ಮನರಂಜನೆ

ಕಲಾವಿದ ಸಂಘದ ಜೊತೆಗಿನ ಚರ್ಚೆ ಬಳಿಕ ದರ್ಶನ್‌ ವಿರುದ್ಧ ಕ್ರಮ: ಎನ್‌.ಎಂ ಸುರೇಶ್‌

ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಕೊಲೆ ಪ್ರಕಣಕ್ಕೆ ಸಂಬಂಧಿಸಿದಂತೆ ಬಂಧನವಾಗಿರುವ ಕನ್ನಡದ ಖ್ಯಾತ ನಟ ದರ್ಶನ್‌ ಅವರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಕಲಾವಿದರ ಸಂಘದ ಜೊತೆಗೆ ಚರ್ಚಿಸಿ ಬಳಿಕ ತೀರ್ಮಾನಿಸಲಾಗುವುದು ಎಂದು ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ಅಧ್ಯಕ್ಷ ಎನ್‌.ಎಂ ಸುರೇಶ್‌ ಬುಧವಾರ (ಜೂನ್‌.12) ಹೇಳಿದ್ದಾರೆ.

ಕೊಲೆ ಪ್ರಕರಣ ಆರೋಪಿ ದರ್ಶನ್‌ ಅವರನ್ನು ಚಿತ್ರರಂಗದಿಂದ ಬ್ಯಾನ್‌ ಮಾಡುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಕೆಎಫ್‌ಸಿಸಿ ಯನ್ನು ಒತ್ತಾಯಿಸಿದೆ. ದರ್ಶನ್‌ ಸಿನಿಮಾ ಬಿಡುಗಡೆ ಮಾಡಬಾರದು ಆತನನ್ನು ಬಹಿಷ್ಕರಿಸಬೇಕು ಎಂಬ ಕೂಗು ಕೇಳಿ ಬಂದ ಹಿನ್ನೆಲೆ ಈ ರೀತಿ ಉತ್ತರಿಸಿದ್ದಾರೆ.

ಈ ಸಂಬಂಧ ಮಾತನಾಡಿರುವ ಅವರು, ರೇಣುಕಾಸ್ವಾಮಿ ಕುಟುಂಬಕ್ಕೆ ನಮ್ಮ ಸಾಂತ್ವಾನಗಳು. ಚಲನಚಿತ್ರ ಮಂಡಳಿ ಸುಮ್ಮನಿದೆ ಎಂದು ಯಾರೂ ಊಹಿಸಬೇಡಿ. ಇದನ್ನು ನಾವು ಒಪ್ಪುವುದಿಲ್ಲ. ಬೆಂಗಳೂರು ಕಮಿಷನರ್‌ ಅವರು ಈ ಪ್ರಕಣದಲ್ಲಿ ಕಾನೂನಾತ್ಮ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಹೊರ ತರುವುದಾಗಿ ಹೇಳಿದ್ದಾರೆ. ಈ ಪ್ರಕಣದಲ್ಲಿ ತಪ್ಪಿತಸ್ಥರ ವಿರದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದು ಸುರೇಶ್‌ ಹೇಳಿದರು.

ಪೊಲೀಸ್‌ ತನಿಖೆ ನಡೆಸಿ ಚಾರ್ಜ್‌ ಶೀಟ್‌ ಸಲ್ಲಿಸುವವರೆಗೂ ಆರೋಪಿ ಯಾರು ಎಂದು ಪತ್ತೆಯಾಗುವುದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿ ಚಾರ್ಜ್‌ಶಿಟ್‌ ಸಲ್ಲಿಸಿದ ಬಳಿಕ ನಾವು ಕಲಾವಿದರ ಸಂಘದೊಂದಿಗೆ ಸಭೆ ಕರೆದು ಬಳಿಕ ತೀರ್ಮಾನ ಮಾಡಲಾಗುವುದು. ಕಾನೂನಿನ ಮುಂದೆ ಯಾರು ದೊಡ್ಡವರಲ್ಲ ಇಂತಹ ಪ್ರಕರಣಗಳಿಂದ ಕನ್ನಡ ಚಿತ್ರರಂಗದ ಖ್ಯಾತಿ ಕುಗ್ಗುತ್ತಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದು ಅಧ್ಯಕ್ಷ ಸುರೇಶ್‌ ಅಭಿಪ್ರಾಯಪಟ್ಟಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

15 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

15 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

15 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

18 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

18 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

18 hours ago