ಮನರಂಜನೆ

ಕಾಂತಾರ ಚಾಪ್ಟರ್‌ 1 ಟ್ರೇಲರ್‌ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಬೆಂಗಳೂರು: ಬಹು ನಿರೀಕ್ಷಿತ ಕಾಂತಾರ ಚಾಪ್ಟರ್‌ 1 ಟ್ರೇಲರ್‌ ಬಿಡುಗಡೆಗೆ ಮುಹೂರ್ತ ಫಿಕ್ಸ್‌ ಆಗಿದ್ದು, ಸೆಪ್ಟೆಂಬರ್.‌22ರಂದು ಟ್ರೇಲರ್‌ ರಿಲೀಸ್‌ ಆಗಲಿದೆ.

ಕಾಂತಾರ ಚಾಪ್ಟರ್‌ 1 ಬಹಳ ನಿರೀಕ್ಷೆ ಮೂಡಿಸಿದ ಸಿನಿಮಾ. ಈ ಸಿನಿಮಾ ಅಕ್ಟೋಬರ್.‌2ರಂದು ತೆರೆಗೆ ಬರಲಿದೆ. ಈ ಚಿತ್ರದ ಟ್ರೇಲರ್‌ ಸೆ.22ರಂದು ಬಿಡುಗಡೆ ಆಗಲಿದೆ.

ಈ ಚಿತ್ರದಲ್ಲಿ ರಿಷಬ್‌ ಶೆಟ್ಟಿಗೆ ರುಕ್ಮಿಣಿ ವಸಂತ್‌ ಜೋಡಿಯಾಗಿದ್ದಾರೆ. ನಟ ರಿಷಬ್‌ ಶೆಟ್ಟಿ ಅವರು ಬಹು ನಿರೀಕ್ಷಿತ ಕಾಂತಾರ ಅಧ್ಯಾಯ 1 ಚಿತ್ರ 2025ರ ದಸರಾ ಸಮಯದಲ್ಲಿ ಬಿಡುಗಡೆಯಾಗಲಿದೆ. ಅಕ್ಟೋಬರ್.‌2ರಂದು ಏಳು ಭಾಷೆಗಳಲ್ಲಿ ಸಿನಿಮಾ ರಿಲೀಸ್‌ ಆಗಲಿದ್ದು, ಸಿನಿಮಾ ಭಾರೀ ನಿರೀಕ್ಷೆ ಮೂಡಿಸಿದೆ.

ಕಾಂತಾರ ಬಹು ಭಾಷೆಗಳಲ್ಲಿ ಬಿಡುಗಡೆಯಾಗಿ ಭಾರೀ ಯಶಸ್ಸನ್ನು ಕಂಡಿತ್ತು. ರಿಷಬ್‌ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ ತಂದುಕೊಟ್ಟಿದ್ದು, ಇದೀಗ ಕಾಂತಾರ ಚಾಪ್ಟರ್.‌1 ತೆರೆ ಮೇಲೆ ಬರಲು ಸಜ್ಜಾಗುತ್ತಿದೆ.

ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಇಂಗ್ಲೀಷ್‌ ಹಾಗೂ ಬೆಂಗಾಲಿ ಭಾಷೆಗಳಲ್ಲಿ ಸಿನಿಮಾ ರಿಲೀಸ್‌ ಆಗಲಿದೆ.

ಆಂದೋಲನ ಡೆಸ್ಕ್

Recent Posts

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

8 mins ago

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

33 mins ago

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

37 mins ago

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

50 mins ago

ಡಾ.ಬಿ.ಆರ್.ಅಂಬೇಡ್ಕರ್ ಎಂಬ ಅಮರ ಜಗತ್ತು…

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…

56 mins ago

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

4 hours ago