ಮನರಂಜನೆ

ಮದ್ದಾನೆಯಂತಹ ನಾಯಕನ ‘ಕರಿಕಾಡ’ ಚಿತ್ರದ ಟೀಸರ್ ಬಿಡುಗಡೆ

ಇತ್ತೀಚಿನ ದಿನಗಳಲ್ಲಿ ಕಾಡುಗಳಲ್ಲಿ ಚಿತ್ರೀಕರಣ ಮಾಡುವ ಮತ್ತು ಕಾಡು ಸಹ ಪ್ರಮುಖ ಪಾತ್ರವಹಿಸಿರುವ ಹಲವು ಚಿತ್ರಗಳು ಬಿಡುಗಡೆಯಾಗುತ್ತಿವೆ. ಆ ಸಾಲಿಗೆ ಇದೀಗ ‘ಕರಿಕಾಡ’ ಎಂಬ ಚಿತ್ರ ಸಹ ಸೇರಿದೆ. ಈ ಚಿತ್ರದ ಮೂಲಕ ಕಾಡ ನಟರಾಜ್‍ ಚಿತ್ರರಂಗಕ್ಕೆ ಹೀರೋ ಆಗಿ ಎಂಟ್ರಿ ಕೊಡುತ್ತಿದ್ದಾರೆ. ಈ ಚಿತ್ರದ ಟೀಸರ್ ಇತ್ತೀಚೆಗೆ MRT Music ಚಾನಲ್‍ನಲ್ಲಿ ಬಿಡುಗಡೆಯಾಗಿದೆ. ಸಂತೋಷ್‍ ಆನಂದರಾಮ್‍ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

‘ಕರಿಕಾಡ’ ಚಿತ್ರವನ್ನು ರಿದ್ಧಿ ಎಂಟರ್‌ಟೇನ್‍ಮೆಂಟ್ಸ್ ಬ್ಯಾನರ್ ಅಡಿ ನಟರಾಜ್‍ ಪತ್ನಿ ದೀಪ್ತಿ ದಾಮೋದರ್ ನಿರ್ಮಿಸುತ್ತಿದ್ದಾರೆ. ಗಿಲ್ಲಿ ವೆಂಕಟೇಶ್‍ ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ಅತಿಶಯ್‍ ಜೈನ್ ಸಂಗೀತ ಸಂಯೋಜಿಸಿದರೆ, ಶಶಾಂಕ್‍ ಶೇಷಗಿರಿ ಹಿನ್ನೆಲೆ ಸಂಗೀತವಿದೆ.

‘ಕರಿಕಾಡ’ ಎಂದರೇನು? ಈ ಪ್ರಶ್ನೆಗೆ ಉತ್ತರಿಸುವ ನಿರ್ದೇಶಕ ಗಿಲ್ಲಿ ವೆಂಕಟೇಶ್‍, ಕರಿ ಎಂದರೆ ಆನೆ, ಕಾಡ ಎಂದರೆ ನಾಯಕನ ಹೆಸರು. ಇಲ್ಲಿ ನಾಯಕ ಕಾಡುಹಂದಿ ಬೇಟೆ ಆಡುತ್ತಿರುತ್ತಾನೆ. ಮದ್ದಾನೆ ತರಹದ ಪಾತ್ರ ಅವನದು. ಮದ ಹಿಡಿದ ಆನೆಯನ್ನು ಹಿಡಿಯುವುದು ಎಷ್ಟು ಕಷ್ಟವೋ, ಅದೇ ರೀತಿ ಅವನನ್ನು ಹಿಡಿಯುವುದು ಅಷ್ಟೇ ಕಷ್ಟ’ ಎಂದರು.

ಇದಕ್ಕೂ ಮೊದಲು ಗಿಲ್ಲಿ ವೆಂಕಟೇಶ್‍, ‘ತಾಲಟ್ಟಿ’ ಎಂಬ ಹಾರರ್ ಚಿತ್ರ ಮಾಡಿದ್ದರಂತೆ. ಅದು ಇನ್ನೂ ಬಿಡುಗಡೆ ಆಗದಿರುವುದರಿಂದ, ‘ಕರಿಕಾಡ’ ಅವರ ಮೊದಲ ಚಿತ್ರವೆನ್ನಬಹುದು. ಕಾಡಿನಲ್ಲೇ ಹೆಚ್ಚಾಗಿ ಕಥೆ ಸಾಗುವುದರಿಂದ ಈ ಚಿತ್ರಕ್ಕೆ ಕಳಸ, ಚಿಕ್ಕಮಗಳೂರು, ಬೆಂಗಳೂರು ಮುಂತಾದ ಕಡೆ ಚಿತ್ರೀಕರಣ ಮಾಡಲಾಗಿದೆಯಂತೆ. ನಾಯಕ ಕೆಲಸ ಮಾಡುತ್ತಿರುವುದರಿಂದ, ಶನಿವಾರ ಮತ್ತು ಭಾನುವಾರಗಳ ಜೊತೆಗೆ ರಜಾದಿನಗಳಲ್ಲಿ ಚಿತ್ರೀಕರಣ ನಡೆಸಲಾಗಿದೆಯಂತೆ.

ಚಿತ್ರದ ನಾಯಕಿ ಯಾರು? ಎಂಬ ಪ್ರಶ್ನೆಗೆ ಉತ್ತರಿಸದ ಅವರು, ‘ಚಿತ್ರದಲ್ಲಿ ನಾಯಕಿಗೂ ಒಂದು ಪ್ರಮುಖ ಪಾತ್ರವಿದೆ. ಸದ್ಯಕ್ಕೆ ಅವರನ್ನು ಪರಿಚಯಿಸಿಲ್ಲ. ನಾಯಕನ ತರಹ ನಾಯಕಿಗೂ ಒಂದು ಟೀಸರ್ ಮಾಡಿ ಪರಿಚಯಿಸಲಾಗುತ್ತದೆ. ಚಿತ್ರ ಸಂಪೂರ್ಣವಾಗಿದ್ದು, ಸದ್ಯದಲ್ಲೇ ಸೆನ್ಸಾರ್ ಆಗಲಿದೆ. ಇದೇ ವರ್ಷ ಚಿತ್ರ ಬಿಡುಗಡೆ ಆಗುತ್ತದೆ’ ಎಂದರು.

ಕಾಡ ನಟರಾಜ್‍, ಬಿಗ್‍ ಬಾಸ್ಕೆಟ್‍ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರಂತೆ. ‘ಕೆಲಸದ ಜೊತೆಗೆ ಬೇರೆ ಏನಾದರೂ ಮಾಡಬೇಕು ಅನಿಸುತ್ತಿತ್ತು. ಮೊದಲಿನಿಂದಲೂ ನಟನೆಯ ಬಗ್ಗೆ ಆಸಕ್ತಿ ಇತ್ತು. ಹಾಗಾಗಿ ಕೆಲಸದ ಜೊತೆಗೆ ಈ ಚಿತ್ರ ಮಾಡಿದೆ. ವೀಕೆಂಡ್‍ ಮತ್ತು ರಜಾ ದಿನಗಳಲ್ಲಿ ಚಿತ್ರೀಕರಣ ಮಾಡಿ ಮುಗಿಸಿದ್ದೇವೆ. ಸುಮಾರು 60 ದಿನಗಳ ಕಾಲ ಚಿತ್ರೀಕರಣ ಮಾಡಿದ್ದೇವೆ. ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣವನ್ನು ಸತತವಾಗಿ 48 ಗಂಟೆಗಳ ಕಾಲ ಮಾಡಿದ್ದೇವೆ’ ಎಂದರು.

‘ಕರಿಕಾಡ’ ಚಿತ್ರದಲ್ಲಿ ನಟರಾಜ್ ಜೊತೆಗೆ ಯಶ್‍ ಶೆಟ್ಟಿ, ಬಲ ರಾಜವಾಡಿ, ವಿಜಯ್‍ ಚೆಂಡೂರ್, ಕರಿಸುಬ್ಬು, ಚಂದ್ರಪ್ರಭಾ, ರಾಕೇಶ್‍ ಪೂಜಾರಿ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಜೀವನ್‍ ಗೌಡ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿರುವ ಕಾಮಗಾರಿ ವಿರೋಧಿಸಿ ಮುಂದುವರಿದ ಪ್ರತಿಭಟನೆ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ತೋಡಿಕೆ ಮತ್ತು ನಿರ್ಮಾಣ ಕಾರ್ಯಗಳ ವಿರುದ್ಧ ಮೈಸೂರಿನ ಹಲವು ನಾಯಕರು, ಚಿಂತಿತ ನಾಗರಿಕರು…

5 mins ago

ಸದನದಲ್ಲಿ ಅಗೌರವ ತೋರಿದ ಶಾಸಕರ ವಿರುದ್ಧ ಕ್ರಮ ಆಗಲಿ: ಆರ್.‌ಅಶೋಕ್‌

ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್‌ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ.…

12 mins ago

ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ…

43 mins ago

ರಾಜ್ಯಪಾಲರು ಮಾಡಿದ 3 ವಾಕ್ಯಗಳ ಭಾಷಣದ ಅಂಶಗಳಿವು.!

ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್‌ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…

2 hours ago

ದಾವಣಗೆರೆ| ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವಿಗೆ ಕಾರಣ ಬಹಿರಂಗ

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…

2 hours ago

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…

3 hours ago