ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಕೊಲೆ ಪ್ರಕಣಕ್ಕೆ ಸಂಬಂಧಿಸಿದಂತೆ ಬಂಧನವಾಗಿರುವ ಕನ್ನಡದ ಖ್ಯಾತ ನಟ ದರ್ಶನ್ ಅವರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಕಲಾವಿದರ ಸಂಘದ ಜೊತೆಗೆ ಚರ್ಚಿಸಿ ಬಳಿಕ ತೀರ್ಮಾನಿಸಲಾಗುವುದು ಎಂದು ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್ಸಿಸಿ) ಅಧ್ಯಕ್ಷ ಎನ್.ಎಂ ಸುರೇಶ್ ಬುಧವಾರ (ಜೂನ್.12) ಹೇಳಿದ್ದಾರೆ.
ಕೊಲೆ ಪ್ರಕರಣ ಆರೋಪಿ ದರ್ಶನ್ ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಕೆಎಫ್ಸಿಸಿ ಯನ್ನು ಒತ್ತಾಯಿಸಿದೆ. ದರ್ಶನ್ ಸಿನಿಮಾ ಬಿಡುಗಡೆ ಮಾಡಬಾರದು ಆತನನ್ನು ಬಹಿಷ್ಕರಿಸಬೇಕು ಎಂಬ ಕೂಗು ಕೇಳಿ ಬಂದ ಹಿನ್ನೆಲೆ ಈ ರೀತಿ ಉತ್ತರಿಸಿದ್ದಾರೆ.
ಈ ಸಂಬಂಧ ಮಾತನಾಡಿರುವ ಅವರು, ರೇಣುಕಾಸ್ವಾಮಿ ಕುಟುಂಬಕ್ಕೆ ನಮ್ಮ ಸಾಂತ್ವಾನಗಳು. ಚಲನಚಿತ್ರ ಮಂಡಳಿ ಸುಮ್ಮನಿದೆ ಎಂದು ಯಾರೂ ಊಹಿಸಬೇಡಿ. ಇದನ್ನು ನಾವು ಒಪ್ಪುವುದಿಲ್ಲ. ಬೆಂಗಳೂರು ಕಮಿಷನರ್ ಅವರು ಈ ಪ್ರಕಣದಲ್ಲಿ ಕಾನೂನಾತ್ಮ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಹೊರ ತರುವುದಾಗಿ ಹೇಳಿದ್ದಾರೆ. ಈ ಪ್ರಕಣದಲ್ಲಿ ತಪ್ಪಿತಸ್ಥರ ವಿರದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದು ಸುರೇಶ್ ಹೇಳಿದರು.
ಪೊಲೀಸ್ ತನಿಖೆ ನಡೆಸಿ ಚಾರ್ಜ್ ಶೀಟ್ ಸಲ್ಲಿಸುವವರೆಗೂ ಆರೋಪಿ ಯಾರು ಎಂದು ಪತ್ತೆಯಾಗುವುದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿ ಚಾರ್ಜ್ಶಿಟ್ ಸಲ್ಲಿಸಿದ ಬಳಿಕ ನಾವು ಕಲಾವಿದರ ಸಂಘದೊಂದಿಗೆ ಸಭೆ ಕರೆದು ಬಳಿಕ ತೀರ್ಮಾನ ಮಾಡಲಾಗುವುದು. ಕಾನೂನಿನ ಮುಂದೆ ಯಾರು ದೊಡ್ಡವರಲ್ಲ ಇಂತಹ ಪ್ರಕರಣಗಳಿಂದ ಕನ್ನಡ ಚಿತ್ರರಂಗದ ಖ್ಯಾತಿ ಕುಗ್ಗುತ್ತಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದು ಅಧ್ಯಕ್ಷ ಸುರೇಶ್ ಅಭಿಪ್ರಾಯಪಟ್ಟಿದ್ದಾರೆ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…