ಮನರಂಜನೆ

‘ಕಾಂತಾರ – ಚಾಪ್ಟರ್ 1’ ಯಶಸ್ಸು; ಕೇಕ್‍ ಕತ್ತರಿಸಿ ಸಂಭ್ರಮಿಸಿದ ಚಿತ್ರತಂಡ

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರವು ಅಕ್ಟೋಬರ್ 02ರಂದು ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಚಿತ್ರವು 883 ಪ್ಲಸ್‍ ಕೋಟಿ ರೂ. ಗಳಿಗೆ ಮಾಡಿದೆ ಎಂದು ಚಿತ್ರತಂಡ ಘೋಷಿಸಿಕೊಂಡಿದೆ.

ಈ ಮಧ್ಯೆ, ಚಿತ್ರತಂಡದವರೆಲ್ಲಾ ಶನಿವಾರ ರಾತ್ರಿ, ಬೆಂಗಳೂರಿನ ವರ್ಲ್ಡ್ ಟ್ರೇಡ್‍ ಸೆಂಟರ್‍ನ 31ನೇ ಮಹಡಿಯಲ್ಲಿರುವ ಹೈ ಅಲ್ಟ್ರಾ ಲೌಂಜ್‍ ರೆಸ್ಟೋರೆಂಟ್‍ನಲ್ಲಿ ಸೇರಿ ಚಿತ್ರ ಗೆದ್ದ ಸಂಭ್ರಮವನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ರಿಷಭ್‍, ವಿಜಯ್‍ ಕಿರಗಂದೂರು, ಗುಲ್ಶನ್‍ ದೇವಯ್ಯ, ರುಕ್ಮಿಣಿ ವಸಂತ್‍, ಛಾಯಾಗ್ರಾಹಕ ಅರವಿಂದ್‍ ಕಶ್ಯಪ್‍ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇದನ್ನು ಓದಿ: ಕನ್ನಡದ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾದ ‘ಕಾಂತಾರ – ಚಾಪ್ಟರ್ 1’

ಕನ್ನಡದಲ್ಲಿ ಇದುವರೆಗೂ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾಗಿ ಯಶ್‍ ಅಭಿನಯದ ‘ಕೆಜಿಎಫ್‍ – ಚಾಪ್ಟರ್ 2’ ಮತ್ತು ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ ಚಿತ್ರಗಳಿದ್ದವು. ಈಗ ಆ ದಾಖಲೆಯನ್ನು ‘ಕಾಂತಾರ – ಚಾಪ್ಟರ್ 1’ ಮುರಿದಿದೆ. ಚಿತ್ರವು ಕರ್ನಾಟಕದಲ್ಲಿ 268 ಕೋಟಿ ರೂ. ಗಳಿಕೆ ಮಾಡಿದ್ದು, ರಾಜ್ಯದಲ್ಲಿ 200 ಕೋಟಿ ರೂ. ಗಡಿ ದಾಟಿದ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಬರೀ ಕರ್ನಾಟಕವಷ್ಟೇ ಅಲ್ಲ, ಚಿತ್ರ ಬಿಡುಗಡೆಯಾದ ಬೇರೆ ಕಡೆಗಳಲ್ಲೂ ಹೊಸ ದಾಖಲೆಯನ್ನೇ ಮಾಡಿದೆ. ಚಿತ್ರವು ಜಾಗತಿಕವಾಗಿ 883 ಕೋಟಿ ರೂ. ಗಳಿಗೆ ಮಾಡುವ ಈ ವರ್ಷ ಅತೀ ಹೆಚ್ಚು ಗಳಿಕೆ ಮಾಡಿದ ಭಾರತೀಯ ಚಿತ್ರವಾಗಿ ಹೊರಹೊಮ್ಮಿದೆ. ಇದಕ್ಕೂ ಮೊದಲು ಈ ವರ್ಷ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾಗಿ ವಿಕ್ಕಿ ಕೌಶಾಲ್‍ ಅಭಿನಯದ ‘ಛಾವಾ’ ಚಿತ್ರವಿತ್ತು. ಅದರ ಗಳಿಕೆಯನ್ನು ‘ಕಾಂತಾರ – ಚಾಪ್ಟರ್ 1’ ಮುರಿದಿದೆ.

‘ಕಾಂತಾರ – ಚಾಪ್ಟರ್ 1’ ಚಿತ್ರವನ್ನು ಹೊಂಬಾಳೆ ಫಿಲಂಸ್‍ ನಿರ್ಮಿಸಿದ್ದು, ರಿಷಭ್‍ ಶೆಟ್ಟಿ ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಅವರ ಜೊತೆಗೆ ರುಕ್ಮಿಣಿ ವಸಂತ್‍, ಅಚ್ಯುತ್‍ ಕುಮಾರ್, ಗುಲ್ಶನ್‍ ದೇವಯ್ಯ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅಜನೀಶ್‍ ಲೋಕನಾಥ್‍ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ಚೀನಾ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: 21 ಜನರು ಸಾವು

ಬೀಜಿಂಗ್:‌ ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು…

30 mins ago

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್‌ನಲ್ಲಿ ನಡೆದಿದೆ. ಮೈಸೂರು ಮೂಲದ…

1 hour ago

ನೀರಿಗಿಳಿಯುವ ಮುನ್ನ ಇರಲಿ ಎಚ್ಚರ !

ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…

5 hours ago

ಸರಳ, ಸಜ್ಜನ ರಾಜಕಾರಣಿ ಎಸ್.ಎಂ.ಕೃಷ್ಣ

ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು  ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…

5 hours ago

ಬಿಸಿಲಿಗೆ ಪರ್ಯಾಯ ಈಜುಕೊಳಗಳು

ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್‌ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…

5 hours ago

ಗ್ರಾಪಂ ಅಧಿಕಾರಿಗಳ ನಿಗಾಕ್ಕೆ ಜಿಪಿಎಸ್ ಸಿಸ್ಟಂ

ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…

5 hours ago