ಮನರಂಜನೆ

ಮದ್ದಾನೆಯಂತಹ ನಾಯಕನ ‘ಕರಿಕಾಡ’ ಚಿತ್ರದ ಟೀಸರ್ ಬಿಡುಗಡೆ

ಇತ್ತೀಚಿನ ದಿನಗಳಲ್ಲಿ ಕಾಡುಗಳಲ್ಲಿ ಚಿತ್ರೀಕರಣ ಮಾಡುವ ಮತ್ತು ಕಾಡು ಸಹ ಪ್ರಮುಖ ಪಾತ್ರವಹಿಸಿರುವ ಹಲವು ಚಿತ್ರಗಳು ಬಿಡುಗಡೆಯಾಗುತ್ತಿವೆ. ಆ ಸಾಲಿಗೆ ಇದೀಗ ‘ಕರಿಕಾಡ’ ಎಂಬ ಚಿತ್ರ ಸಹ ಸೇರಿದೆ. ಈ ಚಿತ್ರದ ಮೂಲಕ ಕಾಡ ನಟರಾಜ್‍ ಚಿತ್ರರಂಗಕ್ಕೆ ಹೀರೋ ಆಗಿ ಎಂಟ್ರಿ ಕೊಡುತ್ತಿದ್ದಾರೆ. ಈ ಚಿತ್ರದ ಟೀಸರ್ ಇತ್ತೀಚೆಗೆ MRT Music ಚಾನಲ್‍ನಲ್ಲಿ ಬಿಡುಗಡೆಯಾಗಿದೆ. ಸಂತೋಷ್‍ ಆನಂದರಾಮ್‍ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

‘ಕರಿಕಾಡ’ ಚಿತ್ರವನ್ನು ರಿದ್ಧಿ ಎಂಟರ್‌ಟೇನ್‍ಮೆಂಟ್ಸ್ ಬ್ಯಾನರ್ ಅಡಿ ನಟರಾಜ್‍ ಪತ್ನಿ ದೀಪ್ತಿ ದಾಮೋದರ್ ನಿರ್ಮಿಸುತ್ತಿದ್ದಾರೆ. ಗಿಲ್ಲಿ ವೆಂಕಟೇಶ್‍ ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ಅತಿಶಯ್‍ ಜೈನ್ ಸಂಗೀತ ಸಂಯೋಜಿಸಿದರೆ, ಶಶಾಂಕ್‍ ಶೇಷಗಿರಿ ಹಿನ್ನೆಲೆ ಸಂಗೀತವಿದೆ.

‘ಕರಿಕಾಡ’ ಎಂದರೇನು? ಈ ಪ್ರಶ್ನೆಗೆ ಉತ್ತರಿಸುವ ನಿರ್ದೇಶಕ ಗಿಲ್ಲಿ ವೆಂಕಟೇಶ್‍, ಕರಿ ಎಂದರೆ ಆನೆ, ಕಾಡ ಎಂದರೆ ನಾಯಕನ ಹೆಸರು. ಇಲ್ಲಿ ನಾಯಕ ಕಾಡುಹಂದಿ ಬೇಟೆ ಆಡುತ್ತಿರುತ್ತಾನೆ. ಮದ್ದಾನೆ ತರಹದ ಪಾತ್ರ ಅವನದು. ಮದ ಹಿಡಿದ ಆನೆಯನ್ನು ಹಿಡಿಯುವುದು ಎಷ್ಟು ಕಷ್ಟವೋ, ಅದೇ ರೀತಿ ಅವನನ್ನು ಹಿಡಿಯುವುದು ಅಷ್ಟೇ ಕಷ್ಟ’ ಎಂದರು.

ಇದಕ್ಕೂ ಮೊದಲು ಗಿಲ್ಲಿ ವೆಂಕಟೇಶ್‍, ‘ತಾಲಟ್ಟಿ’ ಎಂಬ ಹಾರರ್ ಚಿತ್ರ ಮಾಡಿದ್ದರಂತೆ. ಅದು ಇನ್ನೂ ಬಿಡುಗಡೆ ಆಗದಿರುವುದರಿಂದ, ‘ಕರಿಕಾಡ’ ಅವರ ಮೊದಲ ಚಿತ್ರವೆನ್ನಬಹುದು. ಕಾಡಿನಲ್ಲೇ ಹೆಚ್ಚಾಗಿ ಕಥೆ ಸಾಗುವುದರಿಂದ ಈ ಚಿತ್ರಕ್ಕೆ ಕಳಸ, ಚಿಕ್ಕಮಗಳೂರು, ಬೆಂಗಳೂರು ಮುಂತಾದ ಕಡೆ ಚಿತ್ರೀಕರಣ ಮಾಡಲಾಗಿದೆಯಂತೆ. ನಾಯಕ ಕೆಲಸ ಮಾಡುತ್ತಿರುವುದರಿಂದ, ಶನಿವಾರ ಮತ್ತು ಭಾನುವಾರಗಳ ಜೊತೆಗೆ ರಜಾದಿನಗಳಲ್ಲಿ ಚಿತ್ರೀಕರಣ ನಡೆಸಲಾಗಿದೆಯಂತೆ.

ಚಿತ್ರದ ನಾಯಕಿ ಯಾರು? ಎಂಬ ಪ್ರಶ್ನೆಗೆ ಉತ್ತರಿಸದ ಅವರು, ‘ಚಿತ್ರದಲ್ಲಿ ನಾಯಕಿಗೂ ಒಂದು ಪ್ರಮುಖ ಪಾತ್ರವಿದೆ. ಸದ್ಯಕ್ಕೆ ಅವರನ್ನು ಪರಿಚಯಿಸಿಲ್ಲ. ನಾಯಕನ ತರಹ ನಾಯಕಿಗೂ ಒಂದು ಟೀಸರ್ ಮಾಡಿ ಪರಿಚಯಿಸಲಾಗುತ್ತದೆ. ಚಿತ್ರ ಸಂಪೂರ್ಣವಾಗಿದ್ದು, ಸದ್ಯದಲ್ಲೇ ಸೆನ್ಸಾರ್ ಆಗಲಿದೆ. ಇದೇ ವರ್ಷ ಚಿತ್ರ ಬಿಡುಗಡೆ ಆಗುತ್ತದೆ’ ಎಂದರು.

ಕಾಡ ನಟರಾಜ್‍, ಬಿಗ್‍ ಬಾಸ್ಕೆಟ್‍ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರಂತೆ. ‘ಕೆಲಸದ ಜೊತೆಗೆ ಬೇರೆ ಏನಾದರೂ ಮಾಡಬೇಕು ಅನಿಸುತ್ತಿತ್ತು. ಮೊದಲಿನಿಂದಲೂ ನಟನೆಯ ಬಗ್ಗೆ ಆಸಕ್ತಿ ಇತ್ತು. ಹಾಗಾಗಿ ಕೆಲಸದ ಜೊತೆಗೆ ಈ ಚಿತ್ರ ಮಾಡಿದೆ. ವೀಕೆಂಡ್‍ ಮತ್ತು ರಜಾ ದಿನಗಳಲ್ಲಿ ಚಿತ್ರೀಕರಣ ಮಾಡಿ ಮುಗಿಸಿದ್ದೇವೆ. ಸುಮಾರು 60 ದಿನಗಳ ಕಾಲ ಚಿತ್ರೀಕರಣ ಮಾಡಿದ್ದೇವೆ. ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣವನ್ನು ಸತತವಾಗಿ 48 ಗಂಟೆಗಳ ಕಾಲ ಮಾಡಿದ್ದೇವೆ’ ಎಂದರು.

‘ಕರಿಕಾಡ’ ಚಿತ್ರದಲ್ಲಿ ನಟರಾಜ್ ಜೊತೆಗೆ ಯಶ್‍ ಶೆಟ್ಟಿ, ಬಲ ರಾಜವಾಡಿ, ವಿಜಯ್‍ ಚೆಂಡೂರ್, ಕರಿಸುಬ್ಬು, ಚಂದ್ರಪ್ರಭಾ, ರಾಕೇಶ್‍ ಪೂಜಾರಿ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಜೀವನ್‍ ಗೌಡ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

2 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

3 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

4 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

9 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

9 hours ago