ಮನರಂಜನೆ

‘ಕಾಂತಾರ – ಚಾಪ್ಟರ್ 1’ ಯಶಸ್ಸು; ಕೇಕ್‍ ಕತ್ತರಿಸಿ ಸಂಭ್ರಮಿಸಿದ ಚಿತ್ರತಂಡ

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರವು ಅಕ್ಟೋಬರ್ 02ರಂದು ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಚಿತ್ರವು 883 ಪ್ಲಸ್‍ ಕೋಟಿ ರೂ. ಗಳಿಗೆ ಮಾಡಿದೆ ಎಂದು ಚಿತ್ರತಂಡ ಘೋಷಿಸಿಕೊಂಡಿದೆ.

ಈ ಮಧ್ಯೆ, ಚಿತ್ರತಂಡದವರೆಲ್ಲಾ ಶನಿವಾರ ರಾತ್ರಿ, ಬೆಂಗಳೂರಿನ ವರ್ಲ್ಡ್ ಟ್ರೇಡ್‍ ಸೆಂಟರ್‍ನ 31ನೇ ಮಹಡಿಯಲ್ಲಿರುವ ಹೈ ಅಲ್ಟ್ರಾ ಲೌಂಜ್‍ ರೆಸ್ಟೋರೆಂಟ್‍ನಲ್ಲಿ ಸೇರಿ ಚಿತ್ರ ಗೆದ್ದ ಸಂಭ್ರಮವನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ರಿಷಭ್‍, ವಿಜಯ್‍ ಕಿರಗಂದೂರು, ಗುಲ್ಶನ್‍ ದೇವಯ್ಯ, ರುಕ್ಮಿಣಿ ವಸಂತ್‍, ಛಾಯಾಗ್ರಾಹಕ ಅರವಿಂದ್‍ ಕಶ್ಯಪ್‍ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇದನ್ನು ಓದಿ: ಕನ್ನಡದ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾದ ‘ಕಾಂತಾರ – ಚಾಪ್ಟರ್ 1’

ಕನ್ನಡದಲ್ಲಿ ಇದುವರೆಗೂ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾಗಿ ಯಶ್‍ ಅಭಿನಯದ ‘ಕೆಜಿಎಫ್‍ – ಚಾಪ್ಟರ್ 2’ ಮತ್ತು ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ ಚಿತ್ರಗಳಿದ್ದವು. ಈಗ ಆ ದಾಖಲೆಯನ್ನು ‘ಕಾಂತಾರ – ಚಾಪ್ಟರ್ 1’ ಮುರಿದಿದೆ. ಚಿತ್ರವು ಕರ್ನಾಟಕದಲ್ಲಿ 268 ಕೋಟಿ ರೂ. ಗಳಿಕೆ ಮಾಡಿದ್ದು, ರಾಜ್ಯದಲ್ಲಿ 200 ಕೋಟಿ ರೂ. ಗಡಿ ದಾಟಿದ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಬರೀ ಕರ್ನಾಟಕವಷ್ಟೇ ಅಲ್ಲ, ಚಿತ್ರ ಬಿಡುಗಡೆಯಾದ ಬೇರೆ ಕಡೆಗಳಲ್ಲೂ ಹೊಸ ದಾಖಲೆಯನ್ನೇ ಮಾಡಿದೆ. ಚಿತ್ರವು ಜಾಗತಿಕವಾಗಿ 883 ಕೋಟಿ ರೂ. ಗಳಿಗೆ ಮಾಡುವ ಈ ವರ್ಷ ಅತೀ ಹೆಚ್ಚು ಗಳಿಕೆ ಮಾಡಿದ ಭಾರತೀಯ ಚಿತ್ರವಾಗಿ ಹೊರಹೊಮ್ಮಿದೆ. ಇದಕ್ಕೂ ಮೊದಲು ಈ ವರ್ಷ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾಗಿ ವಿಕ್ಕಿ ಕೌಶಾಲ್‍ ಅಭಿನಯದ ‘ಛಾವಾ’ ಚಿತ್ರವಿತ್ತು. ಅದರ ಗಳಿಕೆಯನ್ನು ‘ಕಾಂತಾರ – ಚಾಪ್ಟರ್ 1’ ಮುರಿದಿದೆ.

‘ಕಾಂತಾರ – ಚಾಪ್ಟರ್ 1’ ಚಿತ್ರವನ್ನು ಹೊಂಬಾಳೆ ಫಿಲಂಸ್‍ ನಿರ್ಮಿಸಿದ್ದು, ರಿಷಭ್‍ ಶೆಟ್ಟಿ ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಅವರ ಜೊತೆಗೆ ರುಕ್ಮಿಣಿ ವಸಂತ್‍, ಅಚ್ಯುತ್‍ ಕುಮಾರ್, ಗುಲ್ಶನ್‍ ದೇವಯ್ಯ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅಜನೀಶ್‍ ಲೋಕನಾಥ್‍ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

13 mins ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

4 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

4 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

4 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

7 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

7 hours ago