ಮನರಂಜನೆ

‘ಕಾಂತಾರ – ಚಾಪ್ಟರ್ 1’ ಯಶಸ್ಸು; ಕೇಕ್‍ ಕತ್ತರಿಸಿ ಸಂಭ್ರಮಿಸಿದ ಚಿತ್ರತಂಡ

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರವು ಅಕ್ಟೋಬರ್ 02ರಂದು ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಚಿತ್ರವು 883 ಪ್ಲಸ್‍ ಕೋಟಿ ರೂ. ಗಳಿಗೆ ಮಾಡಿದೆ ಎಂದು ಚಿತ್ರತಂಡ ಘೋಷಿಸಿಕೊಂಡಿದೆ.

ಈ ಮಧ್ಯೆ, ಚಿತ್ರತಂಡದವರೆಲ್ಲಾ ಶನಿವಾರ ರಾತ್ರಿ, ಬೆಂಗಳೂರಿನ ವರ್ಲ್ಡ್ ಟ್ರೇಡ್‍ ಸೆಂಟರ್‍ನ 31ನೇ ಮಹಡಿಯಲ್ಲಿರುವ ಹೈ ಅಲ್ಟ್ರಾ ಲೌಂಜ್‍ ರೆಸ್ಟೋರೆಂಟ್‍ನಲ್ಲಿ ಸೇರಿ ಚಿತ್ರ ಗೆದ್ದ ಸಂಭ್ರಮವನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ರಿಷಭ್‍, ವಿಜಯ್‍ ಕಿರಗಂದೂರು, ಗುಲ್ಶನ್‍ ದೇವಯ್ಯ, ರುಕ್ಮಿಣಿ ವಸಂತ್‍, ಛಾಯಾಗ್ರಾಹಕ ಅರವಿಂದ್‍ ಕಶ್ಯಪ್‍ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇದನ್ನು ಓದಿ: ಕನ್ನಡದ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾದ ‘ಕಾಂತಾರ – ಚಾಪ್ಟರ್ 1’

ಕನ್ನಡದಲ್ಲಿ ಇದುವರೆಗೂ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾಗಿ ಯಶ್‍ ಅಭಿನಯದ ‘ಕೆಜಿಎಫ್‍ – ಚಾಪ್ಟರ್ 2’ ಮತ್ತು ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ ಚಿತ್ರಗಳಿದ್ದವು. ಈಗ ಆ ದಾಖಲೆಯನ್ನು ‘ಕಾಂತಾರ – ಚಾಪ್ಟರ್ 1’ ಮುರಿದಿದೆ. ಚಿತ್ರವು ಕರ್ನಾಟಕದಲ್ಲಿ 268 ಕೋಟಿ ರೂ. ಗಳಿಕೆ ಮಾಡಿದ್ದು, ರಾಜ್ಯದಲ್ಲಿ 200 ಕೋಟಿ ರೂ. ಗಡಿ ದಾಟಿದ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಬರೀ ಕರ್ನಾಟಕವಷ್ಟೇ ಅಲ್ಲ, ಚಿತ್ರ ಬಿಡುಗಡೆಯಾದ ಬೇರೆ ಕಡೆಗಳಲ್ಲೂ ಹೊಸ ದಾಖಲೆಯನ್ನೇ ಮಾಡಿದೆ. ಚಿತ್ರವು ಜಾಗತಿಕವಾಗಿ 883 ಕೋಟಿ ರೂ. ಗಳಿಗೆ ಮಾಡುವ ಈ ವರ್ಷ ಅತೀ ಹೆಚ್ಚು ಗಳಿಕೆ ಮಾಡಿದ ಭಾರತೀಯ ಚಿತ್ರವಾಗಿ ಹೊರಹೊಮ್ಮಿದೆ. ಇದಕ್ಕೂ ಮೊದಲು ಈ ವರ್ಷ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾಗಿ ವಿಕ್ಕಿ ಕೌಶಾಲ್‍ ಅಭಿನಯದ ‘ಛಾವಾ’ ಚಿತ್ರವಿತ್ತು. ಅದರ ಗಳಿಕೆಯನ್ನು ‘ಕಾಂತಾರ – ಚಾಪ್ಟರ್ 1’ ಮುರಿದಿದೆ.

‘ಕಾಂತಾರ – ಚಾಪ್ಟರ್ 1’ ಚಿತ್ರವನ್ನು ಹೊಂಬಾಳೆ ಫಿಲಂಸ್‍ ನಿರ್ಮಿಸಿದ್ದು, ರಿಷಭ್‍ ಶೆಟ್ಟಿ ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಅವರ ಜೊತೆಗೆ ರುಕ್ಮಿಣಿ ವಸಂತ್‍, ಅಚ್ಯುತ್‍ ಕುಮಾರ್, ಗುಲ್ಶನ್‍ ದೇವಯ್ಯ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅಜನೀಶ್‍ ಲೋಕನಾಥ್‍ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ಉತ್ತರ ಪ್ರದೇಶದಲ್ಲಿ ಭಾರತೀಯ ವಾಯುಪಡೆಯ ವಿಮಾನ ಪತನ: ಇಬ್ಬರು ಪೈಲಟ್‌ಗಳು ಬಚಾವ್‌

ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್‌ರಾಜ್‌ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್‌ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳನ್ನು…

25 mins ago

ನೈಸರ್ಗಿಕ ಕೃಷಿ ಪದ್ಧತಿ ಎಲ್ಲರ ಪಾಲಿಗೆ ಜೀವನೋಪಾಯವಾಗಲಿ: ಡಾ. ಶರಣ ಪ್ರಕಾಶ್‌ ಪಾಟೀಲ್

ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…

35 mins ago

ಚಾಮುಂಡಿಬೆಟ್ಟದ ಪಾರಂಪರಿಕತೆಗೆ ಧಕ್ಕೆಯಾಗದಂತೆ ಅಭಿವೃದ್ಧಿ: ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು: ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದ ಪಾರಂಪರಿಕತೆಗೆ ಯಾವುದೇ ಧಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ…

50 mins ago

ಅಶ್ಲೀಲ ಮೆಸೇಜ್‌ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ನೋಟಿಸ್‌

ಬೆಂಗಳೂರು: ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್‌, ಕಮೆಂಟ್‌ ಮಾಡಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ಪೊಲೀಸರು…

1 hour ago

ಹಾಸನ| ಕುಡಿದ ಮತ್ತಿನಲ್ಲಿ ಸ್ನೇಹಿತನ ಕೊಲೆ

ಹಾಸನ: ಕುಡಿದ ಮತ್ತಿನಲ್ಲಿ ಗೆಳೆಯರು ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ. ಗಣೇಶ್‌…

2 hours ago

ಚಾಮುಂಡಿಬೆಟ್ಟ ಉಳಿಸಿ: ಅಭಿವೃದ್ಧಿ ಕಾಮಗಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟವನ್ನು ಉಳಿಸುವಂತೆ ಒತ್ತಾಯಿಸಿ ಸಾರ್ವಜನಿಕರು ಹಾಗೂ ಪರಿಸರವಾದಿಗಳು ಪ್ರತಿಭಟನೆ ನಡೆಸಿದರು. ಚಾಮುಂಡೇಶ್ವರಿ ದೇವಸ್ಥಾನದ…

2 hours ago