಲ್ಲಿ ಬರೋಬ್ಬರಿ 25 ಎಕರೆ ಪ್ರದೇಶದಲ್ಲಿ ಬೃಹತ್‌ ಸೆಟ್‌ ಹಾಕಿ ಚಿತ್ರೀಕರಣ ಮಾಡಲಾಗಿದೆಯಂತೆ. ಕಾಲ್ಪನಿಕ ಊರೊಂದರನ್ನು ನಿರ್ಮಿಸಿ, ಅಲ್ಲಿ ನೂರಾರು ದಿನಗಳ ಚಿತ್ರೀಕರಣ ಮಾಡಲಾಗಿದೆ. ಭಾರತೀಯ ಹಾಗೂ ಅಂತರರಾಷ್ಟ್ರೀಯ ತಂತ್ರಜ್ಞರೂ ಈ ಸಿನಿಮಾಕ್ಕೆ ಕೈ ಜೋಡಿಸಿದ್ದಾರೆ. 45 ರಿಂದ 50 ದಿನಗಳ ಕಾಲ ಸುಮಾರು 500 ತರಬೇತಿದಾರರು, 3000ಕ್ಕೂ ಹೆಚ್ಚು ಜೂನಿಯರ್‌ ಕಲಾವಿದರು ಈ ಸಿನಿಮಾದ ಶೂಟಿಂಗ್‌ನಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ.

‘ಕಾಂತಾರ – ಅಧ್ಯಾಯ 1’ ಚಿತ್ರವನ್ನು ಹೊಂಬಾಳೆ ಫಿಲಂಸ್‍ನ ವಿಜಯ್‍ ಕಿರಗಂದೂರು ನಿರ್ಮಿಸುತ್ತಿದ್ದಾರೆ. ಇದೊಂದು ಪ್ಯಾನ್‍ ಇಂಡಿಯಾ ಚಿತ್ರವಾಗಿದ್ದು ಕನ್ನಡದಲ್ಲಿ ನಿರ್ಮಾಣವಾಗಿ, ನಂತರ ತೆಲುಗು, ತಮಿಳು, ಹಿಂದಿ, ಮಲಯಾಳಂ, ಬಂಗಾಲಿ ಸೇರಿದಂತೆ ಬೇರೆ ಭಾಷೆಗಳಿಗೆ ಡಬ್‍ ಆಗಿ ಬಿಡುಗಡೆಯಾಗಲಿದೆ.

ಆಂದೋಲನ ಡೆಸ್ಕ್

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

3 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

3 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

6 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

6 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

9 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

9 hours ago