ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಕೊಲೆ ಪ್ರಕಣಕ್ಕೆ ಸಂಬಂಧಿಸಿದಂತೆ ಬಂಧನವಾಗಿರುವ ಕನ್ನಡದ ಖ್ಯಾತ ನಟ ದರ್ಶನ್ ಅವರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಕಲಾವಿದರ ಸಂಘದ ಜೊತೆಗೆ ಚರ್ಚಿಸಿ ಬಳಿಕ ತೀರ್ಮಾನಿಸಲಾಗುವುದು ಎಂದು ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್ಸಿಸಿ) ಅಧ್ಯಕ್ಷ ಎನ್.ಎಂ ಸುರೇಶ್ ಬುಧವಾರ (ಜೂನ್.12) ಹೇಳಿದ್ದಾರೆ.
ಕೊಲೆ ಪ್ರಕರಣ ಆರೋಪಿ ದರ್ಶನ್ ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಕೆಎಫ್ಸಿಸಿ ಯನ್ನು ಒತ್ತಾಯಿಸಿದೆ. ದರ್ಶನ್ ಸಿನಿಮಾ ಬಿಡುಗಡೆ ಮಾಡಬಾರದು ಆತನನ್ನು ಬಹಿಷ್ಕರಿಸಬೇಕು ಎಂಬ ಕೂಗು ಕೇಳಿ ಬಂದ ಹಿನ್ನೆಲೆ ಈ ರೀತಿ ಉತ್ತರಿಸಿದ್ದಾರೆ.
ಈ ಸಂಬಂಧ ಮಾತನಾಡಿರುವ ಅವರು, ರೇಣುಕಾಸ್ವಾಮಿ ಕುಟುಂಬಕ್ಕೆ ನಮ್ಮ ಸಾಂತ್ವಾನಗಳು. ಚಲನಚಿತ್ರ ಮಂಡಳಿ ಸುಮ್ಮನಿದೆ ಎಂದು ಯಾರೂ ಊಹಿಸಬೇಡಿ. ಇದನ್ನು ನಾವು ಒಪ್ಪುವುದಿಲ್ಲ. ಬೆಂಗಳೂರು ಕಮಿಷನರ್ ಅವರು ಈ ಪ್ರಕಣದಲ್ಲಿ ಕಾನೂನಾತ್ಮ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಹೊರ ತರುವುದಾಗಿ ಹೇಳಿದ್ದಾರೆ. ಈ ಪ್ರಕಣದಲ್ಲಿ ತಪ್ಪಿತಸ್ಥರ ವಿರದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದು ಸುರೇಶ್ ಹೇಳಿದರು.
ಪೊಲೀಸ್ ತನಿಖೆ ನಡೆಸಿ ಚಾರ್ಜ್ ಶೀಟ್ ಸಲ್ಲಿಸುವವರೆಗೂ ಆರೋಪಿ ಯಾರು ಎಂದು ಪತ್ತೆಯಾಗುವುದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿ ಚಾರ್ಜ್ಶಿಟ್ ಸಲ್ಲಿಸಿದ ಬಳಿಕ ನಾವು ಕಲಾವಿದರ ಸಂಘದೊಂದಿಗೆ ಸಭೆ ಕರೆದು ಬಳಿಕ ತೀರ್ಮಾನ ಮಾಡಲಾಗುವುದು. ಕಾನೂನಿನ ಮುಂದೆ ಯಾರು ದೊಡ್ಡವರಲ್ಲ ಇಂತಹ ಪ್ರಕರಣಗಳಿಂದ ಕನ್ನಡ ಚಿತ್ರರಂಗದ ಖ್ಯಾತಿ ಕುಗ್ಗುತ್ತಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದು ಅಧ್ಯಕ್ಷ ಸುರೇಶ್ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…